AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸೋಮವಾರವೂ ಮುಂದುವರಿಯಲಿದೆ; ಭಾನುವಾರದ ಎಪಿಸೋಡ್​ನಲ್ಲಿತ್ತು ಟ್ವಿಸ್ಟ್​

ಕೊರೊನಾ ವೈರಸ್ ಕಾಟ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರ 14 ದಿನಗಳ ಲಾಕ್​ಡೌನ್​ ಘೋಷಣೆ ಮಾಡಿದೆ. ಮೇ 10ರಿಂದ 14 ದಿನಗಳ ಕಾಲ ಕರ್ನಾಟಕ ಬಂದ್​ ಆಗುತ್ತಿದೆ.

ಬಿಗ್​ ಬಾಸ್​ ಸೋಮವಾರವೂ ಮುಂದುವರಿಯಲಿದೆ; ಭಾನುವಾರದ ಎಪಿಸೋಡ್​ನಲ್ಲಿತ್ತು ಟ್ವಿಸ್ಟ್​
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on:May 10, 2021 | 12:14 PM

Share

ಸಾಮಾನ್ಯವಾಗಿ ಬಿಗ್​ ಬಾಸ್​ ಆರಂಭವಾಗುವುದು ಹಾಗೂ ಕೊನೆಯಾಗುವುದು ಭಾನುವಾರವೇ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಈ ಬಾರಿ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದ್ದರೂ ಭಾನುವಾರವೇ ಕೊನೆಯಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ, ಭಾನುವಾರದ ಎಪಿಸೋಡ್​ನಲ್ಲಿ ಟ್ವಿಸ್ಟ್​ ಒಂದನ್ನು ನೀಡಲಾಗಿದೆ. ಬಿಗ್​ ಬಾಸ್​ ಸೋಮವಾರವೂ ಮುಂದುವರಿಯಲಿದೆ. ಹಾಗಂತ ಶೂಟಿಂಗ್​ ಮುಂದುವರಿಯುತ್ತಿಲ್ಲ. ಭಾನುವಾರ (ಮೇ 9) ಶೂಟ್​ ಮಾಡಲಾದ ಎಪಿಸೋಡ್​ ಮೇ 10, 11 ಮತ್ತು 12ರಂದು ಪ್ರಸಾರವಾಗಲಿದೆ.

ಕೊರೊನಾ ವೈರಸ್ ಕಾಟ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರ 14 ದಿನಗಳ ಲಾಕ್​ಡೌನ್​ ಘೋಷಣೆ ಮಾಡಿದೆ. ಮೇ 10ರಿಂದ 14 ದಿನಗಳ ಕಾಲ ಕರ್ನಾಟಕ ಬಂದ್​ ಆಗುತ್ತಿದೆ. ಈ ಅವಧಿಯಲ್ಲಿ ಸಿನಿಮಾ, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣ ನಿಲ್ಲಲಿದೆ. ಇದರಿಂದ ಬಿಗ್​ ಬಾಸ್​ ಶೂಟಿಂಗ್​ ಭಾನುವಾರವೇ ಪೂರ್ಣಗೊಂಡಿದೆ.

ಹೌದು, ಭಾನುವಾರ ಶೂಟಿಂಗ್​ ನಡೆಸಿ ಬಿಗ್​ ಬಾಸ್​ ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ. ಆದರೆ, ಟಿವಿಯಲ್ಲಿ ಪ್ರಸಾರ ಮಾಡುವಾಗ ಕೊಂಚ ವಿಳಂಬ ಮಾಡಲಾಗಿದೆ. ಭಾನುವಾರ ಕೆಲವೇ ಕೆಲವು ವಿಚಾರಗಳನ್ನು ತೋರಿಸಲಾಗಿದೆ. ಮಂಗಳವಾರ ಮತ್ತು ಬುಧವಾರದ ಎಪಿಸೋಡ್​ನಲ್ಲಿ ಬಿಗ್​ ಬಾಸ್ ಸ್ಪರ್ಧಿಗಳು​ ಮನೆಯಿಂದ ಹೊರ ಹೋಗುವುದನ್ನು ತೋರಿಸಲಾಗುತ್ತದೆ.

ಭಾನುವಾರ ಸೀಸನ್​​ ಪೂರ್ಣಗೊಳ್ಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಹೀಗಾಗಿ ಎಲ್ಲರೂ ಟಿವಿ ಮುಂದೆ ಕುಳಿತಿದ್ದರು. ಆದರೆ, ಅರ್ಧಕ್ಕೆ ಎಪಿಸೋಡ್​ ಪೂರ್ಣಗೊಂಡಿದೆ. ಬುಧವಾರ ಅಂತಿಮವಾಗಿ ಬಿಗ್​ ಬಾಸ್​ ಮನೆಯಿಂದ ಸ್ಪರ್ಧಿಗಳು ಹೊರ ಹೋಗುವುದನ್ನು ತೋರಿಸಲಾಗುವುದು. ಇದಕ್ಕೂ ಮೊದಲು ಸ್ಪರ್ಧಿಗಳಿಗೆ ವಿಡಿಯೋ ಮೂಲಕ ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ವಿಡಿಯೋ ಮೂಲಕ ತಿಳಿಸಲಾಗುತ್ತದೆ.

2021ರ ಆರಂಭದಲ್ಲಿ ಕರ್ನಾಟಕದಲ್ಲಿ ಕೊರೊನಾ ವೈರಸ್​ ನಿಯಂತ್ರಣದಲ್ಲಿತ್ತು. ಈ ಕಾರಣಕ್ಕೆ ಕಲರ್ಸ್​ ಕನ್ನಡ ವಾಹಿನಿ ಬಿಗ್​ ಬಾಸ್ ಕನ್ನಡ​ ಸೀಸನ್​ 8 ಆರಂಭಿಸಿತ್ತು. ಫೆಬ್ರವರಿ 28ರಂದು ಸೀಸನ್​ 8 ಗ್ರ್ಯಾಂಡ್​ ಓಪನಿಂಗ್​ ಪಡೆದುಕೊಂಡಿತ್ತು. ಆದರೆ, ಮಾರ್ಚ್​​ ನಂತರದಲ್ಲಿ ಕೊರೊನಾ ಕೇಸ್​ ಮಿತಿಮೀರುತ್ತಿದೆ. ಹೀಗಾಗಿ, ಸರ್ಕಾರ ಕಠಿಣ ಲಾಕ್​ಡೌನ್​ ಘೋಷಣೆ ಮಾಡಿದೆ. ಇದರಿಂದ ಬಿಗ್​ ಬಾಸ್​ ಸೀಸನ್​ 8ಅನ್ನು ವಾಹಿನಿ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Published On - 10:47 pm, Sun, 9 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು