AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ಗೆ ದಿನಾಂಕ ಫಿಕ್ಸ್​; ಜೂ.23ರ ಮೊದಲ ಸಂಚಿಕೆಯಲ್ಲಿ ಏನಿರಲಿದೆ ವಿಶೇಷ?

Bigg Boss Kannada Season 8: ‘ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗತ್ತಾ’ ಎಂದು ಕೌತುಕದ ಪ್ರಶ್ನೆಯನ್ನು ಪ್ರೋಮೋದಲ್ಲಿ ಕೇಳಲಾಗಿದೆ. ಅಂದರೆ ಈ ಎರಡನೇ ಸೀಸನ್​ನಲ್ಲಿ ಹಳೇ ಸ್ಪರ್ಧಿಗಳ ಜೊತೆಗೆ ಹೊಸ ಸ್ಪರ್ಧಿಗಳು ಬಂದರೂ ಅಚ್ಚರಿ ಏನಿಲ್ಲ.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ಗೆ ದಿನಾಂಕ ಫಿಕ್ಸ್​; ಜೂ.23ರ ಮೊದಲ ಸಂಚಿಕೆಯಲ್ಲಿ ಏನಿರಲಿದೆ ವಿಶೇಷ?
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Jun 21, 2021 | 9:12 AM

Share

ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿಯಿಂದಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅರ್ಥಕ್ಕೆ ನಿಂತಾಗ ಪ್ರೇಕ್ಷಕರಿಗೆ ಬೇಸರ ಆಗಿತ್ತು. ಆ ಸಂದರ್ಭದಲ್ಲಿ ಸ್ಪರ್ಧಿಸುತ್ತಿದ್ದ ಎಲ್ಲ 12 ಮಂದಿಗೂ ಆ ನಿರ್ಧಾರ ಶಾಕ್​ ನೀಡಿತ್ತು. ಬಹುತೇಕರು ಕಣ್ಣೀರು ಹಾಕುತ್ತ ದೊಡ್ಮನೆಯಿಂದ ಹೊರಬಂದಿದ್ದರು. ಆದರೆ ಅದೇ ಆಟವನ್ನು ಮತ್ತೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಕೆಲವೇ ದಿನಗಳ ಹಿಂದೆ ಹೊರಬಿತ್ತು. ಅದನ್ನು ಎರಡನೇ ಇನ್ನಿಂಗ್ಸ್​ ಎಂದು ಕಲರ್ಸ್​ ಕನ್ನಡ ವಾಹಿನಿ ಕರೆದಿದೆ. ಈಗ ಆ ಎರಡನೇ ಇನ್ನಿಂಗ್ಸ್​ ಆರಂಭಕ್ಕೆ ದಿನಾಂಕ ಕೂಡ ನಿಗದಿ ಆಗಿದೆ. ಇದೇ ಬುಧವಾರದಿಂದ (ಜೂ.23) ಹೊಸ ಎಪಿಸೋಡ್​ಗಳು ಪ್ರಸಾರ ಆಗಲಿವೆ.

ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. ‘ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗತ್ತಾ’ ಎಂದು ಕೌತುಕದ ಪ್ರಶ್ನೆಯನ್ನು ಈ ಪ್ರೋಮೋದಲ್ಲಿ ಕೇಳಲಾಗಿದೆ. ಅಂದರೆ ಈ ಎರಡನೇ ಇನ್ನಿಂಗ್ಸ್​​ನಲ್ಲಿ ಹಳೇ ಸ್ಪರ್ಧಿಗಳ ಜೊತೆಗೆ ಹೊಸ ಸ್ಪರ್ಧಿಗಳು ಬಂದರೂ ಅಚ್ಚರಿ ಏನಿಲ್ಲ. ಅಲ್ಲದೆ, ಬೇರೆ ಇನ್ನೊಂದಿಷ್ಟು ಹೊಸ ಟ್ವಿಸ್ಟ್​ಗಳು ಇರುವುದು ಕೂಡ ಖಂಡಿತ.

ಬಿಗ್​ ಬಾಸ್​ ಅರ್ಧಕ್ಕೆ ಅಂತ್ಯವಾಗುವಾಗ ಸುದೀಪ್​ ಅವರು ಅನಾರೋಗ್ಯದಿಂದ ಆಗಷ್ಟೇ ಚೇತರಿಸಿಕೊಳ್ಳುತ್ತಿದ್ದರು. ಹಾಗಾಗಿ ಆ ಕೊನೇ ಸಂಚಿಕೆಗಳಲ್ಲಿ ಅವರು ಕಾಣಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಬುಧವಾರ ಎರಡನೇ ಇನ್ನಿಂಗ್ಸ್​ನ ಮಹಾ ಸಂಚಿಕೆಗೆ ಸಕಲ ತಯಾರಿ ನಡೆದಿದ್ದು, ಅಂದು ಸುದೀಪ್​ ಕೂಡ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದನ್ನು ಮಹಾ ಸಂಚಿಕೆ ಎಂದು ವಾಹಿನಿ ಕರೆದಿದೆ. ಹಾಗಾಗಿ ಮಸ್ತ್​ ಮನರಂಜನೆ ಖಂಡಿತಾ ಇರಲಿದೆ ಎನ್ನಬಹುದು.

ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ., ದಿವ್ಯಾ ಉರುಡುಗ, ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ರಘು ಗೌಡ, ವೈಷ್ಣವಿ ಗೌಡ, ಶಮಂತ್​ ಬ್ರೋ ಗೌಡ ಈಗಾಗಲೇ ತಮ್ಮ ಸೂಟ್​ಕೇಸ್​ ಪ್ಯಾಕ್​ ಮಾಡಿಕೊಂಡು ಹೋಟೆಲ್​ಗಳಲ್ಲಿ ಕ್ವಾರಂಟೈನ್​ ಆಗಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?