AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

ವೈರಸ್​ ಎಂಬ ಪದ ಕೇಳಿದರೆ ಎಲ್ಲರೂ ಒಂದು ಕ್ಷಣ ಕಂಗಾಲಾಗುತ್ತಾರೆ. ಈಗ ಬಿಗ್​ ಬಾಸ್​ ಮನೆಯೊಳಗಿನ ಸ್ಪರ್ಧಿಗಳಿಗೂ ಅದೇ ಆತಂಕ ಶುರು ಆಗಿದೆ. ದೊಡ್ಮನೆಯೊಳಗೆ ವೈರಸ್​ ಕಾಲಿಟ್ಟಿದೆ.

Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ
ನಿರ್ಮಲಾ ಚೆನ್ನಪ್ಪ ಬಿಗ್​ ಬಾಸ್​
Follow us
ಮದನ್​ ಕುಮಾರ್​
|

Updated on: Mar 09, 2021 | 3:13 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ದಿನದಿನವೋ ರೋಚಕತೆ ಹೆಚ್ಚುತ್ತಿದೆ. ಇಷ್ಟು ದಿನ ಪ್ರೀತಿ-ಪ್ರೇಮ, ಕಾಮಿಡಿ-ಜಗಳ ಮಾಡಿಕೊಂಡಿದ್ದ ಸ್ಪರ್ಧಿಗಳಿಗೆ ಸವಾಲೊಡ್ಡಲು ಈಗ ವೈರಸ್​ ಬಂದಿದೆ. ಮನೆಯೊಳಗೆ ವೈರಸ್​ ಎಂಟ್ರಿ ಆಗುತ್ತಿದ್ದಂತೆಯೇ ಎಲ್ಲರ ವರ್ತನೆ ಬದಲಾಗಿದೆ. ಆಟದ ಶೈಲಿಯೂ ಬೇರೆ ಸ್ವರೂಪ ಪಡೆದುಕೊಂಡಿದೆ.

‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಪ್ರೋಮೋಗಳಲ್ಲಿ ಈ ವೈರಸ್​ ವಿಚಾರ ಬಯಲಾಗಿದೆ. ‘ಇಡೀ ಜಗತ್ತು ವೈರಸ್​ ದಾಳಿಯಿಂದ ಕಂಗಾಲಾಗಿದ್ದನ್ನು ನೀವೆಲ್ಲರೂ ನೋಡಿದ್ದೀರಿ. ಈ ಮನೆ ಕೂಡ ಈಗ ವೈರಸ್​ ಜೊತೆಗಿನ ಹೋರಾಟಕ್ಕೆ ಸಿದ್ಧವಾಗಬೇಕಿದೆ. ಈ ದಾಳಿಯಿಂದ ತಪ್ಪಿಸಿಕೊಳ್ಳಲು ಮನುಷ್ಯರು ಎಚ್ಚರವಾಗಿರಬೇಕು’ ಎಂಬ ಬಿಗ್​ ಬಾಸ್​ ಧ್ವನಿ ಮನೆಯೊಳಗೆ ಕೇಳಿಸಿದೆ!

ವೈರಸ್​ ಎಂದರೆ ಇದು ನಿಜವಾದ ಕೊರೊನಾ ವೈರಸ್​ ಅಲ್ಲ. ಕೊರೊನಾ ವೈರಸ್​ ರೀತಿಯ ಥೀಮ್​ನಲ್ಲಿ ಒಂದು ಗೇಮ್​ ಆಡಿಸಲಾಗಿದೆ. ಅದರಲ್ಲಿ ಎಲ್ಲರೂ ಹೆಚ್ಚು ಆಕ್ರಮಣಕಾರಿಯಾಗಿ ಭಾಗವಹಿಸಿದ್ದಾರೆ. ಆ ಮೂಲಕ ಮನೆಯೊಳಗೆ ಟೆನ್ಷನ್​ ಸೃಷ್ಟಿ ಆಗಿದೆ. ತಮ್ಮ ತಮ್ಮ ಉಳಿವಿಗಾಗಿ ಎಲ್ಲರೂ ತೀವ್ರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಏನು ಈ ಆಟದ ಅಸಲಿಯತ್ತು ಎಂಬುದು ಮಂಗಳವಾರದ (ಮಾ.9) ಎಪಿಸೋಡ್​ನಲ್ಲಿ ಬಯಲಾಗಲಿದೆ.

ವೈರಸ್​ ಥೀಮ್​ನ ಈ ಆಟ ಎಷ್ಟೊಂದು ತೀವ್ರವಾಗಿದೆ ಎಂದರೆ, ಇದರಲ್ಲಿ ಭಾಗವಹಿಸಿದ ವೇಳೆ ನಿರ್ಮಲಾ ಚೆನ್ನಪ್ಪ ಅವರಿಗೆ ಪೆಟ್ಟಾಗಿದೆ! ನೋವಿನಿಂದ ಅವರು ಬಳಲಿದ್ದಾರೆ. ಅಸ್ವಸ್ಥಗೊಂಡ ಅವರ ಸ್ಥಿತಿ ನೋಡಿ ಎಲ್ಲರೂ ಆತಂಕಗೊಂಡಿದ್ದಾರೆ. ನಿರ್ಮಲಾ ಅವರಿಗೆ ಆಗಿರುವ ನೋವಿನ ತೀವ್ರತೆ ಏನು? ಮನೆಯಲ್ಲೇ ಅವರು ಸರಿ ಆಗುತ್ತಾರಾ ಅಥವಾ ವೈದ್ಯರ ಬಳಿಗೆ ಅವರನ್ನು ಕರೆದುಕೊಂಡು ಹೋಗಲಾಗುತ್ತದೆಯಾ? ಈ ತುರ್ತು ಸ್ಥಿತಿಯಲ್ಲಿ ಅವರು ಮನೆಯೊಂದ ಹೊರಗೆ ಬರಬೇಕಾಗುತ್ತಾ ಎಂಬೆಲ್ಲ ಪ್ರಶ್ನೆಗಳಿಗೆ ಮಾ.9ರ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ: Bigg Boss Kannada: ಮಂಜುಗೆ ‘ಐ ಲವ್​ ಯೂ’ ಎಂದ ದಿವ್ಯಾ ಉರುಡುಗ! ಬಿಗ್​ ಬಾಸ್​ನಲ್ಲಿ ಏನು ನಡೀತಾ ಇದೆ?

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!

ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ
Daily Devotional: ಮನೆಯಲ್ಲಿ ಒರಳು ಕಲ್ಲು ಇರಲೇಬೇಕು ಯಾಕೆ ಗೊತ್ತಾ?
Daily Devotional: ಮನೆಯಲ್ಲಿ ಒರಳು ಕಲ್ಲು ಇರಲೇಬೇಕು ಯಾಕೆ ಗೊತ್ತಾ?
VIDEO: ಗೆರೆ ದಾಟಿ ಪಂದ್ಯ ಸೋತ ಮುಂಬೈ ಇಂಡಿಯನ್ಸ್
VIDEO: ಗೆರೆ ದಾಟಿ ಪಂದ್ಯ ಸೋತ ಮುಂಬೈ ಇಂಡಿಯನ್ಸ್