AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: May 08, 2021 | 6:56 PM

Share

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ಹೀಗಾಗಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಇದಾದ ಬೆನ್ನಲ್ಲೇ ಟಿವಿ​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್ ​ರಿಯಾಲಿಟಿ ಶೋ ಹಾಗೂ ಧಾರಾವಾಹಿ ಶೂಟಿಂಗ್​ ನಿಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ, ಬಿಗ್​ ಬಾಸ್​ ಕನ್ನಡ ಸೀಸನ್​ 8 ಅರ್ಧಕ್ಕೆ ನಿಲ್ಲುತ್ತಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರು ಭಾರದ ಮನಸ್ಸಿನಿಂದ ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ ಎಂದು ಪರಮೇಶ್ವರ್ ಬರೆದುಕೊಂಡಿದ್ದಾರೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಸ್ಪರ್ಧಿಗಳು 100 ದಿನ ಪೂರೈಸದೆ ಮನೆಯಿಂದ ಹೊರ ಬರುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!