AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ಈ ವಾರ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್ ಆಗಿದ್ದಾರೆ.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?
ಕಿಚ್ಚ ಸುದೀಪ್
ಮದನ್​ ಕುಮಾರ್​
| Edited By: |

Updated on:Apr 18, 2021 | 3:44 PM

Share

ಕನ್ನಡದ ಬಿಗ್​ ಬಾಸ್​ನಲ್ಲಿ  ಮೊದಲ ಬಾರಿಗೆ ಕಿಚ್ಚ ಸುದೀಪ್​ ಅವರು ವೀಕೆಂಡ್​ ಎಪಿಸೋಡ್​ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯದ ಕಾರಣದಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸುದ್ದಿ ಕೇಳಿಬಂದಾಗಿನಿಂದ ಅಭಿಮಾನಿಗಳ ತಲೆಯಲ್ಲಿ ಒಂದು ಪ್ರಶ್ನೆ ಕಾಡುತ್ತಿತ್ತು. ಸುದೀಪ್​ ಬದಲಿಗೆ ವೀಕೆಂಡ್​ ಎಪಿಸೋಡ್​ ನಡೆಸಿಕೊಡುವುದು ಯಾರು? ಅದಕ್ಕೀಗ ಉತ್ತರ ಸಿಕ್ಕಿದೆ. ಸುದೀಪ್​ ಅನುಪಸ್ಥಿತಿಯಲ್ಲಿ ವಾರಾಂತ್ಯದ ಸಂಚಿಕೆಗಳ ಚಿತ್ರೀಕರಣ ನಡೆದಿದೆ.

ಈ ವಾರ ಸುದೀಪ್​ ಅವರು ಬಿಗ್​ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್​ ಆಗಿದ್ದಾರೆ. ಸುದೀಪ್​ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಎಲ್ಲ ಸದಸ್ಯರೂ ಸೇರಿ ಕಿಚ್ಚನಿಗೆ ಪ್ರೀತಿಯ ಪತ್ರ ಬರೆದಿದ್ದಾರೆ. ಕೆಲವರಂತೂ ಕಣ್ಣೀರು ಹಾಕಿದ್ದಾರೆ. ಸುದೀಪ್​ ಇಲ್ಲದೇ ಇದ್ದರೂ ಈ ವಾರದ ಎಲಿಮಿನೇಷನ್​ ಖಂಡಿತವಾಗಿ ನಡೆದಿದೆ.

ಹೌದು, ಸುದೀಪ್​ ಅನುಪಸ್ಥಿತಿಯಲ್ಲಿಯೂ ಎಮಿಲಿನೇಷನ್​ ಪ್ರಕ್ರಿಯೆ ನಡೆಸಲಾಗಿದೆ. ಸ್ಪರ್ಧಿಗಳಿಗೆ ಪ್ರತಿ ಹಂತದಲ್ಲೂ ಬಿಗ್​ ಬಾಸ್​ ಬೇರೆ ಬೇರೆ ಸೂಚನೆಗಳನ್ನು ನೀಡುವ ಮೂಲಕ ಎಲಿಮಿನೇಷನ್​ ಮತ್ತು ಮುಂದಿನ ವಾರಕ್ಕೆ ನಾಮಿನೇಷನ್​ ಪ್ರಕ್ರಿಯೆಯನ್ನು ಮುಗಿಸಿದ್ದಾರೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ. ಬದಲಿಗೆ ಕೇವಲ ಟಾಸ್ಕ್​ಗಳನ್ನು ನೀಡುವ ಮೂಲಕ ವಾರಾಂತ್ಯದ ಎಪಿಸೋಡ್​ಗಳನ್ನು ​ಮುಗಿಸಲಾಗಿದೆ.

ಈ ಎಂಟು ಸೀಸನ್​ಗಳಲ್ಲಿ ಸುದೀಪ್​ ಇಲ್ಲದೇ ವಾರಾಂತ್ಯದ ಎಪಿಸೋಡ್​ ನಡೆದಿರುವುದು ಇದೇ ಮೊದಲು. ತಮಿಳು, ತೆಲುಗು, ಹಿಂದಿ ಬಿಗ್​ ಬಾಸ್​ ಶೋಗಳಲ್ಲಿ ಇಂಥ ಸಮಸ್ಯೆ ಎದುರಾದಾಗ ಪರ್ಯಾಯವಾಗಿ ಬೇರೆ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು. ಸಲ್ಮಾನ್​ ಖಾನ್​ ಬದಲಿಗೆ ಸಿದ್ಧಾರ್ಥ್​ ಶುಕ್ಲಾ, ಅಕ್ಕಿನೇನಿ ನಾಗಾರ್ಜುನ ಬದಲಿಗೆ ಸಮಂತಾ ಅವರು ಶೋ ನಡೆಸಿಕೊಟ್ಟಿದ್ದರು. ಆದರೆ ಕನ್ನಡದಲ್ಲಿ ಸುದೀಪ್​ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 3:39 pm, Sun, 18 April 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್