AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ಗೆ ದಿನಾಂಕ ಫಿಕ್ಸ್​; ಜೂ.23ರ ಮೊದಲ ಸಂಚಿಕೆಯಲ್ಲಿ ಏನಿರಲಿದೆ ವಿಶೇಷ?

Bigg Boss Kannada Season 8: ‘ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗತ್ತಾ’ ಎಂದು ಕೌತುಕದ ಪ್ರಶ್ನೆಯನ್ನು ಪ್ರೋಮೋದಲ್ಲಿ ಕೇಳಲಾಗಿದೆ. ಅಂದರೆ ಈ ಎರಡನೇ ಸೀಸನ್​ನಲ್ಲಿ ಹಳೇ ಸ್ಪರ್ಧಿಗಳ ಜೊತೆಗೆ ಹೊಸ ಸ್ಪರ್ಧಿಗಳು ಬಂದರೂ ಅಚ್ಚರಿ ಏನಿಲ್ಲ.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ಗೆ ದಿನಾಂಕ ಫಿಕ್ಸ್​; ಜೂ.23ರ ಮೊದಲ ಸಂಚಿಕೆಯಲ್ಲಿ ಏನಿರಲಿದೆ ವಿಶೇಷ?
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Jun 21, 2021 | 9:12 AM

Share

ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿಯಿಂದಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅರ್ಥಕ್ಕೆ ನಿಂತಾಗ ಪ್ರೇಕ್ಷಕರಿಗೆ ಬೇಸರ ಆಗಿತ್ತು. ಆ ಸಂದರ್ಭದಲ್ಲಿ ಸ್ಪರ್ಧಿಸುತ್ತಿದ್ದ ಎಲ್ಲ 12 ಮಂದಿಗೂ ಆ ನಿರ್ಧಾರ ಶಾಕ್​ ನೀಡಿತ್ತು. ಬಹುತೇಕರು ಕಣ್ಣೀರು ಹಾಕುತ್ತ ದೊಡ್ಮನೆಯಿಂದ ಹೊರಬಂದಿದ್ದರು. ಆದರೆ ಅದೇ ಆಟವನ್ನು ಮತ್ತೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಕೆಲವೇ ದಿನಗಳ ಹಿಂದೆ ಹೊರಬಿತ್ತು. ಅದನ್ನು ಎರಡನೇ ಇನ್ನಿಂಗ್ಸ್​ ಎಂದು ಕಲರ್ಸ್​ ಕನ್ನಡ ವಾಹಿನಿ ಕರೆದಿದೆ. ಈಗ ಆ ಎರಡನೇ ಇನ್ನಿಂಗ್ಸ್​ ಆರಂಭಕ್ಕೆ ದಿನಾಂಕ ಕೂಡ ನಿಗದಿ ಆಗಿದೆ. ಇದೇ ಬುಧವಾರದಿಂದ (ಜೂ.23) ಹೊಸ ಎಪಿಸೋಡ್​ಗಳು ಪ್ರಸಾರ ಆಗಲಿವೆ.

ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. ‘ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗತ್ತಾ’ ಎಂದು ಕೌತುಕದ ಪ್ರಶ್ನೆಯನ್ನು ಈ ಪ್ರೋಮೋದಲ್ಲಿ ಕೇಳಲಾಗಿದೆ. ಅಂದರೆ ಈ ಎರಡನೇ ಇನ್ನಿಂಗ್ಸ್​​ನಲ್ಲಿ ಹಳೇ ಸ್ಪರ್ಧಿಗಳ ಜೊತೆಗೆ ಹೊಸ ಸ್ಪರ್ಧಿಗಳು ಬಂದರೂ ಅಚ್ಚರಿ ಏನಿಲ್ಲ. ಅಲ್ಲದೆ, ಬೇರೆ ಇನ್ನೊಂದಿಷ್ಟು ಹೊಸ ಟ್ವಿಸ್ಟ್​ಗಳು ಇರುವುದು ಕೂಡ ಖಂಡಿತ.

ಬಿಗ್​ ಬಾಸ್​ ಅರ್ಧಕ್ಕೆ ಅಂತ್ಯವಾಗುವಾಗ ಸುದೀಪ್​ ಅವರು ಅನಾರೋಗ್ಯದಿಂದ ಆಗಷ್ಟೇ ಚೇತರಿಸಿಕೊಳ್ಳುತ್ತಿದ್ದರು. ಹಾಗಾಗಿ ಆ ಕೊನೇ ಸಂಚಿಕೆಗಳಲ್ಲಿ ಅವರು ಕಾಣಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಬುಧವಾರ ಎರಡನೇ ಇನ್ನಿಂಗ್ಸ್​ನ ಮಹಾ ಸಂಚಿಕೆಗೆ ಸಕಲ ತಯಾರಿ ನಡೆದಿದ್ದು, ಅಂದು ಸುದೀಪ್​ ಕೂಡ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದನ್ನು ಮಹಾ ಸಂಚಿಕೆ ಎಂದು ವಾಹಿನಿ ಕರೆದಿದೆ. ಹಾಗಾಗಿ ಮಸ್ತ್​ ಮನರಂಜನೆ ಖಂಡಿತಾ ಇರಲಿದೆ ಎನ್ನಬಹುದು.

ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ., ದಿವ್ಯಾ ಉರುಡುಗ, ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ರಘು ಗೌಡ, ವೈಷ್ಣವಿ ಗೌಡ, ಶಮಂತ್​ ಬ್ರೋ ಗೌಡ ಈಗಾಗಲೇ ತಮ್ಮ ಸೂಟ್​ಕೇಸ್​ ಪ್ಯಾಕ್​ ಮಾಡಿಕೊಂಡು ಹೋಟೆಲ್​ಗಳಲ್ಲಿ ಕ್ವಾರಂಟೈನ್​ ಆಗಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್