Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನ ಪ್ರೀತಿಸ್ತೀನಿ ಎನ್ನುತ್ತ ಸುದೀಪ್​ ಎದುರಲ್ಲೇ ಟ್ವಿಸ್ಟ್​ ಕೊಟ್ಟ ದಿವ್ಯಾ! ಅಬ್ಬಬ್ಬಾ ಸಖತ್​ ಚಾಲಾಕಿ

ಮಂಜು ಮತ್ತು ದಿವ್ಯಾ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ ಎಂಬುದು ನಿಜವಾದರೂ ಟಾಸ್ಕ್​ ವಿಚಾರದಲ್ಲಿ ಪಕ್ಕಾ ಪ್ರಾಕ್ಟಿಕಲ್​ ಆಗಿದ್ದಾರೆ. ಹಾಗಿದ್ದರೂ ಕೂಡ ಅವರ ನಡುವಿನ ಆಪ್ತತೆಯೇ ಯಾಕೋ ಹೆಚ್ಚು ಹೈಲೈಟ್​ ಆಗುತ್ತಿದೆ.

ಮಂಜುನ ಪ್ರೀತಿಸ್ತೀನಿ ಎನ್ನುತ್ತ ಸುದೀಪ್​ ಎದುರಲ್ಲೇ ಟ್ವಿಸ್ಟ್​ ಕೊಟ್ಟ ದಿವ್ಯಾ! ಅಬ್ಬಬ್ಬಾ ಸಖತ್​ ಚಾಲಾಕಿ
ಮಂಜು ಪಾವಗಡ - ದಿವ್ಯಾ ಸುರೇಶ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 05, 2021 | 4:05 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಹೆಚ್ಚು ಆಪ್ತರಾಗಿದ್ದಾರೆ. ಅವರಿಬ್ಬರ ನಡುವೆ ಏನು ನಡೆಯುತ್ತಿದೆ ಎಂಬ ಅನುಮಾನ ಎಲ್ಲರಿಗೂ ಇದೆ. ಟಾಸ್ಕ್​ ಇಲ್ಲದೆ ಇರುವಾಗ ಅವರಿಬ್ಬರು ಜೊತೆಯಾಗಿ ಹೆಚ್ಚಿನ ಸಮಯ ಕಳೆಯುತ್ತಾರೆ. ಆ ಬಗ್ಗೆ ಪದೇಪದೇ ಚರ್ಚೆ ಆಗುತ್ತಿದೆ ಕೂಡ. ಕೆಲವೇ ದಿನಗಳ ಹಿಂದೆ ತಾವಿಬ್ಬರೂ ಗಂಡ-ಹೆಂಡತಿ ಎಂದು ಭಾವಿಸಿಕೊಂಡು ಅವರಿಬ್ಬರು ವೈಷ್ಣವಿ ಬಳಿ ಹೋಗಿ ಆಪ್ತ ಸಮಾಲೋಚನೆ ಪಡೆದುಕೊಂಡಿದ್ದರು. ಆದರೆ ಈಗ ದಿವ್ಯಾ ಸುರೇಶ್​ ಇನ್ನೊಂದು ಟ್ವಿಸ್ಟ್​ ನೀಡಿದ್ದಾರೆ.

ಐದನೇ ವಾರದ ವೀಕೆಂಡ್​ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್​ ಎದುರಿನಲ್ಲೇ ಮಂಜು ಮತ್ತು ದಿವ್ಯಾ ಸುರೇಶ್​ ಒಡನಾಟದ ಬಗ್ಗೆ ಚರ್ಚೆ ಆಗಿದೆ. ಮನೆಯ ಎಲ್ಲ ಸದಸ್ಯರಿಗೂ ಸುದೀಪ್​ ಒಂದು ಪ್ರಶ್ನೆ ಕೇಳಿದರು. ಮಂಜು ಇಲ್ಲದೇ ಇದ್ದಿದ್ದರೆ ಇಷ್ಟು ದಿನಗಳ ಕಾಲ ದಿವ್ಯಾ ಸುರೇಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಉಳಿಯುತ್ತಿರಲಿಲ್ಲ- ಹೌದೋ ಅಲ್ಲವೋ ಎಂದು ಕಿಚ್ಚ ಕೇಳಿದ್ದಕ್ಕೆ ಎಲ್ಲರೂ ಬೇರೆ ಬೇರೆ ರೀತಿ ಉತ್ತರ ನೀಡಿದರು.

ಹೌದು ಎಂದು ಪ್ರಶಾಂತ್​ ಸಂಬರಗಿ ಉತ್ತರಿಸಿದರು. ದಿವ್ಯಾ ಮಂಜುನ ಬಾಲದ ರೀತಿ ಇದ್ದಾಳೆ ಎಂಬ ಮಾತನ್ನು ಅವರು ಒತ್ತಿ ಹೇಳಿದರು. ಆದರೆ ಈ ಮಾತನ್ನು ಸ್ವತಃ ಮಂಜು ಒಪ್ಪಲಿಲ್ಲ. ದಿವ್ಯಾ ಸುರೇಶ್​ಗೆ ಅವಳದ್ದೇ ಆದ ವ್ಯಕ್ತಿತ್ವ ಇದೆ. ನಾನು ಇಲ್ಲದೇ ಇದ್ದರೂ ಅವಳು ಬಿಗ್​ ಬಾಸ್​ ಮನೆಯಲ್ಲಿ ಇಷ್ಟು ದಿನ ಖಂಡಿತವಾಗಿ ಇರುತ್ತಿದ್ದಳು ಎಂದು ಮಂಜು ಹೇಳಿದರು.

ನಂತರ ಮಂಜು ಬಗ್ಗೆ ದಿವ್ಯಾ ಸುರೇಶ್​ ಮಾತನಾಡಿದರು. ‘ಮಂಜು ನನ್ನ ಜೀವನದಲ್ಲಿ ಬೇರೆ ಸ್ಥಾನ ಪಡೆದುಕೊಂಡಿದ್ದಾನೆ. ಯಾವ ಥರ ಹೇಳಬೇಕು ಅಂತ ಗೊತ್ತಾಗ್ತಾ ಇಲ್ಲ. ಐ ಲವ್​ ಹಿಮ್​ ಸೋ ಮಚ್​’ ಎಂದು ಅವರು ಹೇಳಿದರು. ಮರುಕ್ಷಣವೇ ‘ಆ್ಯಸ್​ ಎ ಫ್ರೆಂಡ್​. ಅದು ಹಾಗೇ ಇರುತ್ತೆ ಎಂದು ಭಾವಿಸುತ್ತೇನೆ’ ಎನ್ನುವ ಮೂಲಕ ಟ್ವಿಸ್ಟ್​ ನೀಡಿದರು!

ಮಂಜು ಮತ್ತು ದಿವ್ಯಾ ಪರಸ್ಪರ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ ಎಂಬುದು ನಿಜವಾದರೂ ಟಾಸ್ಕ್​ ವಿಚಾರದಲ್ಲಿ ಪಕ್ಕಾ ಪ್ರಾಕ್ಟಿಕಲ್​ ಆಗಿದ್ದಾರೆ. ಹಾಗಿದ್ದರೂ ಕೂಡ ಅವರ ನಡುವಿನ ಆಪ್ತತೆಯೇ ಯಾಕೋ ಹೆಚ್ಚು ಹೈಲೈಟ್​ ಆಗುತ್ತಿದೆ. ಏ.4ರಂದು ಶಂಕರ್​ ಅಶ್ವತ್ಥ್​ ಎಲಿಮಿನೇಟ್​ ಆದರು. ಎಲ್ಲರಿಗೂ ವಿದಾಯ ಹೇಳುವ ಸಂದರ್ಭದಲ್ಲಿ ಮಂಜು ಮತ್ತು ದಿವ್ಯಾರನ್ನು ಉದ್ದೇಶಿಸಿ, ‘ಹೊರಗೆ ಬಂದಮೇಲೆ ಸಿಹಿ ಸುದ್ದಿ ನೀಡಿ’ ಎಂದು ಶಂಕರ್​ ಅಶ್ವತ್ಥ್​ ಆಶೀರ್ವಾದ ಮಾಡಿದರು!

ಇದನ್ನೂ ಓದಿ: ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

(Bigg Boss Kannada updates: Divya Suresh says I love Manju Pavagada but as a friend)

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು