AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’

ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಅನೇಕರು ಟೀಕೆ ಮಾಡಿದ್ದರು.

‘ಹೊರಗೆ ಕಾಲ್​ ಕಟ್​ ಮಾಡುತ್ತಿದ್ದ ಹುಡುಗಿ, ಈಗ ಅವನಿಗೆ ಊಟ ಮಾಡಿಸುತ್ತಿದ್ದಾಳೆ’
ಶಮಂತ್​, ಪ್ರಿಯಾಂಕಾ, ಚಕ್ರವರ್ತಿ ಚಂದ್ರಚೂಡ್​
TV9 Web
| Edited By: |

Updated on:Jun 28, 2021 | 8:32 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕಾ ತಿಮ್ಮೇಶ್​ ತುಂಬಾನೇ ನೇರವಾಗಿ ಮಾತನಾಡುತ್ತಾರೆ. ಈ ವಿಚಾರಕ್ಕೆ ಅನೇಕರಿಗೆ ಅವರು ಇಷ್ಟವಾಗುವುದಿಲ್ಲ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ನಡೆದುಕೊಂಡ ರೀತಿ ಅನೇಕರ ಕಣ್ಣು ಕುಕ್ಕಿದೆ. ಶಮಂತ್​ ಹಾಗೂ ಪ್ರಿಯಾಂಕಾ ನಡುವೆ ಫೇಕ್​ ಸಂಬಧವಿದೆ ಎಂದು ಮನೆ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಶಮಂತ್ ಬ್ರೋ ಗೌಡ ಮನೆಗೆ ಬಂದಾಗ ಕೆಲವರ ಹಿಂದೆ ಸುತ್ತಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಯಾವ ಹುಡುಗಿಯನ್ನೂ ಅವರಿಗೆ ಬೀಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲವಲ್ಲ ಎಂದು ಮನೆಯವರು ಟೀಕೆ ಮಾಡಿದ್ದರು. ಈ ವೇಳೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಪ್ರಿಯಾಂಕಾಗೂ ಮನೆಯಲ್ಲಿದ್ದ ಶಮಂತ್​ಗೂ ಒಳ್ಳೆಯ ಗೆಳೆತನ ಬೆಳೆದಿತ್ತು.

ಜೂನ್​ 26ರ ಎಪಿಸೋಡ್​ನಲ್ಲಿ ಶಮಂತ್​ಗೆ ಪ್ರಿಯಾಂಕಾ ಚಾಲೆಂಜ್​ ಒಂದನ್ನು ಮಾಡಿದ್ದರು. ಈ ಚಾಲೆಂಜ್​ನಲ್ಲಿ ಸೋತರೆ ಊಟ ಮಾಡಿಸುವುದಾಗಿ ಪ್ರಿಯಾಂಕಾ ಹೇಳಿದ್ದರು. ಈ ಚಾಲೆಂಜ್​ನಲ್ಲಿ ಸೋತ ನಂತರದಲ್ಲಿ ಶಮಂತ್​ಗೆ ಪ್ರಿಯಾಂಕಾ ಊಟ ಮಾಡಿಸಿದರು. ಹೀಗಾಗಿ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಗುಸುಗುಸು ಮನೆಯಲ್ಲಿ ಹರಿದಾಡಿದೆ.

ಶಮಂತ್​-ಪ್ರಿಯಾಂಕಾ ಕ್ಲೋಸ್​ ಆಗಿರುವ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, ಈ ಫೇಕ್​ ರಿಲೇಶನ್​ಶಿಪ್​ ಬಗ್ಗೆ ಚಕ್ರವರ್ತಿ ಸಿಡಿದೆದ್ದಿದ್ದಾರೆ. ‘ಪ್ರಿಯಾಂಕಾರನ್ನು ಕಂಡರೆ ಅನೇಕರಿಗೆ ಆಗಲ್ಲ. ನಿನಗೆ ಪ್ರಿಯಾಂಕಾ ಊಟ ಮಾಡಿಸಿದ್ದು ಬೇರೆ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಲವ್​ ಗೇಮ್​ ಆಡಬೇಡ. ಇದು ಹೊರಗಿನವರಿಗೆ ಗೊತ್ತಾಗುತ್ತದೆ’ ಎಂದು ಶಮಂತ್​ಗೆ ಚಕ್ರವರ್ತಿ ತಿಳಿ ಹೇಳಿದರು.

ನಂತರ ಚಕ್ರವರ್ತಿ- ಪ್ರಶಾಂತ್​ ಮಾತನಾಡಿಕೊಂಡರು. ‘ಆ ಹುಡುಗಿ ಹೊರಗೆ ಶಮಂತ್​ನ ಮೀಟ್​ ಮಾಡುತ್ತಿರಲಿಲ್ಲ. ಕಾಲ್​ ಕಟ್​ ಮಾಡುತ್ತಿದ್ದಳು. ಇಲ್ಲಿ ಬಂದಮೇಲೆ ಇದೇನಿದು ಗೇಮ್​ ಪ್ಲ್ಯಾನ್​? ಆ ಹುಡುಗನನ್ನ ಏಕೆ ಹಾಳು ಮಾಡ್ತಾಳೆ? ಅದು ಬೇಜಾರಾಗ್ತಿದೆ’ ಎಂದರು ಚಕ್ರವರ್ತಿ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ 

Published On - 7:39 am, Mon, 28 June 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ