AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 13, 2021 | 7:15 AM

Share

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಭಾನುವಾರ ನಡೆದ ವಿಶೇಷ ದಿನದ ಸಂಚಿಕೆಯನ್ನು ಕಲರ್ಸ್ ಕನ್ನಡ ವಾಹಿನಿ ಮೇ 11 ಹಾಗೂ 12ರಂದು ಪ್ರಸಾರ ಮಾಡಿದೆ. ಸೀಸನ್ ಅರ್ಧಕ್ಕೆ ನಿಲ್ಲುತ್ತಿರುವುದಕ್ಕೆ ಸ್ಪರ್ಧಿಗಳು ಮಾತ್ರವಲ್ಲ ವೀಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ. ಕೊನೆಯ ದಿನ ಸೀಸನ್ 8 ಮತ್ತೆ ಆರಂಭವಾಗುವ ಸೂಚನೆಯನ್ನು ಬಿಗ್ ಬಾಸ್ ನೀಡಿದೆ.

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಮೇ 9ರಂದು ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ. ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇರಲಿಲ್ಲ. ಕಿಚ್ಚ ಸುದೀಪ್ ವಾಯ್ಸ್ ಕೇಳಿ ಎಲ್ಲರೂ ಖುಷಿಪಟ್ಟಿದ್ದಾರೆ.

‘ಎಲ್ಲಾ ಕಷ್ಟದ ಸಮಯದಲ್ಲೂ ನಾವು ನೆನಪಿಟ್ಟುಕೊಳ್ಳುವ ಒಂದು ಮಾತಿದೆ. ಒಂದು ಸಲಕ್ಕೆ ಒಂದು ಹೆಜ್ಜೆ ಇಡಬೇಕು. ಅದನ್ನು ಯಾವಾಗಲೂ ನಿಲ್ಲಿಸಬಾರದು. ಈ ಪ್ರಯಾಣ ಪೂರ್ತಿಯಾಗಿಲ್ಲ ಎನ್ನುವ ಬೇಸರ ಬೇಡ. ಹಾಗೆ ನೋಡಿದರೆ ಯಾವ ಪ್ರಯಾಣಕ್ಕೂ ಕೊನೆ ಇಲ್ಲ. ಒಂದರ ಕೊನೆ ಇನ್ನೊಂದರ ಆರಂಭ ಎನ್ನುವುದು ನೆನಪಿರಲಿ. ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ’ ಎಂದು ಬಿಗ್ ಬಾಸ್ ಹೇಳಿದರು.

ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ ಎನ್ನುವ ಮಾತನ್ನು ಹೇಳುತ್ತಿದ್ದಂತೆ ಸ್ಪರ್ಧಿಗಳ ಕಿವಿ ನೆಟ್ಟಗಾಯಿತು. ಕೊರೊನಾ ಕಡಿಮೆ ಆದ ನಂತರದಲ್ಲಿ ಮತ್ತೆ ಬಿಗ್​ ಬಾಸ್​ ಆರಂಭಗೊಳ್ಳಲಿದೆಯೇ ಎನ್ನುವ ಪ್ರಶ್ನೆಯನ್ನು ಇದು ಹುಟ್ಟು ಹಾಕಿತು.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ