Bigg Boss Kannada 8: ಬಿಗ್​ ಬಾಸ್​ ಮೊದಲ ದಿನದ ಸಂಚಿಕೆಯಲ್ಲಿ ಏನೆಲ್ಲಾ ಇರಲಿದೆ ಗೊತ್ತಾ?

ಬಿಗ್​ ಬಾಸ್​ ಆರಂಭಗೊಳ್ಳುತ್ತಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಮೂಲಗಳ ಪ್ರಕಾರ ಈ ಸೀಸನ್​ ಇನ್ನೂ 50ದಿನಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

Bigg Boss Kannada 8: ಬಿಗ್​ ಬಾಸ್​ ಮೊದಲ ದಿನದ ಸಂಚಿಕೆಯಲ್ಲಿ ಏನೆಲ್ಲಾ ಇರಲಿದೆ ಗೊತ್ತಾ?
ಕಿಚ್ಚ ಸುದೀಪ್​
Follow us
| Updated By: Digi Tech Desk

Updated on:Jun 22, 2021 | 10:33 AM

‘ಕನ್ನಡ ಬಿಗ್​ ಬಾಸ್ ಸೀಸನ್​ 8​’ ಬುಧವಾರ (ಜೂನ್​ 23) ಸೆಕೆಂಡ್​ ಇನ್ನಿಂಗ್ಸ್​ ಆರಂಭಿಸುತ್ತಿದೆ. ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ಈ ರೀತಿ ಆಗುತ್ತಿರುವುದು ಇದೇ ಮೊದಲು. ಬುಧವಾರ ಸಂಜೆ ಆರು ಗಂಟೆಯಿಂದಲೇ ಶೋ ಆರಂಭಗೊಳ್ಳಲಿದೆ. ಅಷ್ಟಕ್ಕೂ ಈ ವಿಶೇಷ ಶೋನಲ್ಲಿ ಏನೆಲ್ಲ ಇರಲಿದೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆಯುತ್ತಿದ್ದಾರೆ. ಇವರ ಜತೆಗೆ ಇನ್ನೂ ಕೆಲ ಹೊಸ ಸ್ಪರ್ಧಿಗಳು ಮನೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೆ, ಮಹಾ ಸಂಚಿಕೆ ಆಗಿರುವುದರಿಂದ ಸಂಜೆ 6 ಗಂಟೆಯಿಂದಲೇ ಬಿಗ್​ ಬಾಸ್ ಪ್ರಸಾರ ಆರಂಭಗೊಳ್ಳುತ್ತಿದೆ. ಪ್ರತಿ ಸ್ಪರ್ಧಿಗಳನ್ನು ಕಿಚ್ಚ ಸುದೀಪ್​ ವೇದಿಕೆ ಮೇಲೆ ಕರೆದು ಮಾತನಾಡಿಸಿ, ಅವರನ್ನು ಮನೆ ಒಳಗೆ ಕಳುಹಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು, ಹೊಸ ಸ್ಪರ್ಧಿಗಳು ಬಂದರೆ ಅವರ ಪರಿಚಯವನ್ನು ಸುದೀಪ್​ ಮಾಡಲಿದ್ದಾರೆ.

ಸೀಸನ್​ 8 ಅರ್ಧಕ್ಕೆ ನಿಲ್ಲುವುದಕ್ಕೂ ಕೆಲ ವಾರ ಮೊದಲು ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಬಿಗ್​ ಬಾಸ್​ ನಡೆಸಿಕೊಡೋಕೆ ಸಾಧ್ಯವಾಗಿರಲಿಲ್ಲ. ಇದಾದ ನಂತರದಲ್ಲಿ ಲಾಕ್​ಡೌನ್​ ನಿಯಮಗಳಿಂದ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರುತ್ತಿದ್ದು ಅಭಿಮಾನಿಗಳು ಖುಷಿಯಾಗಿದ್ದಾರೆ. ಅಂದಹಾಗೆ, ಈ ವಾರಾಂತ್ಯದಲ್ಲಿ ಕಿಚ್ಚನ ಪಂಚಾಯ್ತಿ ನಡೆಯೋದು ಅನುಮಾನವಿದೆ. ಮುಂದಿನ ವಾರದಿಂದ ಎಲಿಮಿನೇಷನ್​ ಪ್ರಕ್ರಿಯೆಗಳು ಆರಂಭಗೊಳ್ಳಬಹುದು.

ಸದ್ಯ, ಬಿಗ್​ ಬಾಸ್​ ಆರಂಭಗೊಳ್ಳುತ್ತಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಮೂಲಗಳ ಪ್ರಕಾರ ಈ ಸೀಸನ್​ ಇನ್ನೂ 50 ದಿನಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?

Published On - 9:53 pm, Mon, 21 June 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ