AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಚಿಕ್ಕ ಹುಡುಗ ವಿಶ್ವನಾಥ್​ಗೆ ಶಿಷ್ಯನಾದ ಸಂಬರಗಿ! ಒಂದೇ ವಾರದಲ್ಲಿ ಗೇಮ್​ ಚೇಂಜ್​ ಮಾಡಿದ ಕಿಚ್ಚ!

ವೀಕ್ಷಕರು ಊಹಿಸಲೂ ಸಾಧ್ಯವಾಗದಂತಹ ಟ್ವಿಸ್ಟ್​ಗಳು ಬಿಗ್​ ಬಾಸ್​ ಮನೆಯಲ್ಲಿ ಕಾಣಿಸುತ್ತಿವೆ. ಮನೆಯೊಳಗಿನ ಚಿಕ್ಕ ಸ್ಪರ್ಧಿ ವಿಶ್ವನಾಥ್​ಗೆ ಪ್ರಶಾಂತ್​ ಸಂಬರಗಿ ಶಿಷ್ಯನಾಗಿದ್ದಾರೆ.

Bigg Boss Kannada: ಚಿಕ್ಕ ಹುಡುಗ ವಿಶ್ವನಾಥ್​ಗೆ ಶಿಷ್ಯನಾದ ಸಂಬರಗಿ! ಒಂದೇ ವಾರದಲ್ಲಿ ಗೇಮ್​ ಚೇಂಜ್​ ಮಾಡಿದ ಕಿಚ್ಚ!
ಪ್ರಶಾಂತ್​ ಸಂಬರಗಿ - ವಿಶ್ವನಾಥ್​
ಮದನ್​ ಕುಮಾರ್​
|

Updated on: Mar 15, 2021 | 12:45 PM

Share

ಬಿಗ್​ ಬಾಸ್​ನಲ್ಲಿ ಏನು ಬೇಕಾದರೂ ಆಗಬಹುದು. ಇಂದು ಹಾರಾಡಿದವರು ನಾಳೆ ಮುಗ್ಗರಿಸಿ ಬೀಳಬಹುದು. ಪ್ರಶಾಂತ್​ ಸಂಬರಗಿ ಮತ್ತು ವಿಶ್ವನಾಥ್​ ನಡುವೆಯೂ ಹಾಗೆಯೇ ಆಗಿದೆ. ಅದಕ್ಕೆ ಕಾರಣ ಆಗಿರುವುದು ಮಾತ್ರ ಕಿಚ್ಚ ಸುದೀಪ್​! ಹೌದು, ಎರಡನೇ ವಾರದ ಪಂಚಾಯಿತಿಯಲ್ಲಿ ಸುದೀಪ್​ ಇಂಥದ್ದೊಂದು ಟ್ವಿಸ್ಟ್ ನೀಡಿದ್ದಾರೆ.

ವಿಶ್ವ ವೀಕ್​ ಎಂದಿದ್ದ ಸಂಬರಗಿ ಮೊದಲ ವಾರದಲ್ಲಿ ನಾಮಿನೇಷನ್​ನಿಂದ ಬಚಾವ್​ ಆಗಲು ಇದ್ದ ಟಾಸ್ಕ್​ನಲ್ಲಿ ವಿಶ್ವನಾಥ್​ ಅವರನ್ನು ಪ್ರಶಾಂತ್​ ಪ್ರತಿಸ್ಪರ್ಧಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರ ಆಯ್ಕೆಗೆ ಕಾರಣ ಏನು ಎಂದು ಕೇಳಿದ್ದಕ್ಕೆ, ‘ವಿಶ್ವ ತುಂಬಾ ವೀಕ್​ ಸ್ಪರ್ಧಿ. ನನ್ನ ಸ್ವಾರ್ಥಕ್ಕಾಗಿ ಅವರನ್ನು ಆಯ್ಕೆ ಮಾಡಿಕೊಂಡೆ’ ಎಂದು ಪ್ರಶಾಂತ್​ ಸಂಬರಗಿ ಉತ್ತರ ನೀಡಿದ್ದರು. ಸುದೀಪ್​ ಮುಂದೆ ಅದನ್ನು ಪ್ರಶಾಂತ್​ ಒಪ್ಪಿಕೊಂಡಿದ್ದರು ಕೂಡ. ಅಲ್ಲದೆ, ಆ ಟಾಸ್ಕ್​ನಲ್ಲಿ ವಿಶ್ವನಾಥ್​ ಎದುರು ಪ್ರಶಾಂತ್​ ಗೆದ್ದು ಬೀಗಿದ್ದರು. ಆದರೆ ತಮ್ಮನ್ನು ವೀಕ್​ ಎಂದು ಕರೆದಿದ್ದು ವಿಶ್ವನಾಥ್​ಗೆ ಬೇಸರ ಮೂಡಿಸಿತ್ತು.

ಆದರೆ ಈಗ ಗೇಮ್​ ಚೇಂಜ್​! ಎರಡನೇ ವಾರದ ಪಂಚಾಯಿತಿಯಲ್ಲಿ ಒಂದು ಹಾಡು ಹೇಳುವಂತೆ ವಿಶ್ವನಾಥ್​ಗೆ ಸುದೀಪ್​ ಸೂಚಿಸಿದರು. ಅದರಂತೆ, ಮನೆಯೊಳಗೆ ತಾವೇ ಕಂಪೋಸ್​ ಮಾಡಿದ ಹಾಡನ್ನು ವಿಶ್ವನಾಥ್​ ಹೇಳಿದರು. ಅದೇ ಹಾಡಿನ ನಾಲ್ಕು ಸಾಲು ಹೇಳುವಂತೆ ಪ್ರಶಾಂತ್​ಗೆ ಸುದೀಪ್​ ಸೂಚಿಸಿದರು. ಆದರೆ ಪ್ರಶಾಂತ್​ ಹಾಡಿದ ರೀತಿ ಅಷ್ಟಾಗಿ ಯಾರಿಗೂ ಹಿಡಿಸಲಿಲ್ಲ. ಇನ್ನೊಂದು ವಾರದೊಳಗೆ ಕಲಿತು ಹಾಡುತ್ತೇನೆ ಎಂದು ಪ್ರಶಾಂತ್​ ಭರವಸೆ ನೀಡಿದ್ದಾರೆ. ಅವರಿಗೆ ಹಾಡು ಕಲಿಸುವ ಜವಾಬ್ದಾರಿಯನ್ನು ವಿಶ್ವನಾಥ್​ಗೆ ವಹಿಸಲಾಗಿದೆ. ಅಂದು ವೀಕ್​ ಎಂದು ಪರಿಗಣಿಸಿದ್ದ ವಿಶ್ವನಾಥ್​ಗೆ ಇಂದು ಹಾಡಿನ ವಿಚಾರದಲ್ಲಿ ಪ್ರಶಾಂತ್​ ಶಿಷ್ಯನಾಗಿದ್ದಾರೆ!

ಒಬ್ಬರು ಒಂದು ವಿಚಾರದಲ್ಲಿ ಸ್ಟ್ರಾಂಗ್​ ಆಗಿದ್ದರೆ, ಇನ್ನೊಂದು ವಿಚಾರದಲ್ಲಿ ವೀಕ್​ ಆಗಿರುವುದು ಸಹಜ. ಮಾತುಗಾರಿಕೆ ಮತ್ತು ಟಾಸ್ಕ್​ ವಿಚಾರದಲ್ಲಿ ಪ್ರಶಾಂತ್ ಸ್ಟ್ರಾಂಗ್​ ಆಗಿರಬಹುದು. ಆದರೆ ಹಾಡುಗಾರಿಕೆಯಲ್ಲಿ ಅವರು ವೀಕ್​ ಎಂಬುದು ಎಲ್ಲರ ಎದುರು ಬಹಿರಂಗ ಆಗಿದೆ. ಈ ವಿಚಾರವನ್ನು ಮನಗಾಣಿಸುವ ಸಲುವಾಗಿಯೇ ಸುದೀಪ್​ ಈ ಟಾಸ್ಕ್​ ನೀಡಿದ್ದಾರಾ? ಹಾಡು ಕಲಿತು ಪ್ರಶಾಂತ್​ ಎಲ್ಲರ ಎದುರಿನಲ್ಲೂ ಭೇಷ್​ ಎನಿಸಿಕೊಳ್ಳುತ್ತಾರಾ? ಈ ಎಲ್ಲ ಪ್ರಶ್ನೆಗಳಿಗೆ ಮುಂದಿನ ವಾರದ ಪಂಚಾಯಿತಿಯಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ