AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: May 13, 2021 | 7:15 AM

Share

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಭಾನುವಾರ ನಡೆದ ವಿಶೇಷ ದಿನದ ಸಂಚಿಕೆಯನ್ನು ಕಲರ್ಸ್ ಕನ್ನಡ ವಾಹಿನಿ ಮೇ 11 ಹಾಗೂ 12ರಂದು ಪ್ರಸಾರ ಮಾಡಿದೆ. ಸೀಸನ್ ಅರ್ಧಕ್ಕೆ ನಿಲ್ಲುತ್ತಿರುವುದಕ್ಕೆ ಸ್ಪರ್ಧಿಗಳು ಮಾತ್ರವಲ್ಲ ವೀಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ. ಕೊನೆಯ ದಿನ ಸೀಸನ್ 8 ಮತ್ತೆ ಆರಂಭವಾಗುವ ಸೂಚನೆಯನ್ನು ಬಿಗ್ ಬಾಸ್ ನೀಡಿದೆ.

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಮೇ 9ರಂದು ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ. ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇರಲಿಲ್ಲ. ಕಿಚ್ಚ ಸುದೀಪ್ ವಾಯ್ಸ್ ಕೇಳಿ ಎಲ್ಲರೂ ಖುಷಿಪಟ್ಟಿದ್ದಾರೆ.

‘ಎಲ್ಲಾ ಕಷ್ಟದ ಸಮಯದಲ್ಲೂ ನಾವು ನೆನಪಿಟ್ಟುಕೊಳ್ಳುವ ಒಂದು ಮಾತಿದೆ. ಒಂದು ಸಲಕ್ಕೆ ಒಂದು ಹೆಜ್ಜೆ ಇಡಬೇಕು. ಅದನ್ನು ಯಾವಾಗಲೂ ನಿಲ್ಲಿಸಬಾರದು. ಈ ಪ್ರಯಾಣ ಪೂರ್ತಿಯಾಗಿಲ್ಲ ಎನ್ನುವ ಬೇಸರ ಬೇಡ. ಹಾಗೆ ನೋಡಿದರೆ ಯಾವ ಪ್ರಯಾಣಕ್ಕೂ ಕೊನೆ ಇಲ್ಲ. ಒಂದರ ಕೊನೆ ಇನ್ನೊಂದರ ಆರಂಭ ಎನ್ನುವುದು ನೆನಪಿರಲಿ. ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ’ ಎಂದು ಬಿಗ್ ಬಾಸ್ ಹೇಳಿದರು.

ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ ಎನ್ನುವ ಮಾತನ್ನು ಹೇಳುತ್ತಿದ್ದಂತೆ ಸ್ಪರ್ಧಿಗಳ ಕಿವಿ ನೆಟ್ಟಗಾಯಿತು. ಕೊರೊನಾ ಕಡಿಮೆ ಆದ ನಂತರದಲ್ಲಿ ಮತ್ತೆ ಬಿಗ್​ ಬಾಸ್​ ಆರಂಭಗೊಳ್ಳಲಿದೆಯೇ ಎನ್ನುವ ಪ್ರಶ್ನೆಯನ್ನು ಇದು ಹುಟ್ಟು ಹಾಕಿತು.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ