ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್
ಬಿಗ್ ಬಾಸ್​ ಕನ್ನಡ ಸೀಸನ್​ 8
Follow us
| Updated By: ಮದನ್​ ಕುಮಾರ್​

Updated on: May 13, 2021 | 7:15 AM

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಭಾನುವಾರ ನಡೆದ ವಿಶೇಷ ದಿನದ ಸಂಚಿಕೆಯನ್ನು ಕಲರ್ಸ್ ಕನ್ನಡ ವಾಹಿನಿ ಮೇ 11 ಹಾಗೂ 12ರಂದು ಪ್ರಸಾರ ಮಾಡಿದೆ. ಸೀಸನ್ ಅರ್ಧಕ್ಕೆ ನಿಲ್ಲುತ್ತಿರುವುದಕ್ಕೆ ಸ್ಪರ್ಧಿಗಳು ಮಾತ್ರವಲ್ಲ ವೀಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ. ಕೊನೆಯ ದಿನ ಸೀಸನ್ 8 ಮತ್ತೆ ಆರಂಭವಾಗುವ ಸೂಚನೆಯನ್ನು ಬಿಗ್ ಬಾಸ್ ನೀಡಿದೆ.

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಮೇ 9ರಂದು ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ. ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇರಲಿಲ್ಲ. ಕಿಚ್ಚ ಸುದೀಪ್ ವಾಯ್ಸ್ ಕೇಳಿ ಎಲ್ಲರೂ ಖುಷಿಪಟ್ಟಿದ್ದಾರೆ.

‘ಎಲ್ಲಾ ಕಷ್ಟದ ಸಮಯದಲ್ಲೂ ನಾವು ನೆನಪಿಟ್ಟುಕೊಳ್ಳುವ ಒಂದು ಮಾತಿದೆ. ಒಂದು ಸಲಕ್ಕೆ ಒಂದು ಹೆಜ್ಜೆ ಇಡಬೇಕು. ಅದನ್ನು ಯಾವಾಗಲೂ ನಿಲ್ಲಿಸಬಾರದು. ಈ ಪ್ರಯಾಣ ಪೂರ್ತಿಯಾಗಿಲ್ಲ ಎನ್ನುವ ಬೇಸರ ಬೇಡ. ಹಾಗೆ ನೋಡಿದರೆ ಯಾವ ಪ್ರಯಾಣಕ್ಕೂ ಕೊನೆ ಇಲ್ಲ. ಒಂದರ ಕೊನೆ ಇನ್ನೊಂದರ ಆರಂಭ ಎನ್ನುವುದು ನೆನಪಿರಲಿ. ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ’ ಎಂದು ಬಿಗ್ ಬಾಸ್ ಹೇಳಿದರು.

ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ ಎನ್ನುವ ಮಾತನ್ನು ಹೇಳುತ್ತಿದ್ದಂತೆ ಸ್ಪರ್ಧಿಗಳ ಕಿವಿ ನೆಟ್ಟಗಾಯಿತು. ಕೊರೊನಾ ಕಡಿಮೆ ಆದ ನಂತರದಲ್ಲಿ ಮತ್ತೆ ಬಿಗ್​ ಬಾಸ್​ ಆರಂಭಗೊಳ್ಳಲಿದೆಯೇ ಎನ್ನುವ ಪ್ರಶ್ನೆಯನ್ನು ಇದು ಹುಟ್ಟು ಹಾಕಿತು.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ