AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

ವೈರಸ್​ ಎಂಬ ಪದ ಕೇಳಿದರೆ ಎಲ್ಲರೂ ಒಂದು ಕ್ಷಣ ಕಂಗಾಲಾಗುತ್ತಾರೆ. ಈಗ ಬಿಗ್​ ಬಾಸ್​ ಮನೆಯೊಳಗಿನ ಸ್ಪರ್ಧಿಗಳಿಗೂ ಅದೇ ಆತಂಕ ಶುರು ಆಗಿದೆ. ದೊಡ್ಮನೆಯೊಳಗೆ ವೈರಸ್​ ಕಾಲಿಟ್ಟಿದೆ.

Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ
ನಿರ್ಮಲಾ ಚೆನ್ನಪ್ಪ ಬಿಗ್​ ಬಾಸ್​
ಮದನ್​ ಕುಮಾರ್​
|

Updated on: Mar 09, 2021 | 3:13 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ದಿನದಿನವೋ ರೋಚಕತೆ ಹೆಚ್ಚುತ್ತಿದೆ. ಇಷ್ಟು ದಿನ ಪ್ರೀತಿ-ಪ್ರೇಮ, ಕಾಮಿಡಿ-ಜಗಳ ಮಾಡಿಕೊಂಡಿದ್ದ ಸ್ಪರ್ಧಿಗಳಿಗೆ ಸವಾಲೊಡ್ಡಲು ಈಗ ವೈರಸ್​ ಬಂದಿದೆ. ಮನೆಯೊಳಗೆ ವೈರಸ್​ ಎಂಟ್ರಿ ಆಗುತ್ತಿದ್ದಂತೆಯೇ ಎಲ್ಲರ ವರ್ತನೆ ಬದಲಾಗಿದೆ. ಆಟದ ಶೈಲಿಯೂ ಬೇರೆ ಸ್ವರೂಪ ಪಡೆದುಕೊಂಡಿದೆ.

‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಪ್ರೋಮೋಗಳಲ್ಲಿ ಈ ವೈರಸ್​ ವಿಚಾರ ಬಯಲಾಗಿದೆ. ‘ಇಡೀ ಜಗತ್ತು ವೈರಸ್​ ದಾಳಿಯಿಂದ ಕಂಗಾಲಾಗಿದ್ದನ್ನು ನೀವೆಲ್ಲರೂ ನೋಡಿದ್ದೀರಿ. ಈ ಮನೆ ಕೂಡ ಈಗ ವೈರಸ್​ ಜೊತೆಗಿನ ಹೋರಾಟಕ್ಕೆ ಸಿದ್ಧವಾಗಬೇಕಿದೆ. ಈ ದಾಳಿಯಿಂದ ತಪ್ಪಿಸಿಕೊಳ್ಳಲು ಮನುಷ್ಯರು ಎಚ್ಚರವಾಗಿರಬೇಕು’ ಎಂಬ ಬಿಗ್​ ಬಾಸ್​ ಧ್ವನಿ ಮನೆಯೊಳಗೆ ಕೇಳಿಸಿದೆ!

ವೈರಸ್​ ಎಂದರೆ ಇದು ನಿಜವಾದ ಕೊರೊನಾ ವೈರಸ್​ ಅಲ್ಲ. ಕೊರೊನಾ ವೈರಸ್​ ರೀತಿಯ ಥೀಮ್​ನಲ್ಲಿ ಒಂದು ಗೇಮ್​ ಆಡಿಸಲಾಗಿದೆ. ಅದರಲ್ಲಿ ಎಲ್ಲರೂ ಹೆಚ್ಚು ಆಕ್ರಮಣಕಾರಿಯಾಗಿ ಭಾಗವಹಿಸಿದ್ದಾರೆ. ಆ ಮೂಲಕ ಮನೆಯೊಳಗೆ ಟೆನ್ಷನ್​ ಸೃಷ್ಟಿ ಆಗಿದೆ. ತಮ್ಮ ತಮ್ಮ ಉಳಿವಿಗಾಗಿ ಎಲ್ಲರೂ ತೀವ್ರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಏನು ಈ ಆಟದ ಅಸಲಿಯತ್ತು ಎಂಬುದು ಮಂಗಳವಾರದ (ಮಾ.9) ಎಪಿಸೋಡ್​ನಲ್ಲಿ ಬಯಲಾಗಲಿದೆ.

ವೈರಸ್​ ಥೀಮ್​ನ ಈ ಆಟ ಎಷ್ಟೊಂದು ತೀವ್ರವಾಗಿದೆ ಎಂದರೆ, ಇದರಲ್ಲಿ ಭಾಗವಹಿಸಿದ ವೇಳೆ ನಿರ್ಮಲಾ ಚೆನ್ನಪ್ಪ ಅವರಿಗೆ ಪೆಟ್ಟಾಗಿದೆ! ನೋವಿನಿಂದ ಅವರು ಬಳಲಿದ್ದಾರೆ. ಅಸ್ವಸ್ಥಗೊಂಡ ಅವರ ಸ್ಥಿತಿ ನೋಡಿ ಎಲ್ಲರೂ ಆತಂಕಗೊಂಡಿದ್ದಾರೆ. ನಿರ್ಮಲಾ ಅವರಿಗೆ ಆಗಿರುವ ನೋವಿನ ತೀವ್ರತೆ ಏನು? ಮನೆಯಲ್ಲೇ ಅವರು ಸರಿ ಆಗುತ್ತಾರಾ ಅಥವಾ ವೈದ್ಯರ ಬಳಿಗೆ ಅವರನ್ನು ಕರೆದುಕೊಂಡು ಹೋಗಲಾಗುತ್ತದೆಯಾ? ಈ ತುರ್ತು ಸ್ಥಿತಿಯಲ್ಲಿ ಅವರು ಮನೆಯೊಂದ ಹೊರಗೆ ಬರಬೇಕಾಗುತ್ತಾ ಎಂಬೆಲ್ಲ ಪ್ರಶ್ನೆಗಳಿಗೆ ಮಾ.9ರ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ಇದನ್ನೂ ಓದಿ: Bigg Boss Kannada: ಮಂಜುಗೆ ‘ಐ ಲವ್​ ಯೂ’ ಎಂದ ದಿವ್ಯಾ ಉರುಡುಗ! ಬಿಗ್​ ಬಾಸ್​ನಲ್ಲಿ ಏನು ನಡೀತಾ ಇದೆ?

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?