Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Bigg Boss Kannada 8: ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಶೋ ಅರ್ಧಕ್ಕೆ ನಿಂತಿದ್ದು ಇದೇ ಮೊದಲು. ಈ ಮೊದಲು ಮೊದಲನೇ ಅಲೆ ಕಾಣಿಸಿಕೊಂಡಾಗ ಮಲಯಾಳಂನಲ್ಲಿ ಬಿಗ್​ ಬಾಸ್​ಅನ್ನು ಅರ್ಧಕ್ಕೆ ನಿಂತಿತ್ತು.

Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ  ಸೀಸನ್​ 8
ಬಿಗ್​​ಬಾಸ್​​ ಕನ್ನಡ 8

Updated on: May 08, 2021 | 6:15 PM

2021ರ ಆರಂಭದಲ್ಲಿ ಕರ್ನಾಟಕದಲ್ಲಿ ಕೊರೊನಾ ವೈರಸ್​ ನಿಯಂತ್ರಣದಲ್ಲಿತ್ತು. ಈ ಕಾರಣಕ್ಕೆ ಕಲರ್ಸ್​ ಕನ್ನಡ ವಾಹಿನಿ ಬಿಗ್​ ಬಾಸ್ ಕನ್ನಡ​ ಸೀಸನ್​ 8  ಆರಂಭಿಸಿತ್ತು. ಫೆಬ್ರವರಿ 28ರಂದು ಸೀಸನ್​ 8 ಗ್ರ್ಯಾಂಡ್​ ಓಪನಿಂಗ್​ ಪಡೆದುಕೊಂಡಿತ್ತು. ಆದರೆ, ಮಾರ್ಚ್​​ ನಂತರದಲ್ಲಿ ಕೊರೊನಾ ಕೇಸ್​ ಮಿತಿಮೀರುತ್ತಿದೆ. ಹೀಗಾಗಿ, ಕಠಿಣ ಲಾಕ್​ಡೌನ್​ ಘೋಷಣೆ ಮಾಡಿದೆ. ಇದರಿಂದ ಬಿಗ್​ ಬಾಸ್​ ಸೀಸನ್​ 8ಅನ್ನು ವಾಹಿನಿ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಂಡಿದೆ.

ಬಿಗ್​ ಬಾಸ್​ ಮನೆ ಒಳಗೆ ತೆರಳುವ ಸ್ಪರ್ಧಿಗಳು ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು.  ಬಿಗ್​ ಬಾಸ್​ ಕೆಲಸಕ್ಕಾಗಿ ನೇಮಕಗೊಂಡ ಸಿಬ್ಬಂದಿ ಕೂಡ ಕೊವಿಡ್​ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದರು. ಇಷ್ಟೆಲ್ಲ ಕಷ್ಟಪಟ್ಟರೂ ಶೋ ನಡೆಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ನಿಯಮದಂತೆ ಬಿಗ್​ ಬಾಸ್​ ಬಾಸ್​ ನಿಲ್ಲಿಸಲೇಬೇಕಾದ ಪರಿಸ್ಥಿತಿ ಬಂದೊದಗಿದೆ.

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ. ಹೀಗಾಗಿ, ಒಳಾಂಗಣದಲ್ಲಿ ಧಾರಾವಾಹಿಗಳ  ಶೂಟಿಂಗ್​ ನಡೆಸಲಾಗುತ್ತಿತ್ತು. ಶುಕ್ರವಾರ ಮಾತನಾಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಂಗಣ ಹಾಗೂ ಹೊರಾಂಗಣ ಯಾವುದೇ ರೀತಿಯ ಶೂಟಿಂಗ್​ಗೆ  ಅವಕಾಶ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕಲರ್ಸ್​ ವಾಹಿನಿ ಅರ್ಧಕ್ಕೆ ಶೋ ನಿಲ್ಲಿಸುವು ಅನಿವಾರ್ಯವಾಗಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ., ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್​, ನಿಧಿ ಸುಬ್ಬಯ್ಯ ಇದ್ದರು. ಇವರೆಲ್ಲರಿಗೂ ಈಗ ನಿರಾಸೆ ಉಂಟಾಗಿದೆ.

ಬಿಗ್​ ಬಾಸ್​ ಕನ್ನಡದ ಇತಿಹಾಸದಲ್ಲಿ ಈ ರೀತಿ ಒಂದು ಸೀಸನ್​ ಅರ್ಧಕ್ಕೆ ನಿಂತಿದ್ದು ಇದೇ ಮೊದಲು.  ಕಳೆದ ವರ್ಷ ಮಲಯಾಳಂ ಬಿಗ್​ ಬಾಸ್​ ಶೋವನ್ನು ಕೂಡ ಇದೇ ರೀತಿ ಕೋವಿಡ್​ ಕಾರಣಕ್ಕಾಗಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದು ಈಗ ಕನ್ನಡದಲ್ಲೂ ಅದು ಮರುಕಳಿಸಿದೆ. ಏಪ್ರಿಲ್​​ನಲ್ಲಿ ಆರಂಭಗೊಂಡಿದ್ದ ಐಪಿಎಲ್​ ಸೀಸನ್​ 14  ಕೂಡ  ಕೊರೊನಾ ಕಾರಣದಿಂದ ರದ್ದಾಗಿತ್ತು. ಈಗ ಬಿಗ್​ ಬಾಸ್​ ಕೂಡ ಅದೇ ಹಾದಿ ಹಿಡಿದಿದೆ.

Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

 

 

Published On - 6:01 pm, Sat, 8 May 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us