AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ

ಎರಡನೇ ವಾರದಲ್ಲಿ ಬಿಗ್​ ಬಾಸ್​ ಮನೆಯ ಸದಸ್ಯರ ನಡುವೆ ಕಿತ್ತಾಟ ನಡೆದಿದೆ. ಟಾಸ್ಕ್​ ನಿಭಾಯಿಸುವ ಸಂದರ್ಭದಲ್ಲಿ ಕೆಲವರ ವರ್ತನೆ ಬೇಸರ ತರಿಸಿದೆ.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ವೈಷ್ಣವಿ - ಸುದೀಪ್​ - ಶಮಂತ್​ ಬ್ರೋ ಗೌಡ
ಮದನ್​ ಕುಮಾರ್​
| Edited By: |

Updated on:Mar 14, 2021 | 9:22 PM

Share

ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್​ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ.

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ಟಾಸ್ಕ್​ ನಿಭಾಯಿಸುವಾಗ ಶಮಂತ್​ ಅವರು ತಮ್ಮ ಬಟ್ಟೆ ಎಳೆದರು ಎಂದು ವೈಷ್ಣವಿ ಹೇಳಿದ್ದಾರೆ. ಈ ವಿಚಾರವನ್ನೇ ಇಟ್ಟುಕೊಂಡು ಕಿಚ್ಚ ಸುದೀಪ್​ ವಾರದ ಪಂಚಾಯಿತಿಯಲ್ಲಿ ಮಾತುಕತೆ ಮಾಡಿದ್ದಾರೆ. ಮನೆಯೊಳಗಿನ ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಸುದೀಪ್​ ಕಾಳಜಿ ವಹಿಸಿದ್ದಾರೆ.

‘ಶಮಂತ್​ ಮೊದಲ ಬಾರಿಗೆ ನನ್ನ ಬಟ್ಟೆ ಎಳೆದರು. ಕೈ ಕಾಲು ಎಳೆಯಿರಿ. ಆದರೆ ಬಟ್ಟೆ ಎಳೆಯಬೇಡಿ ಎಂದು ನಾನು ಶಮಂತ್​ಗೆ ಹೇಳಿದೆ. ಒಮ್ಮೆ ಸುಮ್ಮನಾದೆ. ಆಮೇಲೆ ಅವರು ಸಾರಿ ಕೇಳಿದರು. ಆದರೆ ಮತ್ತೊಮ್ಮೆ ಅದೇ ರೀತಿ ಮಾಡಿದರು. ಅಲ್ಲದೆ, ನನ್ನನ್ನು ಅವರು ತಳ್ಳಿದರು. ಆಗಲೂ ನನಗೆ ಬೇಜಾರಾಯಿತು’ ಎಂದು ತಮ್ಮ ಅಳಲನ್ನು ವೈಷ್ಣವಿ ತೋಡಿಕೊಂಡಿದ್ದಾರೆ. ನಿಮ್ಮ ಪ್ರಕಾರ ನಿಮ್ಮ ತಂಡದವರು ಎದುರಾಳಿ ತಂಡದವರ ಜೊತೆ ಈ ರೀತಿ ನಡೆದುಕೊಂಡಿಲ್ಲವೇ ಎಂದು ಸುದೀಪ್​ ಕೇಳಿದ್ದಕ್ಕೆ ‘ಇರಬಹುದು’ ಎಂದು ವೈಷ್ಣವಿ ಉತ್ತರ ನೀಡಿದರು.​

ಮಂಜು ಮತ್ತು ಶಮಂತ್​ ಅವರು ನಿಧಿ ಜೊತೆ ಬೇರೆ ರೀತಿ ನಡೆದುಕೊಂಡರು ಎಂಬ ಆರೋಪ ಕೂಡ ಕೇಳಿಬಂತು. ಅದಕ್ಕೂ ಸುದೀಪ್​ ಪ್ರತಿಕ್ರಿಯೆ ನೀಡಿದರು. ‘ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯ ಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

Published On - 6:45 pm, Sun, 14 March 21

Follow Us
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ