AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?
ಗೀತಾ ಭಾರತಿ ಭಟ್​ - ವಿಶ್ವನಾಥ್​
Follow us
ಮದನ್​ ಕುಮಾರ್​
|

Updated on: Mar 15, 2021 | 11:52 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಎರಡು ವಾರಗಳು ಕಳೆದಿವೆ. ಈವರೆಗೂ ಇಬ್ಬರ ಎಲಿಮಿನೇಷನ್​ ಆಗಿದೆ. ಮೊದಲ ವಾರ ಧನುಶ್ರೀ ಹಾಗೂ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಅವರು ಮನೆಯಿಂದ ಹೊರಬಂದಿದ್ದಾರೆ. ಇನ್ನುಳಿದ 15 ಸ್ಪರ್ಧಿಗಳ ನಡುವೆ ಹಣಾಹಣಿ ಮುಂದುವರಿದಿದೆ. ಈ ನಡುವೆ ‘ಬ್ರಹ್ಮಗಂಟು’ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಹಾಗೂ ಗಾಯಕ ವಿಶ್ವನಾಥ್​ ಅವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ.

ಎರಡನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್​, ನಿರ್ಮಲಾ ಚೆನ್ನಪ್ಪ, ವಿಶ್ವನಾಥ್​, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​ ಮತ್ತು ಪ್ರಶಾಂತ್​ ಸಂಬರಗಿ ಇದ್ದರು. ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

ಎರಡು ವಾರಗಳಲ್ಲಿ ಗೀತಾ ಹಾಗೂ ವಿಶ್ವನಾಥ್​ ಹೇಳಿಕೊಳ್ಳುವಂತಹ ಮನರಂಜನೆ ನೀಡಿಲ್ಲ. ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ವೀಕ್ಷಕರಿಂದ ಇವರಿಬ್ಬರಿಗೆ ಕಡಿಮೆ ವೋಟ್​ ಬಂದಿರುವ ಸಾಧ್ಯತೆ ಇದೆ. ಹೇಗೋ ಅದೃಷ್ಟದಿಂದ ಗೀತಾ ಹಾಗೂ ವಿಶ್ವನಾಥ್​ ಜಸ್ಟ್ ಮಿಸ್​ ಆಗಿದ್ದಾರೆ. ಇಲ್ಲದಿದ್ದರೆ ಅವರಲ್ಲಿ ಒಬ್ಬರು ಎಲಿಮಿನೇಟ್​ ಆಗಬೇಕಿತ್ತು. ಎರಡನೇ ವಾರದ ಪಂಚಾಯಿತಿಯಲ್ಲಿ ಇವರಿಬ್ಬರಿಗೆ ಸುದೀಪ್​ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಆಟದ ಶೈಲಿಯನ್ನು ಬದಲಾಯಿಸಿಕೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ವಿಶ್ವ ಒಳ್ಳೆಯ ಹಾಡುಗಾರನಾಗಿದ್ದರೂ ಕೂಡ ಆ ಸಾಮರ್ಥ್ಯವನ್ನು ಅವರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಗೀತಾ ಕೂಡ ಹಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಆದರೂ ಬಿಗ್​ ಬಾಸ್​ ಮನೆಯೊಳಗೆ ಅವರು ಸೂಕ್ತ ಮನರಂಜನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನು, ಎಮೋಷನಲ್ ಆಗಿ ಅವರು ಎಲ್ಲರನ್ನೂ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ತಮ್ಮ ಈ ಎಲ್ಲ ಮೈನಸ್​ ಪಾಯಿಂಟ್​ಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇವರಿಬ್ಬರಿಗೂ ಮುಂದಿನ ವಾರ ಕಷ್ಟ ಆಗಲಿದೆ ಎಂಬುದರಲ್ಲಿ ಅನುಮಾನ ಇಲ್ಲ!

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು