AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ಈ ವಾರ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್ ಆಗಿದ್ದಾರೆ.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?
ಕಿಚ್ಚ ಸುದೀಪ್
ಮದನ್​ ಕುಮಾರ್​
| Edited By: |

Updated on:Apr 18, 2021 | 3:44 PM

Share

ಕನ್ನಡದ ಬಿಗ್​ ಬಾಸ್​ನಲ್ಲಿ  ಮೊದಲ ಬಾರಿಗೆ ಕಿಚ್ಚ ಸುದೀಪ್​ ಅವರು ವೀಕೆಂಡ್​ ಎಪಿಸೋಡ್​ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯದ ಕಾರಣದಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸುದ್ದಿ ಕೇಳಿಬಂದಾಗಿನಿಂದ ಅಭಿಮಾನಿಗಳ ತಲೆಯಲ್ಲಿ ಒಂದು ಪ್ರಶ್ನೆ ಕಾಡುತ್ತಿತ್ತು. ಸುದೀಪ್​ ಬದಲಿಗೆ ವೀಕೆಂಡ್​ ಎಪಿಸೋಡ್​ ನಡೆಸಿಕೊಡುವುದು ಯಾರು? ಅದಕ್ಕೀಗ ಉತ್ತರ ಸಿಕ್ಕಿದೆ. ಸುದೀಪ್​ ಅನುಪಸ್ಥಿತಿಯಲ್ಲಿ ವಾರಾಂತ್ಯದ ಸಂಚಿಕೆಗಳ ಚಿತ್ರೀಕರಣ ನಡೆದಿದೆ.

ಈ ವಾರ ಸುದೀಪ್​ ಅವರು ಬಿಗ್​ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್​ ಆಗಿದ್ದಾರೆ. ಸುದೀಪ್​ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಎಲ್ಲ ಸದಸ್ಯರೂ ಸೇರಿ ಕಿಚ್ಚನಿಗೆ ಪ್ರೀತಿಯ ಪತ್ರ ಬರೆದಿದ್ದಾರೆ. ಕೆಲವರಂತೂ ಕಣ್ಣೀರು ಹಾಕಿದ್ದಾರೆ. ಸುದೀಪ್​ ಇಲ್ಲದೇ ಇದ್ದರೂ ಈ ವಾರದ ಎಲಿಮಿನೇಷನ್​ ಖಂಡಿತವಾಗಿ ನಡೆದಿದೆ.

ಹೌದು, ಸುದೀಪ್​ ಅನುಪಸ್ಥಿತಿಯಲ್ಲಿಯೂ ಎಮಿಲಿನೇಷನ್​ ಪ್ರಕ್ರಿಯೆ ನಡೆಸಲಾಗಿದೆ. ಸ್ಪರ್ಧಿಗಳಿಗೆ ಪ್ರತಿ ಹಂತದಲ್ಲೂ ಬಿಗ್​ ಬಾಸ್​ ಬೇರೆ ಬೇರೆ ಸೂಚನೆಗಳನ್ನು ನೀಡುವ ಮೂಲಕ ಎಲಿಮಿನೇಷನ್​ ಮತ್ತು ಮುಂದಿನ ವಾರಕ್ಕೆ ನಾಮಿನೇಷನ್​ ಪ್ರಕ್ರಿಯೆಯನ್ನು ಮುಗಿಸಿದ್ದಾರೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ. ಬದಲಿಗೆ ಕೇವಲ ಟಾಸ್ಕ್​ಗಳನ್ನು ನೀಡುವ ಮೂಲಕ ವಾರಾಂತ್ಯದ ಎಪಿಸೋಡ್​ಗಳನ್ನು ​ಮುಗಿಸಲಾಗಿದೆ.

ಈ ಎಂಟು ಸೀಸನ್​ಗಳಲ್ಲಿ ಸುದೀಪ್​ ಇಲ್ಲದೇ ವಾರಾಂತ್ಯದ ಎಪಿಸೋಡ್​ ನಡೆದಿರುವುದು ಇದೇ ಮೊದಲು. ತಮಿಳು, ತೆಲುಗು, ಹಿಂದಿ ಬಿಗ್​ ಬಾಸ್​ ಶೋಗಳಲ್ಲಿ ಇಂಥ ಸಮಸ್ಯೆ ಎದುರಾದಾಗ ಪರ್ಯಾಯವಾಗಿ ಬೇರೆ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು. ಸಲ್ಮಾನ್​ ಖಾನ್​ ಬದಲಿಗೆ ಸಿದ್ಧಾರ್ಥ್​ ಶುಕ್ಲಾ, ಅಕ್ಕಿನೇನಿ ನಾಗಾರ್ಜುನ ಬದಲಿಗೆ ಸಮಂತಾ ಅವರು ಶೋ ನಡೆಸಿಕೊಟ್ಟಿದ್ದರು. ಆದರೆ ಕನ್ನಡದಲ್ಲಿ ಸುದೀಪ್​ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 3:39 pm, Sun, 18 April 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು