AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷದ ಆಟ, ಉಡಾಫೆ ಮಾತಿನಿಂದ ಮೆರೆಯುತ್ತಿದ್ದ ಮಂಜು​ಗೆ ಕ್ಲಾಸ್​ ತೆಗೆದುಕೊಂಡ ಸುದೀಪ್​!

ದ್ವೇಷದ ಆಟ ಆಡಿದ್ದನ್ನು ಮತ್ತು ಕ್ಯಾಪ್ಟನ್​ ಜವಾಬ್ದಾರಿಯನ್ನು ಮರೆತು ಉಡಾಫೆಯಲ್ಲಿ ಮಾತನಾಡಿದ್ದನ್ನು ಮಂಜು ಒಪ್ಪಿಕೊಂಡರು. ಅಲ್ಲದೆ, ಚಕ್ರವರ್ತಿ ಚಂದ್ರಚೂಡ್​ ಬಳಿ ಹೋಗಿ ಅವರು ಕ್ಷಮೆ ಕೂಡ ಕೇಳಿದರು.

ದ್ವೇಷದ ಆಟ, ಉಡಾಫೆ ಮಾತಿನಿಂದ ಮೆರೆಯುತ್ತಿದ್ದ ಮಂಜು​ಗೆ ಕ್ಲಾಸ್​ ತೆಗೆದುಕೊಂಡ ಸುದೀಪ್​!
ಸುದೀಪ್​ - ಮಂಜು ಪಾವಗಡ
ಮದನ್​ ಕುಮಾರ್​
| Edited By: |

Updated on: Apr 04, 2021 | 3:35 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತ್ಯುತ್ತಮ ಸ್ಪರ್ಧಿ ಯಾರು ಎಂಬ ಪ್ರಶ್ನೆ ಎದುರಾದರೆ ಮಂಜು ಪಾವಗಡ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತದೆ. ವೀಕ್ಷಕರು ಕೂಡ ಮಂಜುಗೆ ಹೆಚ್ಚು ವೋಟ್​ ಮಾಡುತ್ತಿದ್ದಾರೆ. ಮನೆಯೊಳಗಿನ ಸದಸ್ಯರ ಅಭಿಪ್ರಾಯದಲ್ಲೂ ಮಂಜು ದಿ ಬೆಸ್ಟ್​. ಹಾಗಂತ ಮಂಜು ಮಾಡುವ ಎಲ್ಲ ಕೆಲಸವನ್ನೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವರು ಮಾಡಿದ ತಪ್ಪನ್ನು ಸುದೀಪ್​ ಖಂಡಿಸಿದ್ದಾರೆ. ವೀಕೆಂಡ್​ ಎಪಿಸೋಡ್​ನಲ್ಲಿ ಕಿಚ್ಚ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಐದನೇ ವಾರದಲ್ಲಿ ಮಂಜು ಪಾವಗಡ ಕ್ಯಾಪ್ಟನ್​ ಆಗಿ ಆಯ್ಕೆಯಾದರು. ಹಾಗಾಗಿ ಅವರಿಗೆ ವಿಶೇಷವಾದ ಬೆಡ್​ರೂಮ್​ ಸಿಕ್ಕಿತು. ಅಲ್ಲಿ ತನ್ನ ಸ್ನೇಹಿತರನ್ನೆಲ್ಲ ಸೇರಿಸಿಕೊಂಡು ಮಂಜು ಹರಟೆ ಹೊಡಿದಿದ್ದಾರೆ. ಅದು ಕೂಡ ರಾತ್ರಿ ಹೊತ್ತು ಮನೆಯ ಲೈಟ್​ ಆಫ್​ ಆದಮೇಲೆ. ಇದರಿಂದಾಗಿ ಇತರೆ ಸದಸ್ಯರ ನಿದ್ರೆಗೆ ತೊಂದರೆ ಆಗಿದೆ. ಅವರ ಗಲಾಟೆ ತಾಳಲಾರದೆ ಅರವಿಂದ್​ ಕೆ.ಪಿ. ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಗಾರ್ಡನ್​ ಏರಿಯಾಗೆ ಬಂದು ಮಲಗುವಂತಾಯಿತು.

ಇದೇ ವಿಚಾರವನ್ನು ಇಟ್ಟುಕೊಂಡು ವೀಕೆಂಡ್​ನಲ್ಲಿ ಸುದೀಪ್​ ಚರ್ಚೆ ಮಾಡಿದ್ದಾರೆ. ನೀವು ಮಾಡಿದ್ದು ಸರೀನಾ ಎಂದು ಮಂಜುಗೆ ಕಿಚ್ಚ ಪ್ರಶ್ನೆ ಮಾಡಿದರು. ‘ನಿಮ್ಮ ಮಾತುಕತೆಯಿಂದ ತೊಂದರೆ ಆಗಿದ್ದಕ್ಕೆ ಅರವಿಂದ್​ ಮತ್ತು ಚಕ್ರವರ್ತಿ ಚಂದ್ರಚೂಡ್​ ಹೊರಗೆ ಹೋಗಿ ಗಾರ್ಡನ್​ ಏರಿಯಾದಲ್ಲಿ ಮಲಗಿದ್ದು ನಿಮ್ಮ ಗಮನಕ್ಕೆ ಬರುತ್ತದೆ. ಆದರೆ ನೀವು ಉಡಾಫೆಯಲ್ಲಿ ಮಾತನಾಡಿದ್ರಿ. ಸ್ಪರ್ಧಿಯಾಗಿ ನೀವು ಹಾಗೆ ಮಾತನಾಡಿದ್ರೆ ನಡೆಯುತ್ತಿತ್ತು. ಆದರೆ ಕ್ಯಾಪ್ಟನ್​ ಆಗಿ ಹಾಗೆ ನಡೆದುಕೊಳ್ಳಬಾರದಾಗಿತ್ತು’ ಎಂದು ಕಿಚ್ಚ ಛಾಟಿ ಬೀಸಿದ್ದಾರೆ.

ಟಾಸ್ಕ್​ ಒಂದರಲ್ಲಿ ಔಟ್​ ಆದಮೇಲೂ ಕೂಡ ಮಂಜು ಪಾಲ್ಗೊಂಡಿದ್ದರು. ಅದನ್ನು ಗಮನಿಸಿರುವ ಸುದೀಪ್​ ಅವರು ಮಂಜುಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಹಠ, ಕೋಪ ಸಹಜ. ಆದರೆ ಇಂಥ ವರ್ತನೆಯನ್ನು ದ್ವೇಷ ಎನ್ನುತ್ತಾರೆ. ಆಟ ಎನ್ನುವುದಿಲ್ಲ’ ಎಂದು ಖಾರವಾಗಿಯೇ ಹೇಳಿದ್ದಾರೆ. ಒಟ್ಟಿನಲ್ಲಿ ದ್ವೇಷದ ಆಟ ಆಡಿದ್ದನ್ನು ಮತ್ತು ಕ್ಯಾಪ್ಟನ್​ ಜವಾಬ್ದಾರಿಯನ್ನು ಮರೆತು ಉಡಾಫೆಯಲ್ಲಿ ಮಾತನಾಡಿದ್ದನ್ನು ಮಂಜು ಒಪ್ಪಿಕೊಂಡರು. ಅಲ್ಲದೆ, ಚಕ್ರವರ್ತಿ ಚಂದ್ರಚೂಡ್​ ಬಳಿ ಹೋಗಿ ಅವರು ಕ್ಷಮೆ ಕೂಡ ಕೇಳಿದರು.

ರಾತ್ರಿ ದೊಡ್ಡದಾಗಿ ಮಾತನಾಡಿದ ವಿಚಾರದಲ್ಲಿ ಮಂಜು ಅವರ ಪರವಾಗಿ ದಿವ್ಯಾ ಸುರೇಶ್​ ವಾದ ಮಾಡಿದ್ದರು. ಅದನ್ನೂ ಸುದೀಪ್​ ವಿರೋಧಿಸಿದ್ದಾರೆ. ‘ಬೇಕಿದ್ದರೆ ಅವರು ಗಾರ್ಡನ್​ ಏರಿಯಾದಲ್ಲಿ ಹೋಗಿ ಮಲಗಿಕೊಳ್ಳಲಿ ಎಂದು ನೀವು ಹೇಳಿದ್ದು ಸರಿಯೇ? ನಿಮಗೆ ಇದೆಲ್ಲ ಅರ್ಥವಾಗಬೇಕು’ ಎಂದು ಕಿಚ್ಚ ಹೇಳಿದ ನಂತರ ದಿವ್ಯಾ ಸಹ ಕ್ಷಮೆ ಕೇಳಿದರು.

ಇದನ್ನೂ ಓದಿ: ‘ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ’: ಮಂಜು ಪಾವಗಡ ಹೀಗೆ ಬೆಚ್ಚಿ ಬಿದ್ದಿದ್ಯಾಕೆ?

‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

(Bigg Boss Kannada updates: Kichcha Sudeep warns Manju Pavagada and Divya suresh for their irresponsible Behavior)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್