AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: May 13, 2021 | 7:15 AM

Share

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಭಾನುವಾರ ನಡೆದ ವಿಶೇಷ ದಿನದ ಸಂಚಿಕೆಯನ್ನು ಕಲರ್ಸ್ ಕನ್ನಡ ವಾಹಿನಿ ಮೇ 11 ಹಾಗೂ 12ರಂದು ಪ್ರಸಾರ ಮಾಡಿದೆ. ಸೀಸನ್ ಅರ್ಧಕ್ಕೆ ನಿಲ್ಲುತ್ತಿರುವುದಕ್ಕೆ ಸ್ಪರ್ಧಿಗಳು ಮಾತ್ರವಲ್ಲ ವೀಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ. ಕೊನೆಯ ದಿನ ಸೀಸನ್ 8 ಮತ್ತೆ ಆರಂಭವಾಗುವ ಸೂಚನೆಯನ್ನು ಬಿಗ್ ಬಾಸ್ ನೀಡಿದೆ.

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಮೇ 9ರಂದು ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ. ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇರಲಿಲ್ಲ. ಕಿಚ್ಚ ಸುದೀಪ್ ವಾಯ್ಸ್ ಕೇಳಿ ಎಲ್ಲರೂ ಖುಷಿಪಟ್ಟಿದ್ದಾರೆ.

‘ಎಲ್ಲಾ ಕಷ್ಟದ ಸಮಯದಲ್ಲೂ ನಾವು ನೆನಪಿಟ್ಟುಕೊಳ್ಳುವ ಒಂದು ಮಾತಿದೆ. ಒಂದು ಸಲಕ್ಕೆ ಒಂದು ಹೆಜ್ಜೆ ಇಡಬೇಕು. ಅದನ್ನು ಯಾವಾಗಲೂ ನಿಲ್ಲಿಸಬಾರದು. ಈ ಪ್ರಯಾಣ ಪೂರ್ತಿಯಾಗಿಲ್ಲ ಎನ್ನುವ ಬೇಸರ ಬೇಡ. ಹಾಗೆ ನೋಡಿದರೆ ಯಾವ ಪ್ರಯಾಣಕ್ಕೂ ಕೊನೆ ಇಲ್ಲ. ಒಂದರ ಕೊನೆ ಇನ್ನೊಂದರ ಆರಂಭ ಎನ್ನುವುದು ನೆನಪಿರಲಿ. ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ’ ಎಂದು ಬಿಗ್ ಬಾಸ್ ಹೇಳಿದರು.

ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ ಎನ್ನುವ ಮಾತನ್ನು ಹೇಳುತ್ತಿದ್ದಂತೆ ಸ್ಪರ್ಧಿಗಳ ಕಿವಿ ನೆಟ್ಟಗಾಯಿತು. ಕೊರೊನಾ ಕಡಿಮೆ ಆದ ನಂತರದಲ್ಲಿ ಮತ್ತೆ ಬಿಗ್​ ಬಾಸ್​ ಆರಂಭಗೊಳ್ಳಲಿದೆಯೇ ಎನ್ನುವ ಪ್ರಶ್ನೆಯನ್ನು ಇದು ಹುಟ್ಟು ಹಾಕಿತು.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ