AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’

ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಅನೇಕರು ಟೀಕೆ ಮಾಡಿದ್ದರು.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’
ಶಮಂತ್​, ಪ್ರಿಯಾಂಕಾ, ಚಕ್ರವರ್ತಿ ಚಂದ್ರಚೂಡ್​
TV9 Web
| Edited By: |

Updated on:Jun 28, 2021 | 8:32 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕಾ ತಿಮ್ಮೇಶ್​ ತುಂಬಾನೇ ನೇರವಾಗಿ ಮಾತನಾಡುತ್ತಾರೆ. ಈ ವಿಚಾರಕ್ಕೆ ಅನೇಕರಿಗೆ ಅವರು ಇಷ್ಟವಾಗುವುದಿಲ್ಲ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ನಡೆದುಕೊಂಡ ರೀತಿ ಅನೇಕರ ಕಣ್ಣು ಕುಕ್ಕಿದೆ. ಶಮಂತ್​ ಹಾಗೂ ಪ್ರಿಯಾಂಕಾ ನಡುವೆ ಫೇಕ್​ ಸಂಬಧವಿದೆ ಎಂದು ಮನೆ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಮನೆಯವರು ಟೀಕೆ ಮಾಡಿದ್ದರು. ಈ ವೇಳೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಪ್ರಿಯಾಂಕಾಗೂ ಮನೆಯಲ್ಲಿದ್ದ ಶಮಂತ್​ಗೂ ಒಳ್ಳೆಯ ಗೆಳೆತನ ಬೆಳೆದಿತ್ತು.

ಜೂನ್​ 26ರ ಎಪಿಸೋಡ್​ನಲ್ಲಿ ಶಮಂತ್​ಗೆ ಪ್ರಿಯಾಂಕಾ ಚಾಲೆಂಜ್​ ಒಂದನ್ನು ಮಾಡಿದ್ದರು. ಈ ಚಾಲೆಂಜ್​ನಲ್ಲಿ ಸೋತರೆ ಊಟ ಮಾಡಿಸುವುದಾಗಿ ಪ್ರಿಯಾಂಕಾ ಹೇಳಿದ್ದರು. ಈ ಚಾಲೆಂಜ್​ನಲ್ಲಿ ಸೋತ ನಂತರದಲ್ಲಿ ಶಮಂತ್​ಗೆ ಪ್ರಿಯಾಂಕಾ ಊಟ ಮಾಡಿಸಿದರು. ಹೀಗಾಗಿ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಗುಸುಗುಸು ಮನೆಯಲ್ಲಿ ಹರಿದಾಡಿದೆ.

ಶಮಂತ್​-ಪ್ರಿಯಾಂಕಾ ಕ್ಲೋಸ್​ ಆಗಿರುವ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, ಈ ಫೇಕ್​ ರಿಲೇಶನ್​ಶಿಪ್​ ಬಗ್ಗೆ ಚಕ್ರವರ್ತಿ ಸಿಡಿದೆದ್ದಿದ್ದಾರೆ. ‘ಪ್ರಿಯಾಂಕಾರನ್ನು ಕಂಡರೆ ಅನೇಕರಿಗೆ ಆಗಲ್ಲ. ನಿನಗೆ ಪ್ರಿಯಾಂಕಾ ಊಟ ಮಾಡಿಸಿದ್ದು ಬೇರೆ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಲವ್​ ಗೇಮ್​ ಆಡಬೇಡ. ಇದು ಹೊರಗಿನವರಿಗೆ ಗೊತ್ತಾಗುತ್ತದೆ’ ಎಂದು ಶಮಂತ್​ಗೆ ಚಕ್ರವರ್ತಿ ತಿಳಿ ಹೇಳಿದರು.

ನಂತರ ಚಕ್ರವರ್ತಿ- ಪ್ರಶಾಂತ್​ ಮಾತನಾಡಿಕೊಂಡರು. ‘ಆ ಹುಡುಗಿ ಹೊರಗೆ ಶಮಂತ್​ನ ಮೀಟ್​ ಮಾಡುತ್ತಿರಲಿಲ್ಲ. ಕಾಲ್​ ಕಟ್​ ಮಾಡುತ್ತಿದ್ದಳು. ಇಲ್ಲಿ ಬಂದಮೇಲೆ ಇದೇನಿದು ಗೇಮ್​ ಪ್ಲ್ಯಾನ್​? ಆ ಹುಡುಗನನ್ನ ಏಕೆ ಹಾಳು ಮಾಡ್ತಾಳೆ? ಅದು ಬೇಜಾರಾಗ್ತಿದೆ’ ಎಂದರು ಚಕ್ರವರ್ತಿ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ 

Published On - 7:39 am, Mon, 28 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ