AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?
ಗೀತಾ ಭಾರತಿ ಭಟ್​ - ವಿಶ್ವನಾಥ್​
ಮದನ್​ ಕುಮಾರ್​
|

Updated on: Mar 15, 2021 | 11:52 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಎರಡು ವಾರಗಳು ಕಳೆದಿವೆ. ಈವರೆಗೂ ಇಬ್ಬರ ಎಲಿಮಿನೇಷನ್​ ಆಗಿದೆ. ಮೊದಲ ವಾರ ಧನುಶ್ರೀ ಹಾಗೂ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಅವರು ಮನೆಯಿಂದ ಹೊರಬಂದಿದ್ದಾರೆ. ಇನ್ನುಳಿದ 15 ಸ್ಪರ್ಧಿಗಳ ನಡುವೆ ಹಣಾಹಣಿ ಮುಂದುವರಿದಿದೆ. ಈ ನಡುವೆ ‘ಬ್ರಹ್ಮಗಂಟು’ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಹಾಗೂ ಗಾಯಕ ವಿಶ್ವನಾಥ್​ ಅವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ.

ಎರಡನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್​, ನಿರ್ಮಲಾ ಚೆನ್ನಪ್ಪ, ವಿಶ್ವನಾಥ್​, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​ ಮತ್ತು ಪ್ರಶಾಂತ್​ ಸಂಬರಗಿ ಇದ್ದರು. ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

ಎರಡು ವಾರಗಳಲ್ಲಿ ಗೀತಾ ಹಾಗೂ ವಿಶ್ವನಾಥ್​ ಹೇಳಿಕೊಳ್ಳುವಂತಹ ಮನರಂಜನೆ ನೀಡಿಲ್ಲ. ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ವೀಕ್ಷಕರಿಂದ ಇವರಿಬ್ಬರಿಗೆ ಕಡಿಮೆ ವೋಟ್​ ಬಂದಿರುವ ಸಾಧ್ಯತೆ ಇದೆ. ಹೇಗೋ ಅದೃಷ್ಟದಿಂದ ಗೀತಾ ಹಾಗೂ ವಿಶ್ವನಾಥ್​ ಜಸ್ಟ್ ಮಿಸ್​ ಆಗಿದ್ದಾರೆ. ಇಲ್ಲದಿದ್ದರೆ ಅವರಲ್ಲಿ ಒಬ್ಬರು ಎಲಿಮಿನೇಟ್​ ಆಗಬೇಕಿತ್ತು. ಎರಡನೇ ವಾರದ ಪಂಚಾಯಿತಿಯಲ್ಲಿ ಇವರಿಬ್ಬರಿಗೆ ಸುದೀಪ್​ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಆಟದ ಶೈಲಿಯನ್ನು ಬದಲಾಯಿಸಿಕೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ವಿಶ್ವ ಒಳ್ಳೆಯ ಹಾಡುಗಾರನಾಗಿದ್ದರೂ ಕೂಡ ಆ ಸಾಮರ್ಥ್ಯವನ್ನು ಅವರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಗೀತಾ ಕೂಡ ಹಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಆದರೂ ಬಿಗ್​ ಬಾಸ್​ ಮನೆಯೊಳಗೆ ಅವರು ಸೂಕ್ತ ಮನರಂಜನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನು, ಎಮೋಷನಲ್ ಆಗಿ ಅವರು ಎಲ್ಲರನ್ನೂ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ತಮ್ಮ ಈ ಎಲ್ಲ ಮೈನಸ್​ ಪಾಯಿಂಟ್​ಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇವರಿಬ್ಬರಿಗೂ ಮುಂದಿನ ವಾರ ಕಷ್ಟ ಆಗಲಿದೆ ಎಂಬುದರಲ್ಲಿ ಅನುಮಾನ ಇಲ್ಲ!

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್