AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Bigg Boss Kannada 8: ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಶೋ ಅರ್ಧಕ್ಕೆ ನಿಂತಿದ್ದು ಇದೇ ಮೊದಲು. ಈ ಮೊದಲು ಮೊದಲನೇ ಅಲೆ ಕಾಣಿಸಿಕೊಂಡಾಗ ಮಲಯಾಳಂನಲ್ಲಿ ಬಿಗ್​ ಬಾಸ್​ಅನ್ನು ಅರ್ಧಕ್ಕೆ ನಿಂತಿತ್ತು.

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ  ಸೀಸನ್​ 8
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
|

Updated on:May 08, 2021 | 6:15 PM

Share

2021ರ ಆರಂಭದಲ್ಲಿ ಕರ್ನಾಟಕದಲ್ಲಿ ಕೊರೊನಾ ವೈರಸ್​ ನಿಯಂತ್ರಣದಲ್ಲಿತ್ತು. ಈ ಕಾರಣಕ್ಕೆ ಕಲರ್ಸ್​ ಕನ್ನಡ ವಾಹಿನಿ ಬಿಗ್​ ಬಾಸ್ ಕನ್ನಡ​ ಸೀಸನ್​ 8  ಆರಂಭಿಸಿತ್ತು. ಫೆಬ್ರವರಿ 28ರಂದು ಸೀಸನ್​ 8 ಗ್ರ್ಯಾಂಡ್​ ಓಪನಿಂಗ್​ ಪಡೆದುಕೊಂಡಿತ್ತು. ಆದರೆ, ಮಾರ್ಚ್​​ ನಂತರದಲ್ಲಿ ಕೊರೊನಾ ಕೇಸ್​ ಮಿತಿಮೀರುತ್ತಿದೆ. ಹೀಗಾಗಿ, ಕಠಿಣ ಲಾಕ್​ಡೌನ್​ ಘೋಷಣೆ ಮಾಡಿದೆ. ಇದರಿಂದ ಬಿಗ್​ ಬಾಸ್​ ಸೀಸನ್​ 8ಅನ್ನು ವಾಹಿನಿ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ.

ಬಿಗ್​ ಬಾಸ್​ ಮನೆ ಒಳಗೆ ತೆರಳುವ ಸ್ಪರ್ಧಿಗಳು ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು.  ಬಿಗ್​ ಬಾಸ್​ ಕೆಲಸಕ್ಕಾಗಿ ನೇಮಕಗೊಂಡ ಸಿಬ್ಬಂದಿ ಕೂಡ ಕೊವಿಡ್​ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದರು. ಇಷ್ಟೆಲ್ಲ ಕಷ್ಟಪಟ್ಟರೂ ಶೋ ನಡೆಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ನಿಯಮದಂತೆ ಬಿಗ್​ ಬಾಸ್​ ಬಾಸ್​ ನಿಲ್ಲಿಸಲೇಬೇಕಾದ ಪರಿಸ್ಥಿತಿ ಬಂದೊದಗಿದೆ.

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ. ಹೀಗಾಗಿ, ಒಳಾಂಗಣದಲ್ಲಿ ಧಾರಾವಾಹಿಗಳ  ಶೂಟಿಂಗ್​ ನಡೆಸಲಾಗುತ್ತಿತ್ತು. ಶುಕ್ರವಾರ ಮಾತನಾಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಂಗಣ ಹಾಗೂ ಹೊರಾಂಗಣ ಯಾವುದೇ ರೀತಿಯ ಶೂಟಿಂಗ್​ಗೆ  ಅವಕಾಶ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕಲರ್ಸ್​ ವಾಹಿನಿ ಅರ್ಧಕ್ಕೆ ಶೋ ನಿಲ್ಲಿಸುವು ಅನಿವಾರ್ಯವಾಗಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ., ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್​, ನಿಧಿ ಸುಬ್ಬಯ್ಯ ಇದ್ದರು. ಇವರೆಲ್ಲರಿಗೂ ಈಗ ನಿರಾಸೆ ಉಂಟಾಗಿದೆ.

ಬಿಗ್​ ಬಾಸ್​ ಕನ್ನಡದ ಇತಿಹಾಸದಲ್ಲಿ ಈ ರೀತಿ ಒಂದು ಸೀಸನ್​ ಅರ್ಧಕ್ಕೆ ನಿಂತಿದ್ದು ಇದೇ ಮೊದಲು.  ಕಳೆದ ವರ್ಷ ಮಲಯಾಳಂ ಬಿಗ್​ ಬಾಸ್​ ಶೋವನ್ನು ಕೂಡ ಇದೇ ರೀತಿ ಕೋವಿಡ್​ ಕಾರಣಕ್ಕಾಗಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದು ಈಗ ಕನ್ನಡದಲ್ಲೂ ಅದು ಮರುಕಳಿಸಿದೆ. ಏಪ್ರಿಲ್​​ನಲ್ಲಿ ಆರಂಭಗೊಂಡಿದ್ದ ಐಪಿಎಲ್​ ಸೀಸನ್​ 14  ಕೂಡ  ಕೊರೊನಾ ಕಾರಣದಿಂದ ರದ್ದಾಗಿತ್ತು. ಈಗ ಬಿಗ್​ ಬಾಸ್​ ಕೂಡ ಅದೇ ಹಾದಿ ಹಿಡಿದಿದೆ.

Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

Published On - 6:01 pm, Sat, 8 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ