AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಇಂದು ಸಂಜೆ 6 ಗಂಟೆಗೆ ಬಿಗ್​ ಬಾಸ್ 8 ಪ್ರಾರಂಭ​!; ಮನೆ ಒಳಗೆ ಹೋಗುವವರು ಇವ್ರೇನಾ?

ಬಿಗ್​ ಬಾಾಸ್​ ಕನ್ನಡ 8: ಪ್ರತಿ ವರ್ಷದಂತೆ ಈ ಬಾರಿಯೂ ನಟ ಸುದೀಪ್​ ಬಿಗ್​ ಬಾಸ್​ ನಡೆಸಿಕೊಡಲಿದ್ದಾರೆ. ಪ್ರತಿ ಅಭ್ಯರ್ಥಿಯನ್ನು ವೇದಿಕೆಯ ಮೇಲೆ ಕರೆದು ಅವರ ಪರಿಚಯ ನೀಡಿ, ಮನೆ ಒಳಗೆ​ ಕಳುಹಿಸುವ ಕೆಲಸವನ್ನು ಸುದೀಪ್​ ಮಾಡಲಿದ್ದಾರೆ.

Bigg Boss Kannada 8: ಇಂದು ಸಂಜೆ 6 ಗಂಟೆಗೆ ಬಿಗ್​ ಬಾಸ್ 8 ಪ್ರಾರಂಭ​!; ಮನೆ ಒಳಗೆ ಹೋಗುವವರು ಇವ್ರೇನಾ?
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Feb 28, 2021 | 6:42 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎನ್ನುವ ಸುದ್ದಿ ಹೊರ ಬಿದ್ದಿದ್ದೇ ತಡ, ಪ್ರೇಕ್ಷಕರು ಮನೆ ಒಳಗೆ ಯಾರು ಹೋಗಲಿದ್ದಾರೆ? ಈ ಬಾರಿ ಮನೆ ಸೇರುವ ಸ್ಪರ್ಧಿಗಳೆಷ್ಟು? ಸುದೀಪ್​ ಯಾವ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದರು. ಈ ಎಲ್ಲಾ ಪ್ರಶ್ನೆ ಹಾಗೂ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಸಂಜೆ 6 ಗಂಟೆಗೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಸೀಸನ್​ 8 ಗ್ರ್ಯಾಂಡ್​ ಆಗಿ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ನಟ ಸುದೀಪ್​ ಬಿಗ್​ ಬಾಸ್​ ನಡೆಸಿಕೊಡಲಿದ್ದಾರೆ. ಪ್ರತಿ ಅಭ್ಯರ್ಥಿಯನ್ನು ವೇದಿಕೆಯ ಮೇಲೆ ಕರೆದು ಅವರ ಪರಿಚಯ ನೀಡಿ, ಮನೆ ಒಳಗೆ​ ಕಳುಹಿಸುವ ಕೆಲಸವನ್ನು ಸುದೀಪ್​ ಮಾಡಲಿದ್ದಾರೆ. ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಬಿಗ್​ ಬಾಸ್​ ಕಾರ್ಯಕ್ರಮ ನಡೆಯಲಿದೆ. ಕಂಟೆಸ್ಟೆಂಟ್​ಗಳು ವೇದಿಕೆ ಏರುವುದರ ಜತೆಗೆ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುವ ಸಾಧ್ಯತೆ ಇದೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ. ಆನ್​ಲೈನ್​ನಲ್ಲಿ ಬಿಗ್​ ಬಾಸ್​ ನೋಡಬೇಕು ಎಂದಾದರೆ ನೀವು ವೂಟ್​ ಆ್ಯಪ್​ಗೆ ಭೇಟಿ ನೀಡಬೇಕು. ಜಿಯೋ ಟಿವಿಯಲ್ಲಿ ಕೂಡ ನೀವು ಬಿಗ್​ ಬಾಸ್​ ವೀಕ್ಷಣೆ ಮಾಡಬಹುದಾಗಿದೆ. ಜಿಯೋ ಟಿವಿಗೆ ತೆರಳಿ ಕಲರ್ಸ್​ ಕನ್ನಡ ಎಂದು ಸರ್ಚ್​ ಮಾಡಿ, ಅಲ್ಲಿ ಬಿಗ್​ ಬಾಸ್ ವೀಕ್ಷಣೆ ಮಾಡಬಹುದು.

ಬಿಗ್​ ಬಾಸ್​ ಸಂಭಾವ್ಯರ ಪಟ್ಟಿ

ಪ್ರತಿಬಾರಿಯೂ ಬಿಗ್​ಬಾಸ್​ ಶುರುವಾಗುತ್ತದೆ ಎಂಬ ಸುದ್ದಿ ಹೊರಬಿದ್ದ ತಕ್ಷಣ ಸ್ಪರ್ಧಿಗಳು ಯಾರು ಎಂಬ ಕುತೂಹಲ ಸಹಜವಾಗಿ ಹುಟ್ಟಿಕೊಳ್ಳುತ್ತದೆ. ಇನ್ನು ಬಿಗ್​ಬಾಸ್​ಗೆ ಹೋಗುವವರು ಯಾರೂ ಆ ಬಗ್ಗೆ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳುವಂತಿಲ್ಲ. ಹೀಗಾಗಿ ಬಹುತೇಕರು ಹೋಗುವುದು ನಿಕ್ಕಿಯಾಗಿದ್ದರೂ ಕೇಳಿದರೆ ಇಲ್ಲಪ್ಪಾ, ನಾನು ಹೋಗ್ತಿಲ್ಲ ಎಂದು ನಿರಾಕರಿಸುತ್ತಾರೆ. ಹಾಗಾದರೆ, ಈ ಬಾರಿ ಬಿಗ್​ ಬಾಸ್​ ಮನೆಗೆ ತೆರಳಲಿರುವವರು ಯಾರು ಎನ್ನುವ ಸಂಭಾವ್ಯ ಪಟ್ಟಿ ಇಲ್ಲಿದೆ.

-ಆಶಿಕಾ ರಂಗನಾಥ್ ಸಹೋದರಿ ಅನುಶಾ ರಂಗನಾಥ್ -ಕಾಮಿಡಿ ಕಿಲಾಡಿ ನಯನಾ -ನಿರ್ದೇಶಕ ರವಿ ಶ್ರೀವತ್ಸ -ಬ್ರಹ್ಮಗಂಟು ಖ್ಯಾತಿಯ ಗುಂಡಮ್ಮ -ರಘು ವೈನ್ ಸ್ಟೋರ್​ನ ರಘು ಗೌಡ -ಕಿರಣ್ ಶ್ರೀನಿವಾಸ್ -ಸುನಿಲ್ ರಾವ್ -‘ಲವ್ ಗುರು’ ರಾಜೇಶ್ -ಕಿರುತೆರೆ ನಟಿ ಸಮೀಕ್ಷಾ -ಅಗ್ನಿಸಾಕ್ಷಿಯ ಸುಕೃತಾ -ಅಮೃತವರ್ಷಿಣಿಯ ರಜಿನಿ -ತಬಲಾ ನಾಣಿ -ತರಂಗ ವಿಶ್ವ -ಸರಿಗಮಪ.. ಹನುಮಂತ -ನಿರೂಪಕ ಅಮರ್ ಪ್ರಸಾದ್

ಇದನ್ನೂ ಓದಿ: Bigg Boss Kannada 8: ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿಗಳು ಯಾರು? ಇಲ್ಲಿದೆ ಸಂಭಾವ್ಯರ ಪಟ್ಟಿ!

ಬಿಗ್​ಬಾಸ್​ ಕನ್ನಡ ಲೈವ್​: Live Bigg Boss Kannada 8 Launch LIVE Updates: ಎರಡನೇ ಅಭ್ಯರ್ಥಿಯಾಗಿ ಶುಭಾ ಪೂಂಜಾ ಬಿಗ್​ ಬಾಸ್ ಮನೆಗೆ ಎಂಟ್ರಿ

Published On - 6:36 am, Sun, 28 February 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ