AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಧ್ಯರಾತ್ರಿ ನಾಗವಲ್ಲಿ ರೀತಿ ವರ್ತಿಸಿದ ನಿರ್ಮಲಾ! ವಿಚಿತ್ರ ವೇಷ ಕಂಡು ಬೆಚ್ಚಿ ಬಿತ್ತು ದೊಡ್ಮನೆ

ಬಿಗ್​ ಬಾಸ್​ ಮನೆಯಲ್ಲಿ ಈಗ ಹಾರರ್​ ವಾತಾವರಣ ನಿರ್ಮಾಣ ಆಗಿದೆ. ನಿರ್ಮಲಾ ಚೆನ್ನಪ್ಪ ಅವರ ವರ್ತನೆ ನೋಡಿ ಎಲ್ಲರೂ ಕಂಗಾಲಾಗಿದ್ದಾರೆ.

Bigg Boss Kannada: ಮಧ್ಯರಾತ್ರಿ ನಾಗವಲ್ಲಿ ರೀತಿ ವರ್ತಿಸಿದ ನಿರ್ಮಲಾ! ವಿಚಿತ್ರ ವೇಷ ಕಂಡು ಬೆಚ್ಚಿ ಬಿತ್ತು ದೊಡ್ಮನೆ
ನಿರ್ಮಲಾ ಚೆನ್ನಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Mar 05, 2021 | 8:22 PM

Share

ಬಿಗ್ ಬಾಸ್​ಗೆ ಹಲವು ಬಗೆಯ ವ್ಯಕ್ತಿತ್ವದವರು ಎಂಟ್ರಿ ನೀಡುತ್ತಾರೆ. ಅದರಲ್ಲೂ ಕೆಲವರ ವರ್ತನೆ ವಿಚಿತ್ರವಾಗಿರುತ್ತೆದೆ. ಈಗ ನಿರ್ಮಲಾ ಚೆನ್ನಪ್ಪ ಅವರು ಅದೇ ಹಾದಿ ಹಿಡಿದಿದ್ದಾರೆ. ನಡುರಾತ್ರಿಯಲ್ಲಿ ಅವರು ನಾಗವಲ್ಲಿ ರೀತಿ ಮಾಡುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣ ಆಗಿದೆ. ಕ್ಯಾಪ್ಟನ್​ ಶಮಂತ್​ ಬ್ರೋ ಗೌಡ ಕೂಡ ಹೆದರಿಕೊಂಡಿದ್ದಾರೆ.

ದಿನವಿಡೀ ತುಂಬಾ ಸಿಂಪಲ್​ ಆಗಿ ಬಟ್ಟೆ ಧರಿಸಿದ್ದ ನಿರ್ಮಲಾ ಚೆನ್ನಪ್ಪ ಅವರು ಮಧ್ಯರಾತ್ರಿ ಆಗುತ್ತಿದ್ದಂತೆಯೇ ಸೀರೆ ಧರಿಸಿದ್ದಾರೆ. ಅಷ್ಟೇ ಅಲ್ಲ, ಮೇಕಪ್​ ಮಾಡಿಕೊಂಡು ಕನ್ನಡಿ ಮುಂದೆ ನಿಂತಿದ್ದಾರೆ. ಅದೂ ಸಾಲದೆಂಬಂತೆ ಮೂಲೆಯಲ್ಲಿ ಕುಳಿತು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಿದ್ದಾರೆ! ಇದನ್ನು ನೋಡಿದ ಎಲ್ಲರೂ ಅಚ್ಚರಿಗೆ ಒಳಗಾಗಿದ್ದಾರೆ. ಮುಂದೇನಾಗುತ್ತೋ ಅಂತ ಭಯದ ವಾತಾವರಣ ನಿರ್ಮಾಣ ಆಗಿದೆ.

‘ನನಗೆ ತುಂಬ ಟೆನ್ಷನ್​ ಆಗ್ತಾ ಇದೆ. ತಲೆ ಕೆಡ್ತಾ ಇದೆ. ಸಡನ್​ ಆಗಿ ಅವರು ಸೀರೆ ಉಟ್ಟುಕೊಂಡಾಗ ನನಗೆ ಭಯ ಆಗಿಹೋಯ್ತು. ಮಲಗುವಾಗ ಡ್ರೆಸ್​ ಚೇಂಜ್​ ಮಾಡುತ್ತೇನೆ ಎಂದಿದ್ದರು. ಆದರೆ ಚೇಂಜ್​ ಮಾಡದೇ ಹಾಗೆಯೇ ಮಲಗಿದ್ದಾರೆ. ಅದಕ್ಕೆ ನನಗೆ ತುಂಬ ಭಯ ಆಗ್ತಾ ಇದೆ. ಎಲ್ಲರೂ ಆತಂಕಪಟ್ಟುಕೊಂಡಿದ್ದಾರೆ. ನನಗೆ ಏನು ಮಾಡಬೇಕು ಎಂಬುದು ಗೊತ್ತಾಗದೇ ಟೆನ್ಷನ್​ ಆಗುತ್ತಿದೆ’ ಎಂದು ಬಿಗ್​ ಬಾಸ್​ ಬಳಿ ಶಮಂತ್​ ಬ್ರೋ ಗೌಡ ಆತಂಕ ತೋಡಿಕೊಂಡಿದ್ದಾರೆ.

‘ನನಗೆ ಸೀರೆಯೇ ಇಷ್ಟ. ಇದರಲ್ಲೇ ಇರುತ್ತೇನೆ. ಚೆನ್ನಾಗಿ ಕಾಣುತ್ತಿದ್ದೇನೆ. ಮೂರು ದಿನದಿಂದ ಹೆಂಗೆಂಗೂ ಬಿದ್ದುಕೊಂಡಿದ್ದೆ’ ಎಂದು ಶಮಂತ್​ಗೆ ನಿರ್ಮಲಾ ಸಮಜಾಯಿಷಿ ನೀಡಿದ್ದಾರೆ. ಈ ಉತ್ತರದಿಂದ ಶಮಂತ್​ ಸಮಾಧಾನ ಆದಂತೆ ಕಾಣುತ್ತಿಲ್ಲ. ‘ದಿನದ 24 ಗಂಟೆ ಒಬ್ಬೊಬ್ಬರೆ ಮಾತನಾಡುತ್ತಾರೆ. ವೀಕ್ಷಕರ ಕಣ್ಣು ತನ್ನ ಕಡೆಗೆ ಬೀಳಲಿ ಎಂದು ರಾತ್ರಿ ಮೇಕಪ್​ ಮಾಡಿಕೊಂಡು ಬಂದಿದ್ದಾರೆ’ ಎಂದೆಲ್ಲ ಇತರೆ ಸ್ಪರ್ಧಿಗಳು ಗುಸುಗುಸು ಮಾತನಾಡಿಕೊಂಡಿದ್ದಾರೆ. ಮೂಲೆಯಲ್ಲಿ ಕುಳಿತುಕೊಂಡು, ‘ಇಲ್ಲಿ ನಾನು ಯಾರನ್ನೂ ಗೆಲ್ಲಲು ಬಂದಿಲ್ಲ. ನನ್ನನ್ನು ನಾನು ಗೆಲ್ಲಲು ಬಂದಿದ್ದೇನೆ’ ಎಂದು ನಿರ್ಮಲಾ ಒಬ್ಬರೇ ಮಾತನಾಡಿಕೊಂಡಿರುವುದರಿಂದ ಭಯದ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: Bigg Boss Kannada: ನಿರ್ಮಲಾಗೋಸ್ಕರ ಮನಸ್ಸು ಬದಲಾಯಿಸಿಕೊಂಡ ಪ್ರಶಾಂತ್​ ಸಂಬರಗಿ! ಇದು ಸಖತ್​ ಅನಿರೀಕ್ಷಿತ

Bigg Boss Kannada: ಎರಡನೇ ವಾರವೂ ಶಮಂತ್​ ಬ್ರೋ ಗೌಡ ಕ್ಯಾಪ್ಟನ್​ ಆಗಿದ್ದು ಹೇಗೆ? ಹೊತ್ತಿಕೊಂಡಿದೆ ಅಸಮಾಧಾನದ ಬೆಂಕಿ!

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ