AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ

ಎರಡನೇ ವಾರದಲ್ಲಿ ಬಿಗ್​ ಬಾಸ್​ ಮನೆಯ ಸದಸ್ಯರ ನಡುವೆ ಕಿತ್ತಾಟ ನಡೆದಿದೆ. ಟಾಸ್ಕ್​ ನಿಭಾಯಿಸುವ ಸಂದರ್ಭದಲ್ಲಿ ಕೆಲವರ ವರ್ತನೆ ಬೇಸರ ತರಿಸಿದೆ.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ವೈಷ್ಣವಿ - ಸುದೀಪ್​ - ಶಮಂತ್​ ಬ್ರೋ ಗೌಡ
ಮದನ್​ ಕುಮಾರ್​
| Edited By: |

Updated on:Mar 14, 2021 | 9:22 PM

Share

ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್​ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ.

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ಟಾಸ್ಕ್​ ನಿಭಾಯಿಸುವಾಗ ಶಮಂತ್​ ಅವರು ತಮ್ಮ ಬಟ್ಟೆ ಎಳೆದರು ಎಂದು ವೈಷ್ಣವಿ ಹೇಳಿದ್ದಾರೆ. ಈ ವಿಚಾರವನ್ನೇ ಇಟ್ಟುಕೊಂಡು ಕಿಚ್ಚ ಸುದೀಪ್​ ವಾರದ ಪಂಚಾಯಿತಿಯಲ್ಲಿ ಮಾತುಕತೆ ಮಾಡಿದ್ದಾರೆ. ಮನೆಯೊಳಗಿನ ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಸುದೀಪ್​ ಕಾಳಜಿ ವಹಿಸಿದ್ದಾರೆ.

‘ಶಮಂತ್​ ಮೊದಲ ಬಾರಿಗೆ ನನ್ನ ಬಟ್ಟೆ ಎಳೆದರು. ಕೈ ಕಾಲು ಎಳೆಯಿರಿ. ಆದರೆ ಬಟ್ಟೆ ಎಳೆಯಬೇಡಿ ಎಂದು ನಾನು ಶಮಂತ್​ಗೆ ಹೇಳಿದೆ. ಒಮ್ಮೆ ಸುಮ್ಮನಾದೆ. ಆಮೇಲೆ ಅವರು ಸಾರಿ ಕೇಳಿದರು. ಆದರೆ ಮತ್ತೊಮ್ಮೆ ಅದೇ ರೀತಿ ಮಾಡಿದರು. ಅಲ್ಲದೆ, ನನ್ನನ್ನು ಅವರು ತಳ್ಳಿದರು. ಆಗಲೂ ನನಗೆ ಬೇಜಾರಾಯಿತು’ ಎಂದು ತಮ್ಮ ಅಳಲನ್ನು ವೈಷ್ಣವಿ ತೋಡಿಕೊಂಡಿದ್ದಾರೆ. ನಿಮ್ಮ ಪ್ರಕಾರ ನಿಮ್ಮ ತಂಡದವರು ಎದುರಾಳಿ ತಂಡದವರ ಜೊತೆ ಈ ರೀತಿ ನಡೆದುಕೊಂಡಿಲ್ಲವೇ ಎಂದು ಸುದೀಪ್​ ಕೇಳಿದ್ದಕ್ಕೆ ‘ಇರಬಹುದು’ ಎಂದು ವೈಷ್ಣವಿ ಉತ್ತರ ನೀಡಿದರು.​

ಮಂಜು ಮತ್ತು ಶಮಂತ್​ ಅವರು ನಿಧಿ ಜೊತೆ ಬೇರೆ ರೀತಿ ನಡೆದುಕೊಂಡರು ಎಂಬ ಆರೋಪ ಕೂಡ ಕೇಳಿಬಂತು. ಅದಕ್ಕೂ ಸುದೀಪ್​ ಪ್ರತಿಕ್ರಿಯೆ ನೀಡಿದರು. ‘ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯ ಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

Published On - 6:45 pm, Sun, 14 March 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More