AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಬಿಗ್​ ಬಾಸ್​ ಮನೆಯಲ್ಲಿ ಕೆಲವು ಗಂಭೀರ ಆರೋಪಗಳು ಕೇಳಿಬಂದಿವೆ. ಆ ವಿಚಾರದ ಬಗ್ಗೆ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್​ ಚರ್ಚೆ ಮಾಡಿದ್ದಾರೆ.

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 14, 2021 | 4:49 PM

ಬಿಗ್​ ಬಾಸ್​ನಲ್ಲಿ ಏನೇ ಜಗಳ, ಕಿರಿಕ್​, ವಿವಾದಗಳು ಇರಬಹುದು. ಆದರೆ ಸ್ಪರ್ಧಿಗಳ ರಕ್ಷಣೆ ಕೂಡ ತುಂಬ ಮುಖ್ಯ. ಅದರಲ್ಲೂ ಮಹಿಳಾ ಸ್ಪರ್ಧಿಗಳ ಸೇಫ್ಟಿ ಬಗ್ಗೆ ಬಿಗ್​ ಬಾಸ್​ ಹೆಚ್ಚಿನ ಕಾಳಜಿ ವಹಿಸುತ್ತಾರೆ ಎಂಬುದನ್ನು ನಿರೂಪಕ ಕಿಚ್ಚ ಸುದೀಪ್​ ಹೇಳಿದ್ದಾರೆ. ಎರಡನೇ ವಾರದ ವೀಕೆಂಡ್​ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ. ಇದಕ್ಕೆಲ್ಲ ಕಾರಣ ಆಗಿರುವುದು ನಿಧಿ ಸುಬ್ಬಯ್ಯ ಮಾಡಿದ ಒಂದೇ ಒಂದು ಆರೋಪ.

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ವೇಳೆ ತಮ್ಮನ್ನು ಮಂಜು ಮತ್ತು ಶಮಂತ್​ ಮನಬಂದಂತೆ ಮುಟ್ಟಿದರು ಎಂದು ನಿಧಿ ಸುಬ್ಬಯ್ಯ ಆರೋಪ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಮನೆಯೊಳಗೆ ಅನೇಕ ಮಾತುಕತೆ ಆಯಿತು. ಅದನ್ನು ಗಂಭೀರವಾಗಿ ಪರಿಗಣಿಸಿರುವ ಸುದೀಪ್​ ಅವರು ನಿಧಿಗೆ ಒಂದು ಭರವಸೆ ನೀಡಿದ್ದಾರೆ.

‘ನಿಧಿಯವರೇ ನೀವು ತುಂಬ ಬೇಜಾರು ಮಾಡಿಕೊಂಡಿದ್ರಿ. ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಕೂಡ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಈ ವಿಚಾರದ ಬಗ್ಗೆ ನಿಮಗೆ ಏನಾದರೂ ಹೇಳೋಕೆ ಇದೆಯಾ ಅಂತ ನಿಧಿಗೆ ಸುದೀಪ್​ ಪ್ರಶ್ನಿಸಿದರು. ‘ಪ್ರಾರಂಭದಿಂದಲೂ ರೂಲ್ಸ್​ ಚೇಂಜ್​ ಮಾಡಿ ಆಡುತ್ತಿದ್ದರು. ಎರಡನೇ ದಿನ ಅದನ್ನು ಇನ್ನೊಂದು ಲೆವೆಲ್​ಗೆ ತೆಗೆದುಕೊಂಡು ಹೋದವರು ಶಮಂತ್​, ಮಂಜು ಮತ್ತು ದಿವ್ಯಾ ಉರುಡುಗ. ಅವರು ಆ ರೀತಿ ನಡೆದುಕೊಳ್ಳಬಾರದಿತ್ತು. ಆ ಕಾರಣಕ್ಕಾಗಿ ಅವರ ಟೀಮ್​ ಮೇಲೆ ನನಗೆ ಗೌರವ ಹೊರಟುಹೋಯ್ತು’ ಎಂದಿದ್ದಾರೆ ನಿಧಿ. ಒಟ್ಟಿನಲ್ಲಿ ಸುದೀಪ್​ ಈ ಎಚ್ಚರಿಕೆ ಸಂದೇಶ ನೀಡಿದ ಬಳಿಕ ಮನೆಯ ವಾತಾವರಣ ಬದಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​ ​

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ