Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?
ಗೀತಾ ಭಾರತಿ ಭಟ್​ - ವಿಶ್ವನಾಥ್​

Updated on: Mar 15, 2021 | 11:52 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಎರಡು ವಾರಗಳು ಕಳೆದಿವೆ. ಈವರೆಗೂ ಇಬ್ಬರ ಎಲಿಮಿನೇಷನ್​ ಆಗಿದೆ. ಮೊದಲ ವಾರ ಧನುಶ್ರೀ ಹಾಗೂ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಅವರು ಮನೆಯಿಂದ ಹೊರಬಂದಿದ್ದಾರೆ. ಇನ್ನುಳಿದ 15 ಸ್ಪರ್ಧಿಗಳ ನಡುವೆ ಹಣಾಹಣಿ ಮುಂದುವರಿದಿದೆ. ಈ ನಡುವೆ ‘ಬ್ರಹ್ಮಗಂಟು’ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಹಾಗೂ ಗಾಯಕ ವಿಶ್ವನಾಥ್​ ಅವರಿಗೆ ಕಿಚ್ಚ ಸುದೀಪ್​ ವಾರ್ನಿಂಗ್​ ನೀಡಿದ್ದಾರೆ.

ಎರಡನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್​, ನಿರ್ಮಲಾ ಚೆನ್ನಪ್ಪ, ವಿಶ್ವನಾಥ್​, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​ ಮತ್ತು ಪ್ರಶಾಂತ್​ ಸಂಬರಗಿ ಇದ್ದರು. ಪ್ರತಿ ವಾರವೂ ಗೀತಾ ಮತ್ತು ವಿಶ್ವನಾಥ್​ ನಾಮಿನೇಟ್​ ಆಗುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರ ಪರ್ಫಾಮೆನ್ಸ್​ ಡಲ್​ ಆಗುತ್ತಿದೆ. ಇದನ್ನು ಕಿಚ್ಚ ಸುದೀಪ್​ ಗಮನಿಸಿದ್ದಾರೆ.

ಎರಡು ವಾರಗಳಲ್ಲಿ ಗೀತಾ ಹಾಗೂ ವಿಶ್ವನಾಥ್​ ಹೇಳಿಕೊಳ್ಳುವಂತಹ ಮನರಂಜನೆ ನೀಡಿಲ್ಲ. ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ವೀಕ್ಷಕರಿಂದ ಇವರಿಬ್ಬರಿಗೆ ಕಡಿಮೆ ವೋಟ್​ ಬಂದಿರುವ ಸಾಧ್ಯತೆ ಇದೆ. ಹೇಗೋ ಅದೃಷ್ಟದಿಂದ ಗೀತಾ ಹಾಗೂ ವಿಶ್ವನಾಥ್​ ಜಸ್ಟ್ ಮಿಸ್​ ಆಗಿದ್ದಾರೆ. ಇಲ್ಲದಿದ್ದರೆ ಅವರಲ್ಲಿ ಒಬ್ಬರು ಎಲಿಮಿನೇಟ್​ ಆಗಬೇಕಿತ್ತು. ಎರಡನೇ ವಾರದ ಪಂಚಾಯಿತಿಯಲ್ಲಿ ಇವರಿಬ್ಬರಿಗೆ ಸುದೀಪ್​ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಆಟದ ಶೈಲಿಯನ್ನು ಬದಲಾಯಿಸಿಕೊಳ್ಳದೇ ಇದ್ದರೆ ಉಳಿಗಾಲ ಇಲ್ಲ ಎಂಬುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ವಿಶ್ವ ಒಳ್ಳೆಯ ಹಾಡುಗಾರನಾಗಿದ್ದರೂ ಕೂಡ ಆ ಸಾಮರ್ಥ್ಯವನ್ನು ಅವರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಗೀತಾ ಕೂಡ ಹಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಆದರೂ ಬಿಗ್​ ಬಾಸ್​ ಮನೆಯೊಳಗೆ ಅವರು ಸೂಕ್ತ ಮನರಂಜನೆ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನು, ಎಮೋಷನಲ್ ಆಗಿ ಅವರು ಎಲ್ಲರನ್ನೂ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ತಮ್ಮ ಈ ಎಲ್ಲ ಮೈನಸ್​ ಪಾಯಿಂಟ್​ಗಳನ್ನು ಸರಿಪಡಿಸಿಕೊಳ್ಳದಿದ್ದರೆ ಇವರಿಬ್ಬರಿಗೂ ಮುಂದಿನ ವಾರ ಕಷ್ಟ ಆಗಲಿದೆ ಎಂಬುದರಲ್ಲಿ ಅನುಮಾನ ಇಲ್ಲ!

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us