AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಬಿಗ್​ ಬಾಸ್​ ಮನೆಯಲ್ಲಿ ಕೆಲವು ಗಂಭೀರ ಆರೋಪಗಳು ಕೇಳಿಬಂದಿವೆ. ಆ ವಿಚಾರದ ಬಗ್ಗೆ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್​ ಚರ್ಚೆ ಮಾಡಿದ್ದಾರೆ.

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?
ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 14, 2021 | 4:49 PM

Share

ಬಿಗ್​ ಬಾಸ್​ನಲ್ಲಿ ಏನೇ ಜಗಳ, ಕಿರಿಕ್​, ವಿವಾದಗಳು ಇರಬಹುದು. ಆದರೆ ಸ್ಪರ್ಧಿಗಳ ರಕ್ಷಣೆ ಕೂಡ ತುಂಬ ಮುಖ್ಯ. ಅದರಲ್ಲೂ ಮಹಿಳಾ ಸ್ಪರ್ಧಿಗಳ ಸೇಫ್ಟಿ ಬಗ್ಗೆ ಬಿಗ್​ ಬಾಸ್​ ಹೆಚ್ಚಿನ ಕಾಳಜಿ ವಹಿಸುತ್ತಾರೆ ಎಂಬುದನ್ನು ನಿರೂಪಕ ಕಿಚ್ಚ ಸುದೀಪ್​ ಹೇಳಿದ್ದಾರೆ. ಎರಡನೇ ವಾರದ ವೀಕೆಂಡ್​ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ನಿಧಿ ಸುಬ್ಬಯ್ಯ ಮಾಡಿದ ಒಂದೇ ಒಂದು ಆರೋಪ.

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ವೇಳೆ ತಮ್ಮನ್ನು ಮಂಜು ಮತ್ತು ಶಮಂತ್​ ಮನಬಂದಂತೆ ಮುಟ್ಟಿದರು ಎಂದು ನಿಧಿ ಸುಬ್ಬಯ್ಯ ಆರೋಪ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಮನೆಯೊಳಗೆ ಅನೇಕ ಮಾತುಕತೆ ಆಯಿತು. ಅದನ್ನು ಗಂಭೀರವಾಗಿ ಪರಿಗಣಿಸಿರುವ ಸುದೀಪ್​ ಅವರು ನಿಧಿಗೆ ಒಂದು ಭರವಸೆ ನೀಡಿದ್ದಾರೆ.

‘ನಿಧಿಯವರೇ ನೀವು ತುಂಬ ಬೇಜಾರು ಮಾಡಿಕೊಂಡಿದ್ರಿ. ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಕೂಡ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಈ ವಿಚಾರದ ಬಗ್ಗೆ ನಿಮಗೆ ಏನಾದರೂ ಹೇಳೋಕೆ ಇದೆಯಾ ಅಂತ ನಿಧಿಗೆ ಸುದೀಪ್​ ಪ್ರಶ್ನಿಸಿದರು. ‘ಪ್ರಾರಂಭದಿಂದಲೂ ರೂಲ್ಸ್​ ಚೇಂಜ್​ ಮಾಡಿ ಆಡುತ್ತಿದ್ದರು. ಎರಡನೇ ದಿನ ಅದನ್ನು ಇನ್ನೊಂದು ಲೆವೆಲ್​ಗೆ ತೆಗೆದುಕೊಂಡು ಹೋದವರು ಶಮಂತ್​, ಮಂಜು ಮತ್ತು ದಿವ್ಯಾ ಉರುಡುಗ. ಅವರು ಆ ರೀತಿ ನಡೆದುಕೊಳ್ಳಬಾರದಿತ್ತು. ಆ ಕಾರಣಕ್ಕಾಗಿ ಅವರ ಟೀಮ್​ ಮೇಲೆ ನನಗೆ ಗೌರವ ಹೊರಟುಹೋಯ್ತು’ ಎಂದಿದ್ದಾರೆ ನಿಧಿ. ಒಟ್ಟಿನಲ್ಲಿ ಸುದೀಪ್​ ಈ ಎಚ್ಚರಿಕೆ ಸಂದೇಶ ನೀಡಿದ ಬಳಿಕ ಮನೆಯ ವಾತಾವರಣ ಬದಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​ ​

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು