AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ನ ಈ ವಾರದ ಎಲಿಮಿನೇಷನ್​ನಲ್ಲಿ ಪ್ರಮುಖ ಕ್ಯಾಂಡಿಡೇಟ್​ ಔಟ್​?

ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಮನೆಯಲ್ಲಿ ಎರಡು ಟೀಂ ಮಾಡಿ 10 ಟಾಸ್ಕ್​ಗಳನ್ನು ನೀಡಲಾಗಿತ್ತು. 4  ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದಾರೆ.

ಕನ್ನಡ ಬಿಗ್​ ಬಾಸ್​ನ ಈ ವಾರದ ಎಲಿಮಿನೇಷನ್​ನಲ್ಲಿ ಪ್ರಮುಖ ಕ್ಯಾಂಡಿಡೇಟ್​ ಔಟ್​?
ಕಿಚ್ಚ ಸುದೀಪ್​
TV9 Web
| Edited By: |

Updated on: Jul 17, 2021 | 2:33 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನ ಮೂರನೇ ಎಲಿಮಿನೇಷನ್​ ಈ ವಾರ ನಡೆಯುತ್ತಿದೆ. ನಾಲ್ಕು ಸ್ಪರ್ಧಿಗಳು ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗಲಿದ್ದಾರೆ. ಈ ಮೂಲಕ ಮನೆಯ ಸ್ಪರ್ಧಿಗಳ ಸಂಖ್ಯೆ ಒಂಭತ್ತಕ್ಕೆ ಇಳಿಕೆ ಆಗಲಿದೆ. ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಈ ವಾರ ಬಿಗ್​ ಬಾಸ್​ ನಾಮಿನೇಷನ್​ಗೆ ಬೇರೆ ರೀತಿಯ ಮಾರ್ಗ ಅನುಸರಿಸಲಾಗಿತ್ತು. ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಮನೆಯಲ್ಲಿ ಎರಡು ಟೀಂ ಮಾಡಿ 10 ಟಾಸ್ಕ್​ಗಳನ್ನು ನೀಡಲಾಗಿತ್ತು. 4  ದಿನಗಳ ಕಾಲ ನಡೆದ ಟಾಸ್ಕ್​ನಲ್ಲಿ ಸೋತ ತಂಡದ ಸದಸ್ಯರು ನಾಮಿನೇಟ್​ ಆಗಿದ್ದಾರೆ.

ಈ ಬಾರಿ ಸೋತ ತಂಡದಲ್ಲಿದ್ದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಪಟ್ಟಿಯಲ್ಲಿದ್ದಾರೆ. ಈ ನಾಲ್ವರು ಕ್ಯಾಂಡಿಡೇಟ್​ಗಳು ಬಿಗ್​ ಬಾಸ್​ ಮನೆಯಲ್ಲಿ ಪ್ರಮುಖರು ಎನಿಸಿಕೊಂಡಿದ್ದಾರೆ. ಇವರಲ್ಲಿ ಒಬ್ಬರು ಈ ವಾರ ಔಟ್​ ಆಗುತ್ತಿದ್ದಾರೆ.

ವೈಷ್ಣವಿ ಗೌಡ ಬಿಗ್ ಬಾಸ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಟಾಪ್​ 5 ಲಿಸ್ಟ್​ನಲ್ಲಿ ಅವರನ್ನು ನೋಡಬೇಕು ಎನ್ನುವುದು ಅಭಿಮಾನಿಗಳ ಇಚ್ಛೆ. ಹೀಗಾಗಿ, ಅವರಿಗೆ ಹೆಚ್ಚು ವೋಟ್​ ಬಿದ್ದೇ ಬೀಳುತ್ತದೆ. ಹೀಗಾಗಿ, ಈ ವಾರ ಮನೆಯಿಂದ ಹೊರ ಹೋಗುವ ಸಾಧ್ಯತೆ ಕಡಿಮೆ. ಇನ್ನು, ಶುಭಾ ಪೂಂಜಾ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಅವರಿಗೆ ಹೆಚ್ಚಿನ ವೋಟ್​ ಬೀಳುವ ಸಾಧ್ಯತೆ ಇದೆ.

ಪ್ರಶಾಂತ್​ ಸಂಬರಗಿ ಇತ್ತೀಚೆಗೆ ತುಂಬಾನೇ ಬದಲಾಗಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಈ ವಾರ ಸೇವ್​ ಆಗಬಹುದು. ಕೊನೆಯಲ್ಲಿ ಉಳಿದು ಕೊಂಡಿದ್ದು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ಪ್ರಿಯಾಂಕಾ ತಿಮ್ಮೇಶ್​. ಇವರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರಹೋಗಬಹುದು ಎನ್ನುವ ಮಾತು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿದೆ.

ಇದನ್ನೂ ಓದಿ: Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ