AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಅರ್ಹತೆ ಏನು? ಬಿಗ್ ಬಾಸ್​ಗೆ ನವಾಜ್ ಆಯ್ಕೆ ಬಗ್ಗೆ ಅಪಸ್ವರ..!

Bigg Boss Kannada Season 9 Contestants: ಸೋಷಿಯಲ್ ಮೀಡಿಯಾ ಮೂಲಕ ಹಲವು ರೀತಿಯಲ್ಲಿ ಮನರಂಜನೆ ನೀಡುವ ಅನೇಕ ಸ್ಪರ್ಧಿಗಳಿದ್ದಾರೆ. ಅಷ್ಟೇ ಯಾಕೆ ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಹಲವು ಜನರು ಕರ್ನಾಟಕದಲ್ಲಿದ್ದಾರೆ.

Bigg Boss Kannada Season 9: ಅರ್ಹತೆ ಏನು? ಬಿಗ್ ಬಾಸ್​ಗೆ ನವಾಜ್ ಆಯ್ಕೆ ಬಗ್ಗೆ ಅಪಸ್ವರ..!
Nawaz
TV9 Web
| Updated By: ಝಾಹಿರ್ ಯೂಸುಫ್|

Updated on: Sep 25, 2022 | 12:31 PM

Share

ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 (Bigg Boss Kannada Season 9) ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಹೊಸ ಸೀಸನ್​ಗೆ ಹಳೆಯ ಸ್ಪರ್ಧಿ ಎಂಬಂತೆ ಬಿಗ್ ಬಾಸ್-9 ಗೆ ಮೊದಲು ಎಂಟ್ರಿ ಕೊಟ್ಟಿದ್ದು ಖ್ಯಾತ ಬಹುಮುಖ ಪ್ರತಿಭೆ ಅರುಣ್ ಸಾಗರ್. ಇದರ ಬೆನ್ನಲ್ಲೇ ನಟಿ ಮಯೂರಿ ಕೂಡ ದೊಡ್ಮನೆ ಪ್ರವೇಶಿಸಿದರು. ಇನ್ನು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಸೀಸನ್ 7 ರ ಸ್ಪರ್ಧಿ ದೀಪಿಕಾ ದಾಸ್ ಕಾಣಿಸಿಕೊಂಡರು. ಆದರೆ ನಾಲ್ಕನೇ ಸ್ಪರ್ಧಿಯಾಗಿ ಕಿಚ್ಚ ಸುದೀಪ್ ನವಾಜ್​ರನ್ನು ಸ್ವಾಗತಿಸುತ್ತಿದ್ದಂತೆ ಎಲ್ಲರೂ ಅಚ್ಚರಿಗೊಂಡರು. ಏಕೆಂದರೆ ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಸಿನಿಮಾಗಳ ರಿವ್ಯೂ ನೀಡುತ್ತದ್ದ 19ರ ಹುಡುಗ ಕಿಚ್ಚ ಸುದೀಪ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಬಿಗ್ ಬಾಸ್​ನಲ್ಲಿ ಸ್ಥಾನ ಪಡೆಯಲು ಅರ್ಹತೆಗಳೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಸೋಷಿಯಲ್ ಮೀಡಿಯಾ ಮೂಲಕ ಹಲವು ರೀತಿಯಲ್ಲಿ ಮನರಂಜನೆ ನೀಡುವ ಅನೇಕ ಸ್ಪರ್ಧಿಗಳಿದ್ದಾರೆ. ಅಷ್ಟೇ ಯಾಕೆ ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಹಲವು ಜನರು ಕರ್ನಾಟಕದಲ್ಲಿದ್ದಾರೆ. ಆದರೆ ಇವರೆಲ್ಲರನ್ನು ಬಿಟ್ಟು ಕೇವಲ ಚಿತ್ರಗಳ ಪ್ರಚಾರಕ್ಕಾಗಿ ರಿವ್ಯೂ ನೀಡುವವರಿಗೆ ಅವಕಾಶ ನೀಡಿರುವುದು ಏಕೆ ಎಂಬುದೇ ಈಗ ಪ್ರಶ್ನೆಯಾಗಿದೆ.

ಇದಕ್ಕೂ ಮುನ್ನ ಬಿಗ್ ಬಾಸ್ ಒಟಿಟಿಗೆ ಸೋನು ಗೌಡರ ಆಯ್ಕೆಯ ವೇಳೆಯೂ ಅಂತಹದೊಂದು ಪ್ರಶ್ನೆ ಉದ್ಭವಿಸಿತ್ತು. ಇದೀಗ ಟೆಲಿವಿಷನ್ ರಿಯಾಲಿಟಿ ಶೋನಲ್ಲಿ ನವಾಜ್ ಆಯ್ಕೆಯು ಹೊಸ ಚರ್ಚೆಗೆ ಕಾರಣವಾಗಿದೆ. ಕೇವಲ ಪ್ರಾಸ ಪದಗಳ ಪಂಚಿಂಗ್ ಡೈಲಾಗ್ ಒಂದೇ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸಲು ಅರ್ಹತೆಯಾಯಿತೇ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಕೆಲವರು ನವಾಜ್ ಅವರಿಗೆ ಬೆಂಬಲವನ್ನೂ ಸೂಚಿಸಿದ್ದಾರೆ. ಅಲ್ಲದೆ ತಮ್ಮ ಪ್ರತಿಭೆ ತೋರಿಸಲು ಬಿಗ್ ಬಾಸ್ ಉತ್ತಮ ವೇದಿಕೆಯಾಗಿದ್ದು, ಟೀಕಾಗಾರರಿಗೆ ಅಲ್ಲಿಂದಲೇ ಉತ್ತರಿಸಿ ಎಂದು ಹಾರೈಸಿದ್ದಾರೆ. ಒಟ್ಟಿನಲ್ಲಿ ಪಂಚಿಂಗ್ ಡೈಲಾಗ್​ಗಳ ಮೂಲಕವೇ ಬಿಗ್ ಬಾಸ್​ನಲ್ಲಿ ಸ್ಥಾನ ಪಡೆದಿರುವ ನವಾಜ್, ದೊಡ್ಮನೆಯ ಇತರೆ ಸ್ಪರ್ಧಿಗಳ ಮುಂದೆ ಯಾವ ರೀತಿಯಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಕಾದು ನೋಡಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ