AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ಈ ವಾರ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್ ಆಗಿದ್ದಾರೆ.

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?
ಕಿಚ್ಚ ಸುದೀಪ್
ಮದನ್​ ಕುಮಾರ್​
| Edited By: |

Updated on:Apr 18, 2021 | 3:44 PM

Share

ಕನ್ನಡದ ಬಿಗ್​ ಬಾಸ್​ನಲ್ಲಿ  ಮೊದಲ ಬಾರಿಗೆ ಕಿಚ್ಚ ಸುದೀಪ್​ ಅವರು ವೀಕೆಂಡ್​ ಎಪಿಸೋಡ್​ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯದ ಕಾರಣದಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸುದ್ದಿ ಕೇಳಿಬಂದಾಗಿನಿಂದ ಅಭಿಮಾನಿಗಳ ತಲೆಯಲ್ಲಿ ಒಂದು ಪ್ರಶ್ನೆ ಕಾಡುತ್ತಿತ್ತು. ಸುದೀಪ್​ ಬದಲಿಗೆ ವೀಕೆಂಡ್​ ಎಪಿಸೋಡ್​ ನಡೆಸಿಕೊಡುವುದು ಯಾರು? ಅದಕ್ಕೀಗ ಉತ್ತರ ಸಿಕ್ಕಿದೆ. ಸುದೀಪ್​ ಅನುಪಸ್ಥಿತಿಯಲ್ಲಿ ವಾರಾಂತ್ಯದ ಸಂಚಿಕೆಗಳ ಚಿತ್ರೀಕರಣ ನಡೆದಿದೆ.

ಈ ವಾರ ಸುದೀಪ್​ ಅವರು ಬಿಗ್​ ಬಾಸ್ ನಡೆಸಿಕೊಡುವುದಿಲ್ಲ ಎಂಬ ವಿಷಯ ಮನೆಯೊಳಗಿನ ಸ್ಪರ್ಧಿಗಳಿಗೂ ಗೊತ್ತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಶಾಕ್​ ಆಗಿದ್ದಾರೆ. ಸುದೀಪ್​ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಎಲ್ಲ ಸದಸ್ಯರೂ ಸೇರಿ ಕಿಚ್ಚನಿಗೆ ಪ್ರೀತಿಯ ಪತ್ರ ಬರೆದಿದ್ದಾರೆ. ಕೆಲವರಂತೂ ಕಣ್ಣೀರು ಹಾಕಿದ್ದಾರೆ. ಸುದೀಪ್​ ಇಲ್ಲದೇ ಇದ್ದರೂ ಈ ವಾರದ ಎಲಿಮಿನೇಷನ್​ ಖಂಡಿತವಾಗಿ ನಡೆದಿದೆ.

ಹೌದು, ಸುದೀಪ್​ ಅನುಪಸ್ಥಿತಿಯಲ್ಲಿಯೂ ಎಮಿಲಿನೇಷನ್​ ಪ್ರಕ್ರಿಯೆ ನಡೆಸಲಾಗಿದೆ. ಸ್ಪರ್ಧಿಗಳಿಗೆ ಪ್ರತಿ ಹಂತದಲ್ಲೂ ಬಿಗ್​ ಬಾಸ್​ ಬೇರೆ ಬೇರೆ ಸೂಚನೆಗಳನ್ನು ನೀಡುವ ಮೂಲಕ ಎಲಿಮಿನೇಷನ್​ ಮತ್ತು ಮುಂದಿನ ವಾರಕ್ಕೆ ನಾಮಿನೇಷನ್​ ಪ್ರಕ್ರಿಯೆಯನ್ನು ಮುಗಿಸಿದ್ದಾರೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ. ಬದಲಿಗೆ ಕೇವಲ ಟಾಸ್ಕ್​ಗಳನ್ನು ನೀಡುವ ಮೂಲಕ ವಾರಾಂತ್ಯದ ಎಪಿಸೋಡ್​ಗಳನ್ನು ​ಮುಗಿಸಲಾಗಿದೆ.

ಈ ಎಂಟು ಸೀಸನ್​ಗಳಲ್ಲಿ ಸುದೀಪ್​ ಇಲ್ಲದೇ ವಾರಾಂತ್ಯದ ಎಪಿಸೋಡ್​ ನಡೆದಿರುವುದು ಇದೇ ಮೊದಲು. ತಮಿಳು, ತೆಲುಗು, ಹಿಂದಿ ಬಿಗ್​ ಬಾಸ್​ ಶೋಗಳಲ್ಲಿ ಇಂಥ ಸಮಸ್ಯೆ ಎದುರಾದಾಗ ಪರ್ಯಾಯವಾಗಿ ಬೇರೆ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು. ಸಲ್ಮಾನ್​ ಖಾನ್​ ಬದಲಿಗೆ ಸಿದ್ಧಾರ್ಥ್​ ಶುಕ್ಲಾ, ಅಕ್ಕಿನೇನಿ ನಾಗಾರ್ಜುನ ಬದಲಿಗೆ ಸಮಂತಾ ಅವರು ಶೋ ನಡೆಸಿಕೊಟ್ಟಿದ್ದರು. ಆದರೆ ಕನ್ನಡದಲ್ಲಿ ಸುದೀಪ್​ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 3:39 pm, Sun, 18 April 21

Follow Us
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು