AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಭಾನುವಾರ ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಕಡಿಮೆ ಆದ ನಂತರ ಮತ್ತೆ ಮುಂದುವರಿಯಲಿದೆ ಸೀಸನ್ 8? ಕೊನೇ ದಿನ ಸೂಚನೆ ಕೊಟ್ರು ಬಿಗ್ ಬಾಸ್
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: May 13, 2021 | 7:15 AM

Share

ಕನ್ನಡ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಭಾನುವಾರ ನಡೆದ ವಿಶೇಷ ದಿನದ ಸಂಚಿಕೆಯನ್ನು ಕಲರ್ಸ್ ಕನ್ನಡ ವಾಹಿನಿ ಮೇ 11 ಹಾಗೂ 12ರಂದು ಪ್ರಸಾರ ಮಾಡಿದೆ. ಸೀಸನ್ ಅರ್ಧಕ್ಕೆ ನಿಲ್ಲುತ್ತಿರುವುದಕ್ಕೆ ಸ್ಪರ್ಧಿಗಳು ಮಾತ್ರವಲ್ಲ ವೀಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ. ಕೊನೆಯ ದಿನ ಸೀಸನ್ 8 ಮತ್ತೆ ಆರಂಭವಾಗುವ ಸೂಚನೆಯನ್ನು ಬಿಗ್ ಬಾಸ್ ನೀಡಿದೆ.

ಕೊರೊನಾ ವೈರಸ್ ಕಾರಣದಿಂದ ಬಿಗ್ ಬಾಸ್ ಅರ್ಧಕ್ಕೆ ನಿಂತಿದೆ. ಹೀಗಾಗಿ ಎಲ್ಲಾ 11 ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಮೇ 9ರಂದು ಏನೆಲ್ಲ ಆಯ್ತು ಎಂಬುದನ್ನು ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ. ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇರಲಿಲ್ಲ. ಕಿಚ್ಚ ಸುದೀಪ್ ವಾಯ್ಸ್ ಕೇಳಿ ಎಲ್ಲರೂ ಖುಷಿಪಟ್ಟಿದ್ದಾರೆ.

‘ಎಲ್ಲಾ ಕಷ್ಟದ ಸಮಯದಲ್ಲೂ ನಾವು ನೆನಪಿಟ್ಟುಕೊಳ್ಳುವ ಒಂದು ಮಾತಿದೆ. ಒಂದು ಸಲಕ್ಕೆ ಒಂದು ಹೆಜ್ಜೆ ಇಡಬೇಕು. ಅದನ್ನು ಯಾವಾಗಲೂ ನಿಲ್ಲಿಸಬಾರದು. ಈ ಪ್ರಯಾಣ ಪೂರ್ತಿಯಾಗಿಲ್ಲ ಎನ್ನುವ ಬೇಸರ ಬೇಡ. ಹಾಗೆ ನೋಡಿದರೆ ಯಾವ ಪ್ರಯಾಣಕ್ಕೂ ಕೊನೆ ಇಲ್ಲ. ಒಂದರ ಕೊನೆ ಇನ್ನೊಂದರ ಆರಂಭ ಎನ್ನುವುದು ನೆನಪಿರಲಿ. ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ’ ಎಂದು ಬಿಗ್ ಬಾಸ್ ಹೇಳಿದರು.

ನಿಂತಿರುವ ಪ್ರಯಾಣ ಯಾವುದೇ ಕ್ಷಣದಲ್ಲಿ ಆರಂಭಿಸಲು ಅವಕಾಶ ಇದೆ ಎಂಬುದು ನೆನಪಿರಲಿ ಎನ್ನುವ ಮಾತನ್ನು ಹೇಳುತ್ತಿದ್ದಂತೆ ಸ್ಪರ್ಧಿಗಳ ಕಿವಿ ನೆಟ್ಟಗಾಯಿತು. ಕೊರೊನಾ ಕಡಿಮೆ ಆದ ನಂತರದಲ್ಲಿ ಮತ್ತೆ ಬಿಗ್​ ಬಾಸ್​ ಆರಂಭಗೊಳ್ಳಲಿದೆಯೇ ಎನ್ನುವ ಪ್ರಶ್ನೆಯನ್ನು ಇದು ಹುಟ್ಟು ಹಾಕಿತು.

ಇದನ್ನೂ ಓದಿ: ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು