AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Bigg Boss Kannada 8: ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಶೋ ಅರ್ಧಕ್ಕೆ ನಿಂತಿದ್ದು ಇದೇ ಮೊದಲು. ಈ ಮೊದಲು ಮೊದಲನೇ ಅಲೆ ಕಾಣಿಸಿಕೊಂಡಾಗ ಮಲಯಾಳಂನಲ್ಲಿ ಬಿಗ್​ ಬಾಸ್​ಅನ್ನು ಅರ್ಧಕ್ಕೆ ನಿಂತಿತ್ತು.

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ  ಸೀಸನ್​ 8
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
|

Updated on:May 08, 2021 | 6:15 PM

Share

2021ರ ಆರಂಭದಲ್ಲಿ ಕರ್ನಾಟಕದಲ್ಲಿ ಕೊರೊನಾ ವೈರಸ್​ ನಿಯಂತ್ರಣದಲ್ಲಿತ್ತು. ಈ ಕಾರಣಕ್ಕೆ ಕಲರ್ಸ್​ ಕನ್ನಡ ವಾಹಿನಿ ಬಿಗ್​ ಬಾಸ್ ಕನ್ನಡ​ ಸೀಸನ್​ 8  ಆರಂಭಿಸಿತ್ತು. ಫೆಬ್ರವರಿ 28ರಂದು ಸೀಸನ್​ 8 ಗ್ರ್ಯಾಂಡ್​ ಓಪನಿಂಗ್​ ಪಡೆದುಕೊಂಡಿತ್ತು. ಆದರೆ, ಮಾರ್ಚ್​​ ನಂತರದಲ್ಲಿ ಕೊರೊನಾ ಕೇಸ್​ ಮಿತಿಮೀರುತ್ತಿದೆ. ಹೀಗಾಗಿ, ಕಠಿಣ ಲಾಕ್​ಡೌನ್​ ಘೋಷಣೆ ಮಾಡಿದೆ. ಇದರಿಂದ ಬಿಗ್​ ಬಾಸ್​ ಸೀಸನ್​ 8ಅನ್ನು ವಾಹಿನಿ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ.

ಬಿಗ್​ ಬಾಸ್​ ಮನೆ ಒಳಗೆ ತೆರಳುವ ಸ್ಪರ್ಧಿಗಳು ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು.  ಬಿಗ್​ ಬಾಸ್​ ಕೆಲಸಕ್ಕಾಗಿ ನೇಮಕಗೊಂಡ ಸಿಬ್ಬಂದಿ ಕೂಡ ಕೊವಿಡ್​ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದರು. ಇಷ್ಟೆಲ್ಲ ಕಷ್ಟಪಟ್ಟರೂ ಶೋ ನಡೆಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ನಿಯಮದಂತೆ ಬಿಗ್​ ಬಾಸ್​ ಬಾಸ್​ ನಿಲ್ಲಿಸಲೇಬೇಕಾದ ಪರಿಸ್ಥಿತಿ ಬಂದೊದಗಿದೆ.

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ. ಹೀಗಾಗಿ, ಒಳಾಂಗಣದಲ್ಲಿ ಧಾರಾವಾಹಿಗಳ  ಶೂಟಿಂಗ್​ ನಡೆಸಲಾಗುತ್ತಿತ್ತು. ಶುಕ್ರವಾರ ಮಾತನಾಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಂಗಣ ಹಾಗೂ ಹೊರಾಂಗಣ ಯಾವುದೇ ರೀತಿಯ ಶೂಟಿಂಗ್​ಗೆ  ಅವಕಾಶ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕಲರ್ಸ್​ ವಾಹಿನಿ ಅರ್ಧಕ್ಕೆ ಶೋ ನಿಲ್ಲಿಸುವು ಅನಿವಾರ್ಯವಾಗಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ., ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್​, ನಿಧಿ ಸುಬ್ಬಯ್ಯ ಇದ್ದರು. ಇವರೆಲ್ಲರಿಗೂ ಈಗ ನಿರಾಸೆ ಉಂಟಾಗಿದೆ.

ಬಿಗ್​ ಬಾಸ್​ ಕನ್ನಡದ ಇತಿಹಾಸದಲ್ಲಿ ಈ ರೀತಿ ಒಂದು ಸೀಸನ್​ ಅರ್ಧಕ್ಕೆ ನಿಂತಿದ್ದು ಇದೇ ಮೊದಲು.  ಕಳೆದ ವರ್ಷ ಮಲಯಾಳಂ ಬಿಗ್​ ಬಾಸ್​ ಶೋವನ್ನು ಕೂಡ ಇದೇ ರೀತಿ ಕೋವಿಡ್​ ಕಾರಣಕ್ಕಾಗಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದು ಈಗ ಕನ್ನಡದಲ್ಲೂ ಅದು ಮರುಕಳಿಸಿದೆ. ಏಪ್ರಿಲ್​​ನಲ್ಲಿ ಆರಂಭಗೊಂಡಿದ್ದ ಐಪಿಎಲ್​ ಸೀಸನ್​ 14  ಕೂಡ  ಕೊರೊನಾ ಕಾರಣದಿಂದ ರದ್ದಾಗಿತ್ತು. ಈಗ ಬಿಗ್​ ಬಾಸ್​ ಕೂಡ ಅದೇ ಹಾದಿ ಹಿಡಿದಿದೆ.

Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

Published On - 6:01 pm, Sat, 8 May 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!