AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ ಬಾಸ್​ ಮನೆಯಲ್ಲಿ ಶೀಘ್ರವೇ ನಡೆಯಲಿದೆ ಡಬಲ್​ ಎಲಿಮಿನೇಷನ್​?

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಇನ್ನೊಂದು ವಾರದಲ್ಲಿ ಬಿಗ್​ ಬಾಸ್​ ಪೂರ್ಣಗೊಳ್ಳಬೇಕು.

ಬಿಗ್​​ ಬಾಸ್​ ಮನೆಯಲ್ಲಿ ಶೀಘ್ರವೇ ನಡೆಯಲಿದೆ ಡಬಲ್​ ಎಲಿಮಿನೇಷನ್​?
ಕಿಚ್ಚ ಸುದೀಪ್
TV9 Web
| Edited By: |

Updated on: Jul 18, 2021 | 8:45 AM

Share

‘ಬಿಗ್​ ಬಾಸ್​ ಸೀಸನ್​ 8’ ಅಂತಿಮ ಘಟ್ಟ ತಲುಪಿದೆ. ಬಿಗ್​ ಬಾಸ್​ ಮನೆಯಲ್ಲಿ 10 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇವರಲ್ಲಿ ಓರ್ವ ಸ್ಪರ್ಧಿ ಭಾನುವಾರ (ಜುಲೈ 18) ಹೊರ ಹೋಗುವುದು ಖಚಿತವಾಗಿದೆ. ಆ ನಂತರ ಮನೆಯಲ್ಲಿ ಉಳಿಯೋದು 9 ಸ್ಪರ್ಧಿಗಳು. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಇನ್ನೊಂದು ವಾರದಲ್ಲಿ ಬಿಗ್​ ಬಾಸ್​ ಪೂರ್ಣಗೊಳ್ಳಬೇಕು. ಮೂಲಗಳ ಪ್ರಕಾರ ಇನ್ನೂ ಸ್ವಲ್ಪ ವಾರ ಬಿಗ್​ ಬಾಸ್​ ಮುಂದುವರಿಯಲಿದೆ ಎನ್ನಾಗುತ್ತಿದೆ.

ಪ್ರತಿ ಸೀಸನ್​ನಲ್ಲೂ ಕೆಲ ಸಾಮಾನ್ಯ ವಿಚಾರಗಳು ಬಿಗ್ ಬಾಸ್ ಮನೆಯಲ್ಲಿ ಕಂಡುಬರುತ್ತವೆ. ಅದರಲ್ಲಿ ವೈಲ್ಡ್​ ಕಾರ್ಡ್​, ಡಬಲ್​ ಎಲಿಮಿನೇಷನ್​ ಕೂಡ ಒಂದು. ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಮೂರು ಜನರ ವೈಲ್ಡ್ ಕಾರ್ಡ್​ ಎಂಟ್ರಿ ಆಗಿದೆ. ಆದರೆ, ಈ ವರೆಗೆ ಡಬಲ್​ ಎಲಿಮಿನೇಷನ್​ ಆಗಿಲ್ಲ. ಅಲ್ಲದೆ, ದಿನಗಳು ಕಡಿಮೆ ಇದ್ದು, ಸ್ಪರ್ಧಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕೆ ಶೀಘ್ರವೇ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವಾರ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಶನಿವಾರದ ಎಪಿಸೋಡ್​ನಲ್ಲಿ ಅತಿ ಹೆಚ್ಚು ವೋಟ್ ಪಡೆದು ವೈಷ್ಣವಿ ಸೇವ್​ ಆಗಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ಶುಭಾ ಪೂಂಜಾ ಹಾಗೂ ಪ್ರಾಶಾಂತ್ ಸಂಬರಗಿ​ ನಡುವೆ ಒಬ್ಬರು ಎಲಿಮಿನೇಟ್​ ಆಗಲಿದ್ದಾರೆ. ಹೀಗಾಗಿ, ಈ ವಾರ ಡಬಲ್​ ಎಲಿಮಿನೇಷನ್​ ನಡೆಯುವುದಿಲ್ಲ.

ಈ ಎಲ್ಲಾ ಕಾರಣಗಳನ್ನು ಗಮನಿಸಿದರೆ ಮುಂದಿನವಾರ ಅಥವಾ ಅದಕ್ಕೂ ಮುಂದಿನ ವಾರ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ. ಸುದೀಪ್​ ಜತೆ ಒಟ್ಟಿಗೆ ವೇದಿಕೆ ಹಂಚಿಕೊಳ್ಳುವ ಆ ಇಬ್ಬರು ಸ್ಪರ್ಧಿಗಳು ಯಾರು ಎನ್ನುವುದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ