AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: May 08, 2021 | 6:56 PM

Share

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ಹೀಗಾಗಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಇದಾದ ಬೆನ್ನಲ್ಲೇ ಟಿವಿ​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್ ​ರಿಯಾಲಿಟಿ ಶೋ ಹಾಗೂ ಧಾರಾವಾಹಿ ಶೂಟಿಂಗ್​ ನಿಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ, ಬಿಗ್​ ಬಾಸ್​ ಕನ್ನಡ ಸೀಸನ್​ 8 ಅರ್ಧಕ್ಕೆ ನಿಲ್ಲುತ್ತಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರು ಭಾರದ ಮನಸ್ಸಿನಿಂದ ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ ಎಂದು ಪರಮೇಶ್ವರ್ ಬರೆದುಕೊಂಡಿದ್ದಾರೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಸ್ಪರ್ಧಿಗಳು 100 ದಿನ ಪೂರೈಸದೆ ಮನೆಯಿಂದ ಹೊರ ಬರುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!