AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮನುಷ್ಯತ್ವ ಮರೆತರಾ ಬಿಗ್​ ಬಾಸ್​ ಸ್ಪರ್ಧಿಗಳು? ಎರಡೇ ವಾರಕ್ಕೆ ಅಸಲಿ ಮುಖಗಳು ಬಹಿರಂಗ!

ಇಷ್ಟು ದಿನ ಶಾಂತವಾಗಿದ್ದ ಬಿಗ್​ ಬಾಸ್​ ಮನೆ ಈಗ ರಣಾಂಗಣ ಆಗಿದೆ. ಒಬ್ಬರ ಮೇಲೆ ಇನ್ನೊಬ್ಬರು ಆಕ್ರಮಣ ಮಾಡಿದ್ದು, ಪರಿಸ್ಥಿತಿ ಬೇರೆ ಮಟ್ಟಕ್ಕೆ ಹೋಗಿದೆ.

Bigg Boss Kannada: ಮನುಷ್ಯತ್ವ ಮರೆತರಾ ಬಿಗ್​ ಬಾಸ್​ ಸ್ಪರ್ಧಿಗಳು? ಎರಡೇ ವಾರಕ್ಕೆ ಅಸಲಿ ಮುಖಗಳು ಬಹಿರಂಗ!
ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Edited By: |

Updated on: Mar 10, 2021 | 11:24 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. 16 ಸ್ಪರ್ಧಿಗಳ ನಡುವೆ ನಡೆಯುತ್ತಿರುವ ಪೈಪೋಟಿಯು ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಇತರೆ ಸ್ಪರ್ಧಿಗಳ ಮೇಲೆ ಆಕ್ರಮಣ ಮಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ಆತಂಕಕಾರಿ ವೈರಸ್​!

9ನೇ ದಿನ ಮನೆಯ ಸದಸ್ಯರಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಯಿತು. ವೈರಸ್​ ಮತ್ತು ಮನುಷ್ಯರು ಎಂದು 2 ತಂಡ ಮಾಡಲಾಯಿತು. ವೈರಸ್​ ಟೀಮ್​ನವರು ಮನುಷ್ಯರ ಮೇಲೆ ದಾಳಿ ಮಾಡಬೇಕು. ಅದರಿಂದ ತಪ್ಪಿಸಿಕೊಳ್ಳಲು ಮನುಷ್ಯರು ಪ್ರಯತ್ನಿಸಬೇಕು. ಒಂದು ವೇಳೆ ವೈರಸ್​ ತಗುಲಿಸಿಕೊಂಡರೆ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ ಸಮಯದಲ್ಲಿ ವೈರಸ್​ಗಳು ನೀಡುವ ಶಿಕ್ಷೆಯನ್ನು ಮನುಷ್ಯರು ಅನುಭವಿಸಬೇಕು. ಇದು ಆಟದ ರೂಲ್ಸ್​.

ವೈರಸ್​ ಹೆಸರು ಕೇಳುತ್ತಿದ್ದಂತೆಯೇ ಮನೆಯ ಎಲ್ಲ ಸದಸ್ಯರೂ ಅಲರ್ಟ್ ಆದರು. ಆಟವನ್ನು ಕೂಡ ಅಷ್ಟೇ ಗಂಭೀರವಾಗಿ ತೆಗೆದುಕೊಂಡರು. ಆಟ ಆಡುವ ಭರದಲ್ಲಿ ಕೊಂಚ ಅತಿರೇಕ ಎಂಬಂತೆ ಎಲ್ಲರೂ ವರ್ತಿಸಿದ್ದಾರೆ. ವೈರಸ್​ ವರ್ಸಸ್​ ಮನುಷ್ಯರ ಯುದ್ಧದಲ್ಲಿ ನಿರ್ಮಲಾ ಚೆನ್ನಪ್ಪ ಅವರ ಕುತ್ತಿಗೆಗೆ ನೋವಾಯಿತು. ಶಮಂತ್​ಗೆ ಉಸಿರಾಡಲು ಕಷ್ಟ ಆಗುವ ರೀತಿಯಲ್ಲಿ ಪ್ರಶಾಂತ್​ ಸಂಬರಗಿ ನಡೆದುಕೊಂಡರು. ಆಟ ಮುಖ್ಯವೇ ಹೊರತು ಮನೆಯ ಸದಸ್ಯರ ಸುರಕ್ಷೆ ಮುಖ್ಯವಲ್ಲ ಎಂಬ ಮನೋಭಾವದಲ್ಲಿ ಎಲ್ಲರೂ ದಾಳಿ ಮಾಡಿದರು!

ಕ್ವಾರಂಟೈನ್​ ಶಿಕ್ಷೆ ಅನುಭವಿಸಿದ ಗೀತಾ ಭಾರತಿ ಭಟ್​ ಅವರ ಮುಖಕ್ಕೆ ಡಂಬೆಲ್​ ತಾಗಿ ನೋವಾಯಿತು. ದಿವ್ಯಾ ಉರುಡುಗ ಮುಂತಾದವರಿಗೆ ಪರಚಿದ ಗಾಯಗಳಾಗಿವೆ. ಎಲ್ಲರೂ ಆಟ ಆಡಿದ ರೀತಿ ನೋಡಿದರೆ ಅಲ್ಲೇನೋ ರಿಯಲ್​ ಹೊಡೆದಾಟ ನಡೆಯುತ್ತಿದೆಯೇನೋ ಎಂಬಂತೆ ಭಾಸವಾಗುತ್ತಿತ್ತು. ಇದೆಲ್ಲವನ್ನೂ ವೀಕ್ಷಕರು ಉಸಿರು ಬಿಗಿ ಹಿಡಿದು ನೋಡಬೇಕಾಯಿತು! ಈ ಟಾಸ್ಕ್​ನಿಂದಾಗಿ ಒಳಗಿರುವವರ ಅಸಲಿ ಮುಖಗಳು ಅನಾವರಣ ಆಗಿವೆ. ಇಷ್ಟು ದಿನ ಟಾಸ್ಕ್​ ಮುಗಿದ ಬಳಿಕ ಒಂದಾಗುತ್ತಿದ್ದ ಎಲ್ಲರೂ 9ನೇ ದಿನ ಮಾತ್ರ ಟಾಸ್ಕ್​ ನಂತರವೂ ಮುಖ ಗಂಟು ಹಾಕಿಕೊಂಡಿದ್ದರು!

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

Bigg Boss Kannada: ಮಂಜುಗೆ ‘ಐ ಲವ್​ ಯೂ’ ಎಂದ ದಿವ್ಯಾ ಉರುಡುಗ! ಬಿಗ್​ ಬಾಸ್​ನಲ್ಲಿ ಏನು ನಡೀತಾ ಇದೆ?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ