AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’

ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಅನೇಕರು ಟೀಕೆ ಮಾಡಿದ್ದರು.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’
ಶಮಂತ್​, ಪ್ರಿಯಾಂಕಾ, ಚಕ್ರವರ್ತಿ ಚಂದ್ರಚೂಡ್​
Follow us
TV9 Web
| Updated By: ಮದನ್​ ಕುಮಾರ್​

Updated on:Jun 28, 2021 | 8:32 AM

ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕಾ ತಿಮ್ಮೇಶ್​ ತುಂಬಾನೇ ನೇರವಾಗಿ ಮಾತನಾಡುತ್ತಾರೆ. ಈ ವಿಚಾರಕ್ಕೆ ಅನೇಕರಿಗೆ ಅವರು ಇಷ್ಟವಾಗುವುದಿಲ್ಲ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ನಡೆದುಕೊಂಡ ರೀತಿ ಅನೇಕರ ಕಣ್ಣು ಕುಕ್ಕಿದೆ. ಶಮಂತ್​ ಹಾಗೂ ಪ್ರಿಯಾಂಕಾ ನಡುವೆ ಫೇಕ್​ ಸಂಬಧವಿದೆ ಎಂದು ಮನೆ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಮನೆಯವರು ಟೀಕೆ ಮಾಡಿದ್ದರು. ಈ ವೇಳೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಪ್ರಿಯಾಂಕಾಗೂ ಮನೆಯಲ್ಲಿದ್ದ ಶಮಂತ್​ಗೂ ಒಳ್ಳೆಯ ಗೆಳೆತನ ಬೆಳೆದಿತ್ತು.

ಜೂನ್​ 26ರ ಎಪಿಸೋಡ್​ನಲ್ಲಿ ಶಮಂತ್​ಗೆ ಪ್ರಿಯಾಂಕಾ ಚಾಲೆಂಜ್​ ಒಂದನ್ನು ಮಾಡಿದ್ದರು. ಈ ಚಾಲೆಂಜ್​ನಲ್ಲಿ ಸೋತರೆ ಊಟ ಮಾಡಿಸುವುದಾಗಿ ಪ್ರಿಯಾಂಕಾ ಹೇಳಿದ್ದರು. ಈ ಚಾಲೆಂಜ್​ನಲ್ಲಿ ಸೋತ ನಂತರದಲ್ಲಿ ಶಮಂತ್​ಗೆ ಪ್ರಿಯಾಂಕಾ ಊಟ ಮಾಡಿಸಿದರು. ಹೀಗಾಗಿ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಗುಸುಗುಸು ಮನೆಯಲ್ಲಿ ಹರಿದಾಡಿದೆ.

ಶಮಂತ್​-ಪ್ರಿಯಾಂಕಾ ಕ್ಲೋಸ್​ ಆಗಿರುವ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, ಈ ಫೇಕ್​ ರಿಲೇಶನ್​ಶಿಪ್​ ಬಗ್ಗೆ ಚಕ್ರವರ್ತಿ ಸಿಡಿದೆದ್ದಿದ್ದಾರೆ. ‘ಪ್ರಿಯಾಂಕಾರನ್ನು ಕಂಡರೆ ಅನೇಕರಿಗೆ ಆಗಲ್ಲ. ನಿನಗೆ ಪ್ರಿಯಾಂಕಾ ಊಟ ಮಾಡಿಸಿದ್ದು ಬೇರೆ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಲವ್​ ಗೇಮ್​ ಆಡಬೇಡ. ಇದು ಹೊರಗಿನವರಿಗೆ ಗೊತ್ತಾಗುತ್ತದೆ’ ಎಂದು ಶಮಂತ್​ಗೆ ಚಕ್ರವರ್ತಿ ತಿಳಿ ಹೇಳಿದರು.

ನಂತರ ಚಕ್ರವರ್ತಿ- ಪ್ರಶಾಂತ್​ ಮಾತನಾಡಿಕೊಂಡರು. ‘ಆ ಹುಡುಗಿ ಹೊರಗೆ ಶಮಂತ್​ನ ಮೀಟ್​ ಮಾಡುತ್ತಿರಲಿಲ್ಲ. ಕಾಲ್​ ಕಟ್​ ಮಾಡುತ್ತಿದ್ದಳು. ಇಲ್ಲಿ ಬಂದಮೇಲೆ ಇದೇನಿದು ಗೇಮ್​ ಪ್ಲ್ಯಾನ್​? ಆ ಹುಡುಗನನ್ನ ಏಕೆ ಹಾಳು ಮಾಡ್ತಾಳೆ? ಅದು ಬೇಜಾರಾಗ್ತಿದೆ’ ಎಂದರು ಚಕ್ರವರ್ತಿ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ 

Published On - 7:39 am, Mon, 28 June 21

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ