Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ‘ದಿವ್ಯಾನ ಬಿಟ್ಟು ಕೊಡು ಗುರೂ’ ಅಂತ ಮಂಜುಗೆ ಮನವಿ ಮಾಡಿದ ಶಮಂತ್​! ಕಿಚ್ಚನ ಎದುರಲ್ಲೇ ರಹಸ್ಯ ಬಯಲು

ಶಮಂತ್​ ಬ್ರೋ ಗೌಡ ಅವರ ವರ್ತನೆಗಳ ಬಗ್ಗೆ ವಾರದ ಪಂಚಾಯಿತಿಯಲ್ಲಿ ಚರ್ಚೆ ಆಗಿದೆ. ಹುಡುಗಿಯರ ವಿಚಾರದಲ್ಲಿ ಶಮಂತ್​ ಹೇಗೆ ನಡೆದುಕೊಳ್ಳುತ್ತಾರೆ ಎಂಬ ಬಗ್ಗೆ ಮನೆಯ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

BBK8: ‘ದಿವ್ಯಾನ ಬಿಟ್ಟು ಕೊಡು ಗುರೂ’ ಅಂತ ಮಂಜುಗೆ ಮನವಿ ಮಾಡಿದ ಶಮಂತ್​! ಕಿಚ್ಚನ ಎದುರಲ್ಲೇ ರಹಸ್ಯ ಬಯಲು
ಮಂಜು ಪಾವಗಡ - ದಿವ್ಯಾ ಉರುಡುಗ - ಶಮಂತ್​ ಬ್ರೋ ಗೌಡ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 15, 2021 | 2:34 PM

ಹುಡುಗಿಯರು ಬೇರೆ ಹುಡುಗರ ಜೊತೆ ಇರುವಷ್ಟು ಆರಾಮಾಗಿ ತಮ್ಮ ಜೊತೆ ಇರಲ್ಲ ಅಂತ ಶಮಂತ್​ಗೆ ಬಹಳ ಬೇಜಾರು ಇದೆ. ಈ ಮಾತು ನಿಜವೇ ಎಂದು ಮನೆಯ ಎಲ್ಲ ಸದಸ್ಯರಿಗೆ 2ನೇ ವಾರಾದ ಪಂಚಾಯಿತಿಯಲ್ಲಿ ಸುದೀಪ್​ ಪ್ರಶ್ನೆ ಕೇಳಿದರು. ಅದಕ್ಕೆ ಎಲ್ಲರೂ ಬಗೆಬಗೆಯ ಉತ್ತರ ನೀಡಿದರು.

ಶುಭಾ ಪೂಂಜಾ ತುಂಬ ಫನ್ನಿಯಾಗಿ ಉತ್ತರಿಸಿದರು. ‘ಈ ವಿಷಯದಲ್ಲಿ ಶಮಂತ್​ ತುಂಬಾ ಬೇಜಾರು ಮಾಡಿಕೊಂಡಿರುವುದು ನಿಜ. ಹೊರಗಡೆ 22 ಹುಡುಗಿಯರು ಪ್ರಪೋಸ್​ ಮಾಡಿದ್ರು ಅಂತ ಶಮಂತ್​ ಹೇಳಿಕೊಳ್ಳುತ್ತಾರೆ. ಆದರೆ ಇಲ್ಲಿ ನಿಮಗೆ ಒಬ್ಬರೂ ಬೀಳುತ್ತಿಲ್ಲವಲ್ಲ ಯಾಕೆ ಅಂತ ನಾನು ಕೇಳಿದೀನಿ’ ಎಂದರು ಶುಭಾ ಪೂಂಜಾ. ಅದಕ್ಕೆ ಕಿಚ್ಚನ ಪ್ರತಿಕ್ರಿಯೆ ಕೂಡ ಸಖತ್​ ಫನ್ನಿ ಆಗಿತ್ತು. ‘ರೀ.. ಶಮಂತ್​, ಹೊರಗಡೆ 22 ಹುಡುಗಿಯರು ಪ್ರಪೋಸ್​ ಮಾಡೋದು ಇಂಪಾರ್ಟೆಂಟ್​ ಅಲ್ಲ. ಮಂಜು ಥರ ಎರಡು ಹೊರಗಡೆ ಇಡಿ’ ಎಂದು ಸುದೀಪ್​ ಹೇಳುತ್ತಿದ್ದಂತೆಯೇ ಎಲ್ಲರೂ ಜೋರಾಗಿ ನಕ್ಕರು.

‘ಸುಮ್ಮನೆ ಇರಿ ಸರ್​, ಭಯ ಆಗುತ್ತಿದೆ’ ಎಂದು ಮಂಜು ಮಾತು ಶುರುಮಾಡಿದರು. ‘ನಾನು ಯಾರ ಜೊತೆಗಾದರೂ ಮಾತನಾಡಿದರೆ ಶಮಂತ್​ ಮುನಿಸಿಕೊಂಡು ಹೋಗುತ್ತಾನೆ. ಗುರೂ, ಇದು ಒಂದಾದರೂ ಬಿಟ್ಟು ಬಿಡು ಅಂತಾನೆ. ಕಲ್ಲು ಹಾಕಬೇಡ ಗುರೂ ಅನ್ನುತ್ತಾನೆ. ದಿವ್ಯಾ ಉರುಡುಗ ವಿಚಾರದಲ್ಲಿ ಶಮಂತ್​ ಈ ರೀತಿ ಹೇಳಿದ್ದಾನೆ’ ಎಂದಿದ್ದಾರೆ ಮಂಜು.

ಶುಭಾ ಪೂಂಜಾ ಇನ್ನೊಂದು ವಿಚಾರ ತೆರೆದಿಟ್ಟಿದ್ದಾರೆ. ‘ಫಸ್ಟ್​ವೀಕ್​ನಲ್ಲಿಯೇ ಶಮಂತ್​ ಕ್ಯಾಪ್ಟನ್​ ಆಗಿದ್ದರಿಂದ ಎಲ್ಲರ ತಲೆ ತಿಂದಿದ್ದಾರೆ. ಕೆಲಸ ಮಾಡಿಲ್ಲ, ವಸ್ತುಗಳನ್ನು ಸರಿಯಾಗಿ ಇಟ್ಟಿಲ್ಲ, ಅಡುಗೆ ಮಾಡಿಲ್ಲ, ಅದು ಮಾಡಿಲ್ಲ ಇದು ಮಾಡಿಲ್ಲ ಅಂತ ಎಲ್ಲ ಹುಡುಗಿಯರಿಗೂ ಅಜ್ಜಿ ಥರ ಶಮಂತ್​ ತಲೆ ತಿಂದಿದ್ದಾರೆ. ಹಾಗಾಗಿ ಎಲ್ಲ ಹುಡುಗಿಯರೂ ಶಮಂತ್​ರನ್ನು ಕಂಡರೆ ದೂರ ಓಡಿ ಹೋಗುತ್ತಾರೆ. ಹುಡುಗಿಯರನ್ನು ಬೀಳಿಸುವ ಟ್ಯಾಲೆಂಟ್​ ಶಮಂತ್​ಗೆ ಇನ್ನೂ ಬರಬೇಕು’ ಎಂಬುದು ಶುಭಾ ಪೂಂಜಾ ಅಭಿಪ್ರಾಯ.

ಇದನ್ನೂ ಓದಿ: BBK8: ಲ್ಯಾಗ್​ ಮಂಜುಗೆ ಮದುವೆ ಆಗಿರುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಯಾರಿಗೂ ಗೊತ್ತಿಲ್ವಂತೆ!

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ