AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!

Nirmala Chennappa: ಬಿಗ್​ ಬಾಸ್​ ಮನೆಯಲ್ಲಿ ಇರುವ ಇತರೆ ಎಲ್ಲ ಸ್ಪರ್ಧಿಗಳಿಗಿಂತಲೂ ನಿರ್ಮಲಾ ಚೆನ್ನಪ್ಪ ಡಿಫರೆಂಟ್​ ಆಗಿ ವರ್ತಿಸುತ್ತಿದ್ದಾರೆ. ಅವರು ಒಬ್ಬರೇ ಮಾತನಾಡಿಕೊಳ್ಳುವುದು ಏಕೆ ಎಂಬುದಕ್ಕೆ ಅವರ ಪತಿ ಕಾರಣ ತಿಳಿಸಿದ್ದಾರೆ.

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!
ನಿರ್ಮಲಾ ಚೆನ್ನಪ್ಪ - ಸರ್ದಾರ್​ ಸತ್ಯ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Mar 08, 2021 | 6:36 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾರೆ. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಅದರ ಬಗ್ಗೆ ಅವರ ಪತಿ ಸರ್ದಾರ್ ಸತ್ಯ ಬಾಯಿ ಬಿಟ್ಟಿದ್ದಾರೆ. ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾರೆ ಎಂಬುದು. ಹಗಲು-ರಾತ್ರಿ ಎನ್ನದೇ ಅವರು ಏನೇನೋ ಮಾತನಾಡುತ್ತ ಇರುತ್ತಾರೆ. ಕ್ಯಾಮರಾ ಮುಂದೆ ನಿಂತುಕೊಂಡು ಒಬ್ಬೊಬ್ಬರೇ ಈ ರೀತಿ ವರ್ತಿಸುವುದಕ್ಕೆ ಒಂದು ಮುಖ್ಯ ಕಾರಣ ಇದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರ ಪತಿ  ಕೆಲವು ವಿಷಯ ಹಂಚಿಕೊಂಡಿದ್ದಾರೆ.

‘ನಿರ್ಮಲಾ ಅವರಿಗೆ ಕ್ಯಾಮರಾ ಎಂದರೆ ದೇವರು. ಅದರ ಜೊತೆ ಅವರು ಹೆಚ್ಚಿನ ಸಮಯ ಕಳೆಯುತ್ತಾರೆ. ಯಾಕೆಂದರೆ ಅವರು ಕ್ರಿಯೇಟಿವ್​ ಡೈರೆಕ್ಟರ್​. ಕ್ಯಾಮರಾ ಅವರಿಗೆ ದೇವರ ಸಮಾನ. ತಾಳ್ಮೆ ಎಲ್ಲ ವಿಚಾರವನ್ನು ಬೆಳಕಿಗೆ ತರುತ್ತದೆ’ ಎಂದು ಸರ್ದಾರ್​ ಸತ್ಯ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ತಮ್ಮ ಪತ್ನಿಗೆ ವೋಟ್​ ಮಾಡುವ ಮೂಲಕ ಬೆಂಬಲ ನೀಡುವಂತೆ ಬಿಗ್​ ಬಾಸ್​ ವೀಕ್ಷಕರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಮೊದಲ ವಾರ ನಿರ್ಮಲಾ ಚೆನ್ನಪ್ಪ ಅವರು ಎಲಿಮಿನೇಷನ್​ ಭೀತಿ ಅನುಭವಿಸಿದ್ದರು. ಯಾವ ಆಯಾಮದಿಂದ ನೋಡಿದರೂ ಮನೆಯ ಇತರೆ ಸ್ಪರ್ಧಿಗಳಿಗೆ ಅವರ ವರ್ತನೆ ಹಿಡಿಸುತ್ತಿರಲಿಲ್ಲ. ಅವರ ವಿಚಿತ್ರ ವರ್ತನೆಯ ಕಾರಣದಿಂದ ಎಲ್ಲರೂ ಅವರಿಗೆ ಡಿಸ್ಲೈಕ್​ ಬ್ಯಾಡ್ಜ್​ ನೀಡಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಮಧ್ಯರಾತ್ರಿ ಅವರು ಮೇಕಪ್ ಮಾಡಿಕೊಂಡು, ಸೀರೆ ಧರಿಸಿ ಒಬ್ಬರೇ ಮಾತನಾಡುತ್ತ ಕುಳಿತಿದ್ದು ಆತಂಕ ಮೂಡಿಸಿತ್ತು.

ಮೊದಲ ವಾರದಲ್ಲಿ ಧನುಶ್ರೀ ಎಲಿಮಿನೇಟ್​ ಆಗಿದ್ದು, ಸದ್ಯಕ್ಕಂತೂ ನಿರ್ಮಲಾ ಬಚಾವ್​ ಆಗಿದ್ದಾರೆ. ನಿರ್ಮಲಾ ಅವರ ವರ್ತನೆ ಬಗ್ಗೆ ವಾರದ ಪಂಚಾಯಿತಿಯಲ್ಲಿ ಸುದೀಪ್​ ಕೂಡ ಚರ್ಚೆ ಮಾಡಿದರು. ಆಗಲೂ ಸಹ ‘ನಾನು ಕ್ಯಾಮರಾ ಜೊತೆ ಮಾತನಾಡಿಕೊಂಡು ಇರಬಹುದಾ ಅಥವಾ ಇರಬಾರದಾ ಅಣ್ಣಾ..’ ಎಂದು ಸುದೀಪ್​ ಬಳಿ ನಿರ್ಮಲಾ ಸಲಹೆ ಕೇಳಿದರು. ‘ಮನೆಯಲ್ಲಿ ಉಳಿದುಕೊಳ್ಳಲು ಏನು ಬೇಕೋ ಅದೆಲ್ಲವನ್ನೂ ಮಾಡಿ. ನಿಮಗೆ ಇಷ್ಟಬಂದಂತೆ ಇರಬಹುದು. ಅತಿಯಾದರೆ ಅಮೃತವೂ ವಿಷ. ಇದನ್ನು ಹೇಳಬೇಕು ಅಂತ ಅನಿಸಿತು. ಅದಕ್ಕೆ ಹೇಳಿದ್ದೇನೆ’ ಎಂದು ಸುದೀಪ್​ ಸಲಹೆ ನೀಡಿದರು.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ನಿಂದ ಧನುಶ್ರೀ ಔಟ್​! ಎಲಿಮಿನೇಟ್​ ಆಗಿದ್ದಕ್ಕೆ ಇಲ್ಲಿದೆ ಬಲವಾದ ಕಾರಣ

Bigg Boss Kannada : ಬಿಗ್​ ಬಾಸ್​ ಮನೆಯಲ್ಲಿ ದರ್ಶನ್​ ಹಾಡು ಯಾಕೆ ಪ್ಲೇ ಆಗಲ್ಲ? ಸುದೀಪ್​ಗೆ ಪ್ರಶ್ನೆ ಎಸೆದ ‘ಡಿ ಬಾಸ್’​ ಫ್ಯಾನ್ಸ್​!

Published On - 5:33 pm, Mon, 8 March 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!