AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?
ಗೀತಾ ಭಾರತಿ ಭಟ್​ - ವಿಶ್ವನಾಥ್​
ಮದನ್​ ಕುಮಾರ್​
|

Updated on: Mar 15, 2021 | 11:52 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಎರಡು ವಾರಗಳು ಕಳೆದಿವೆ. ಈವರೆಗೂ ಇಬ್ಬರ ಎಲಿಮಿನೇಷನ್​ ಆಗಿದೆ. ಮೊದಲ ವಾರ ಧನುಶ್ರೀ ಹಾಗೂ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಅವರು ಮನೆಯಿಂದ ಹೊರಬಂದಿದ್ದಾರೆ. ಇನ್ನುಳಿದ 15 ಸ್ಪರ್ಧಿಗಳ ನಡುವೆ ಹಣಾಹಣಿ ಮುಂದುವರಿದಿದೆ. ಈ ನಡುವೆ ‘ಬ್ರಹ್ಮಗಂಟು’ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಹಾಗೂ ಗಾಯಕ ವಿಶ್ವನಾಥ್​ ಅವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ.

ಎರಡನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್​, ನಿರ್ಮಲಾ ಚೆನ್ನಪ್ಪ, ವಿಶ್ವನಾಥ್​, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​ ಮತ್ತು ಪ್ರಶಾಂತ್​ ಸಂಬರಗಿ ಇದ್ದರು. ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

ಎರಡು ವಾರಗಳಲ್ಲಿ ಗೀತಾ ಹಾಗೂ ವಿಶ್ವನಾಥ್​ ಹೇಳಿಕೊಳ್ಳುವಂತಹ ಮನರಂಜನೆ ನೀಡಿಲ್ಲ. ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ವೀಕ್ಷಕರಿಂದ ಇವರಿಬ್ಬರಿಗೆ ಕಡಿಮೆ ವೋಟ್​ ಬಂದಿರುವ ಸಾಧ್ಯತೆ ಇದೆ. ಹೇಗೋ ಅದೃಷ್ಟದಿಂದ ಗೀತಾ ಹಾಗೂ ವಿಶ್ವನಾಥ್​ ಜಸ್ಟ್ ಮಿಸ್​ ಆಗಿದ್ದಾರೆ. ಇಲ್ಲದಿದ್ದರೆ ಅವರಲ್ಲಿ ಒಬ್ಬರು ಎಲಿಮಿನೇಟ್​ ಆಗಬೇಕಿತ್ತು. ಎರಡನೇ ವಾರದ ಪಂಚಾಯಿತಿಯಲ್ಲಿ ಇವರಿಬ್ಬರಿಗೆ ಸುದೀಪ್​ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಆಟದ ಶೈಲಿಯನ್ನು ಬದಲಾಯಿಸಿಕೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ವಿಶ್ವ ಒಳ್ಳೆಯ ಹಾಡುಗಾರನಾಗಿದ್ದರೂ ಕೂಡ ಆ ಸಾಮರ್ಥ್ಯವನ್ನು ಅವರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಗೀತಾ ಕೂಡ ಹಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಆದರೂ ಬಿಗ್​ ಬಾಸ್​ ಮನೆಯೊಳಗೆ ಅವರು ಸೂಕ್ತ ಮನರಂಜನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನು, ಎಮೋಷನಲ್ ಆಗಿ ಅವರು ಎಲ್ಲರನ್ನೂ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ತಮ್ಮ ಈ ಎಲ್ಲ ಮೈನಸ್​ ಪಾಯಿಂಟ್​ಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇವರಿಬ್ಬರಿಗೂ ಮುಂದಿನ ವಾರ ಕಷ್ಟ ಆಗಲಿದೆ ಎಂಬುದರಲ್ಲಿ ಅನುಮಾನ ಇಲ್ಲ!

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ