Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ

ಎರಡನೇ ವಾರದಲ್ಲಿ ಬಿಗ್​ ಬಾಸ್​ ಮನೆಯ ಸದಸ್ಯರ ನಡುವೆ ಕಿತ್ತಾಟ ನಡೆದಿದೆ. ಟಾಸ್ಕ್​ ನಿಭಾಯಿಸುವ ಸಂದರ್ಭದಲ್ಲಿ ಕೆಲವರ ವರ್ತನೆ ಬೇಸರ ತರಿಸಿದೆ.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ವೈಷ್ಣವಿ - ಸುದೀಪ್​ - ಶಮಂತ್​ ಬ್ರೋ ಗೌಡ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Mar 14, 2021 | 9:22 PM

ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್​ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ.

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ಟಾಸ್ಕ್​ ನಿಭಾಯಿಸುವಾಗ ಶಮಂತ್​ ಅವರು ತಮ್ಮ ಬಟ್ಟೆ ಎಳೆದರು ಎಂದು ವೈಷ್ಣವಿ ಹೇಳಿದ್ದಾರೆ. ಈ ವಿಚಾರವನ್ನೇ ಇಟ್ಟುಕೊಂಡು ಕಿಚ್ಚ ಸುದೀಪ್​ ವಾರದ ಪಂಚಾಯಿತಿಯಲ್ಲಿ ಮಾತುಕತೆ ಮಾಡಿದ್ದಾರೆ. ಮನೆಯೊಳಗಿನ ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಸುದೀಪ್​ ಕಾಳಜಿ ವಹಿಸಿದ್ದಾರೆ.

‘ಶಮಂತ್​ ಮೊದಲ ಬಾರಿಗೆ ನನ್ನ ಬಟ್ಟೆ ಎಳೆದರು. ಕೈ ಕಾಲು ಎಳೆಯಿರಿ. ಆದರೆ ಬಟ್ಟೆ ಎಳೆಯಬೇಡಿ ಎಂದು ನಾನು ಶಮಂತ್​ಗೆ ಹೇಳಿದೆ. ಒಮ್ಮೆ ಸುಮ್ಮನಾದೆ. ಆಮೇಲೆ ಅವರು ಸಾರಿ ಕೇಳಿದರು. ಆದರೆ ಮತ್ತೊಮ್ಮೆ ಅದೇ ರೀತಿ ಮಾಡಿದರು. ಅಲ್ಲದೆ, ನನ್ನನ್ನು ಅವರು ತಳ್ಳಿದರು. ಆಗಲೂ ನನಗೆ ಬೇಜಾರಾಯಿತು’ ಎಂದು ತಮ್ಮ ಅಳಲನ್ನು ವೈಷ್ಣವಿ ತೋಡಿಕೊಂಡಿದ್ದಾರೆ. ನಿಮ್ಮ ಪ್ರಕಾರ ನಿಮ್ಮ ತಂಡದವರು ಎದುರಾಳಿ ತಂಡದವರ ಜೊತೆ ಈ ರೀತಿ ನಡೆದುಕೊಂಡಿಲ್ಲವೇ ಎಂದು ಸುದೀಪ್​ ಕೇಳಿದ್ದಕ್ಕೆ ‘ಇರಬಹುದು’ ಎಂದು ವೈಷ್ಣವಿ ಉತ್ತರ ನೀಡಿದರು.​

ಮಂಜು ಮತ್ತು ಶಮಂತ್​ ಅವರು ನಿಧಿ ಜೊತೆ ಬೇರೆ ರೀತಿ ನಡೆದುಕೊಂಡರು ಎಂಬ ಆರೋಪ ಕೂಡ ಕೇಳಿಬಂತು. ಅದಕ್ಕೂ ಸುದೀಪ್​ ಪ್ರತಿಕ್ರಿಯೆ ನೀಡಿದರು. ‘ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯ ಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

Published On - 6:45 pm, Sun, 14 March 21

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ