AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜುಗೆ ‘ಐ ಲವ್​ ಯೂ’ ಎಂದ ದಿವ್ಯಾ ಉರುಡುಗ! ಬಿಗ್​ ಬಾಸ್​ನಲ್ಲಿ ಏನು ನಡೀತಾ ಇದೆ?

Divya Uruduga: ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಮಂಜು ಪಾವಗಡ ಸಖತ್​ ಗಮನ ಸೆಳೆಯುತ್ತಿದ್ದಾರೆ. ಅಚ್ಚರಿ ಎಂದರೆ ಲವ್​ ಸ್ಟೋರಿ ಕಾರಣಕ್ಕಾಗಿ ಅವರು ಹೆಚ್ಚು ಹೈಲೈಟ್​ ಆಗುತ್ತಿದ್ದಾರೆ.

Bigg Boss Kannada: ಮಂಜುಗೆ ‘ಐ ಲವ್​ ಯೂ’ ಎಂದ ದಿವ್ಯಾ ಉರುಡುಗ! ಬಿಗ್​ ಬಾಸ್​ನಲ್ಲಿ ಏನು ನಡೀತಾ ಇದೆ?
ಮಂಜು ಪಾವಗಡ - ದಿವ್ಯಾ ಉರುಡುಗ
ಮದನ್​ ಕುಮಾರ್​
| Edited By: |

Updated on:Mar 09, 2021 | 2:52 PM

Share

ಬಹುತೇಕ ಮಂಜು ಪಾವಗಡ ಅವರೇ ಈ ಬಾರಿ ಬಿಗ್​ ಬಾಸ್​ ಗೆಲ್ಲಬಹುದು ಎಂಬ ಅಭಿಪ್ರಾಯ ಎಲ್ಲರಲ್ಲೂ ಮೂಡುತ್ತಿದೆ. ಮನೆಯ ಎಲ್ಲ ಸದಸ್ಯರನ್ನೂ ನಗಿಸುತ್ತ, ಟಾಸ್ಕ್​ಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತ ಅವರು ಹೆಚ್ಚು ಸ್ಕೋರ್​ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರ ಪ್ರೇಮ್​ ಕಹಾನಿ ಕೂಡ ಎತ್ತೆತ್ತಲೋ ಹೋಗುತ್ತಿದೆ. ಇಷ್ಟು ದಿನ ದಿವ್ಯಾ ಸುರೇಶ್​ ಜೊತೆ ಸಲುಗೆಯಿಂದ ನಡೆದುಕೊಳ್ಳುತ್ತಿದ್ದ ಅವರು ಈಗ ದಿವ್ಯಾ ಉರುಡುಗ ಕಡೆಗೆ ಮನಸ್ಸು ಹರಿಸಿದ್ದಾರೆ!

ಸೋಮವಾರದ (ಮಾ.8) ಎಪಿಸೋಡ್​ನಲ್ಲಿ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಯಿತು. ಒಬ್ಬರು ಇನ್ನೊಬ್ಬರನ್ನು ಸ್ವಿಮಿಂಗ್​ ಪೂಲ್​ಗೆ ತಳ್ಳುವ ಈ ಗೇಮ್​ನಲ್ಲಿ ಮಂಜು ಪಾವಗಡ ಅವರು ದಿವ್ಯಾ ಉರುಡುಗ ಅವರನ್ನು ಟಾರ್ಗೆಟ್​ ಮಾಡಿದರು. ದಿವ್ಯಾ ಅವರನ್ನು ಪೂಲ್​ಗೆ ತಳ್ಳುವಲ್ಲಿ ಮಂಜು ಯಶಸ್ವಿ ಕೂಡ ಆದರು. ಆ ಗ್ಯಾಪ್​ನಲ್ಲೇ ಮಂಜುಗೆ ದಿವ್ಯಾ ‘ಐ ಲವ್​ ಯೂ’ ಎಂದಿದ್ದಾರೆ! ಹಾಗಂತ ದಿವ್ಯಾಗೆ ಮಂಜು ಮೇಲೆ ಪ್ರೀತಿ ಚಿಗುರಿದೆಯೇ? ಅಸಲಿ ವಿಷಯ ಬೇರೆಯೇ ಇದೆ.

‘ನಿನಗೆ ಒಂದು ಸೀಕ್ರೆಟ್​ ಹೇಳುತ್ತೇನೆ. ತಾಕತ್ತಿದ್ದರೆ ನೀನು ಅದನ್ನು ಬೇರೆಯವರಿಗೆ ಹೇಳು ನೋಡೋಣ’ ಎಂದು ದಿವ್ಯಾಗೆ ಮಂಜು ಸವಾಲು ಹಾಕಿದರು. ಪೂಲ್​ಗೆ ಬೀಳುತ್ತಿದ್ದಂತೆಯೇ ದಿವ್ಯಾ ಕಿವಿಯಲ್ಲಿ ಮಂಜು ಏನೋ ಸೀಕ್ರೆಟ್​ ಹೇಳಿಯೇ ಬಿಟ್ಟರು. ಅದೇನು ಸೀಕ್ರೆಟ್​ ಹೇಳಿರಬಹುದು ಎಂದು ಮನೆಯ ಇತರೆ ಎಲ್ಲ ಸದಸ್ಯರು ಒಂದು ಕ್ಷಣ ತಲೆ ಕೆಡಿಸಿಕೊಂಡರು. ‘ಧೈರ್ಯ ಇದ್ದರೆ ಜೋರಾಗಿ ಹೇಳು ನೋಡೋಣ’ ಎಂದು ದಿವ್ಯಾಗೆ ಮಂಜು ಸವಾಲು ಹಾಕಿದರು. ಸೋಲು ಒಪ್ಪಿಕೊಳ್ಳಬಾರದು ಎಂಬ ಕಾರಣಕ್ಕೆ ದಿವ್ಯಾ ಅದೇನು ಎಂಬುದನ್ನು ಹೇಳಿಯೇ ಬಿಟ್ಟರು. ‘ಐ ಲವ್​ ಯೂ’ ಎಂದು ಕೂಗಿ ಹೇಳಿದರು. ಅಂದರೆ, ದಿವ್ಯಾ ಕಿವಿಯಲ್ಲಿ ಮಂಜು ಹೇಳಿದ ಸೀಕ್ರೆಟ್​ ಕೂಡ ‘ಐ ಲವ್​ ಯೂ’ ಎಂಬುದು ಜಗಜ್ಜಾಹೀರಾಯಿತು.

ಮಂಜು ಮಾಡಿದ ಈ ಫ್ಲರ್ಟ್ ಕೆಲಸ ನೋಡಿ ದಿವ್ಯಾ ಸುರೇಶ್​ ಮುಖ ತಿರುಗಿಸಿಕೊಂಡರು. ಇಷ್ಟು ದಿನ ದಿವ್ಯಾ ಸುರೇಶ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದ ಮಂಜು ಈಗ ನಿಧಾನವಾಗಿ ದಿವ್ಯಾ ಉರುಡುಗ ಕಡೆಗೆ ವಾಲುತ್ತಿರುವುದು ಈ ‘ಐ ಲವ್​ ಯೂ’ ಪ್ರಸಂಗದಿಂದ ಗೊತ್ತಾಗಿದೆ. ಒಟ್ಟಿನಲ್ಲಿ ಅವರ ಪ್ರೇಮ್​ ಕಹಾನಿ ಬೇರೆ ರೂಪ ಪಡೆದುಕೊಳ್ಳುತ್ತಿದೆ. ಬಿಗ್​ ಬಾಸ್​ ಮನೆಯಲ್ಲಿ ಆಗುವ ಈ ಪ್ರೀತಿ-ಪ್ರೇಮವನ್ನು ಗಂಭೀರವಾಗಿ ಪರಿಗಣಿಸುವುದು ಅವರವರಿಗೆ ಬಿಟ್ಟ ವಿಚಾರ.

ಇದನ್ನೂ ಓದಿ: Bigg Boss Day 2: ಬಿಗ್​ ಬಾಸ್​ ಮನೆಯಲ್ಲೇ ಮದುವೆಯಾದ ಮಂಜು ಪಾವಗಡ & ದಿವ್ಯಾ ಸುರೇಶ್​!

Bigg Boss Kannada: ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಟಿಕ್ ಟಾಕ್ ಸ್ಟಾರ್ ಧನುಶ್ರೀ ಮೊದಲ ಮಾತು.

Published On - 1:27 pm, Tue, 9 March 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!