Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?
ಗೀತಾ ಭಾರತಿ ಭಟ್​ - ವಿಶ್ವನಾಥ್​
Follow us
|

Updated on: Mar 15, 2021 | 11:52 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಎರಡು ವಾರಗಳು ಕಳೆದಿವೆ. ಈವರೆಗೂ ಇಬ್ಬರ ಎಲಿಮಿನೇಷನ್​ ಆಗಿದೆ. ಮೊದಲ ವಾರ ಧನುಶ್ರೀ ಹಾಗೂ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಅವರು ಮನೆಯಿಂದ ಹೊರಬಂದಿದ್ದಾರೆ. ಇನ್ನುಳಿದ 15 ಸ್ಪರ್ಧಿಗಳ ನಡುವೆ ಹಣಾಹಣಿ ಮುಂದುವರಿದಿದೆ. ಈ ನಡುವೆ ‘ಬ್ರಹ್ಮಗಂಟು’ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಹಾಗೂ ಗಾಯಕ ವಿಶ್ವನಾಥ್​ ಅವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ.

ಎರಡನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್​, ನಿರ್ಮಲಾ ಚೆನ್ನಪ್ಪ, ವಿಶ್ವನಾಥ್​, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​ ಮತ್ತು ಪ್ರಶಾಂತ್​ ಸಂಬರಗಿ ಇದ್ದರು. ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

ಎರಡು ವಾರಗಳಲ್ಲಿ ಗೀತಾ ಹಾಗೂ ವಿಶ್ವನಾಥ್​ ಹೇಳಿಕೊಳ್ಳುವಂತಹ ಮನರಂಜನೆ ನೀಡಿಲ್ಲ. ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ವೀಕ್ಷಕರಿಂದ ಇವರಿಬ್ಬರಿಗೆ ಕಡಿಮೆ ವೋಟ್​ ಬಂದಿರುವ ಸಾಧ್ಯತೆ ಇದೆ. ಹೇಗೋ ಅದೃಷ್ಟದಿಂದ ಗೀತಾ ಹಾಗೂ ವಿಶ್ವನಾಥ್​ ಜಸ್ಟ್ ಮಿಸ್​ ಆಗಿದ್ದಾರೆ. ಇಲ್ಲದಿದ್ದರೆ ಅವರಲ್ಲಿ ಒಬ್ಬರು ಎಲಿಮಿನೇಟ್​ ಆಗಬೇಕಿತ್ತು. ಎರಡನೇ ವಾರದ ಪಂಚಾಯಿತಿಯಲ್ಲಿ ಇವರಿಬ್ಬರಿಗೆ ಸುದೀಪ್​ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಆಟದ ಶೈಲಿಯನ್ನು ಬದಲಾಯಿಸಿಕೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ವಿಶ್ವ ಒಳ್ಳೆಯ ಹಾಡುಗಾರನಾಗಿದ್ದರೂ ಕೂಡ ಆ ಸಾಮರ್ಥ್ಯವನ್ನು ಅವರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಗೀತಾ ಕೂಡ ಹಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಆದರೂ ಬಿಗ್​ ಬಾಸ್​ ಮನೆಯೊಳಗೆ ಅವರು ಸೂಕ್ತ ಮನರಂಜನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನು, ಎಮೋಷನಲ್ ಆಗಿ ಅವರು ಎಲ್ಲರನ್ನೂ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ತಮ್ಮ ಈ ಎಲ್ಲ ಮೈನಸ್​ ಪಾಯಿಂಟ್​ಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇವರಿಬ್ಬರಿಗೂ ಮುಂದಿನ ವಾರ ಕಷ್ಟ ಆಗಲಿದೆ ಎಂಬುದರಲ್ಲಿ ಅನುಮಾನ ಇಲ್ಲ!

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ