AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಈ ಮೂವರಿಗೆ ಪ್ರವೇಶವಿಲ್ಲ; ಶೋ ಮುಗಿದರೂ ಗುಂಪುಗಾರಿಕೆ ನಿಂತಿಲ್ಲ ಯಾಕೆ?

Bigg Boss Kannada: ಬಿಗ್​ ಬಾಸ್​ ಮನೆಯಿಂದ ಆಚೆ ಬಂದ ಬಳಿಕ ವಾಟ್ಸ್​ಆ್ಯಪ್​​ ಗ್ರೂಪ್​ ಕ್ರಿಯೇಟ್​ ಮಾಡಲಾಗಿದೆ. ಅದರಲ್ಲಿ ತಮಗೆ ಬೇಕಾದವರನ್ನು ಮಾತ್ರ ಸೇರಿಸಿಕೊಂಡು ಗುಂಪುಗಾರಿಕೆ ಮಾಡಲಾಗಿದೆ. ಆ ಬಗ್ಗೆ ಮೂವರು ಸ್ಪರ್ಧಿಗಳು ಈಗ ಮಾತನಾಡಿದ್ದಾರೆ.

ಬಿಗ್​ ಬಾಸ್​ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಈ ಮೂವರಿಗೆ ಪ್ರವೇಶವಿಲ್ಲ; ಶೋ ಮುಗಿದರೂ ಗುಂಪುಗಾರಿಕೆ ನಿಂತಿಲ್ಲ ಯಾಕೆ?
ಪ್ರಶಾಂತ್​ ಸಂಬರಗಿ - ಪ್ರಿಯಾಂಕಾ ತಿಮ್ಮೇಶ್​- ಚಕ್ರವರ್ತಿ ಚಂದ್ರಚೂಡ್​
ಮದನ್​ ಕುಮಾರ್​
|

Updated on: May 16, 2021 | 8:38 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಯಾಗಿದ್ದ ಪ್ರಶಾಂತ್​ ಸಂಬರಗಿ ಅತಿ ಹೆಚ್ಚಾಗಿ ಬಳಸಿದ ಪದ ಎಂದರೆ ಅದು ‘ಗುಂಪುಗಾರಿಕೆ’. ಮನೆಯಲ್ಲಿ ಎಲ್ಲರೂ ಒಂದಾಗಿ ಇರುವ ಬದಲು ತಮಗೆ ಬೇಕಾದವರ ಜೊತೆ ಗುಂಪು ಕಟ್ಟಿಕೊಂಡು ಇರಲಾಗುತ್ತಿದೆ ಎಂದು ಅವರು ಆರಂಭದಿಂದಲೇ ಧ್ವನಿ ಎತ್ತಿದ್ದರು. ಈಗ ಕೊರೊನಾ ವೈರಸ್​ನಿಂದಾದ ಲಾಕ್​ಡೌನ್​ ಕಾರಣಕ್ಕೆ ಬಿಗ್​ ಬಾಸ್​ ಶೋ ಮುಗಿದಿದೆ. ಅರ್ಧದಲ್ಲೇ ಎಲ್ಲ ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕಳಿಸಲಾಗಿದೆ. ಅಚ್ಚರಿ ಎಂದರೆ ಶೋ ಮುಗಿಸಿ ಹೊರಬಂದ ಬಳಿಕವೂ ಗುಂಪುಗಾರಿಕೆ ಮುಂದುವರಿಯುತ್ತಿದೆ. ಸ್ಪರ್ಧಿಗಳೆಲ್ಲ ಸೇರಿಕೊಂಡು ವಾಟ್ಸ್​ಆ್ಯಪ್​​​ ಗ್ರೂಪ್ ಮಾಡಿಕೊಂಡಿದ್ದಾರೆ. ಆದರೆ ಆ ಗ್ರೂಪ್​ಗಳಲ್ಲಿ ಕೆಲವರನ್ನು ಸೇರಿಸಿಕೊಂಡಿಲ್ಲ ಎಂಬ ವಿಚಾರ ಈಗ ತಿಳಿದು ಬಂದಿದೆ.

ಬಿಗ್​ ಬಾಸ್​ ಮುಗಿದ ಬಳಿಕ ಪ್ರತಿದಿನ ಕಲರ್ಸ್​ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಸ್ಪರ್ಧಿಗಳು ಲೈವ್ ಬಂದು ಜನರ ಜೊತೆ ಮಾತನಾಡುತ್ತಿದ್ದಾರೆ. ಶನಿವಾರ (ಮೇ 15) ಪ್ರಿಯಾಂಕಾ ತಿಮ್ಮೇಶ್​, ಪ್ರಶಾಂತ್​ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದರು. ಆಗ ಈ ಗುಂಪುಗಾರಿಕೆಯ ವಿಚಾರವನ್ನು ಬಯಲು ಮಾಡಿದ್ದಾರೆ.

ಈ ಬಗ್ಗೆ ಮಾತು ಆರಂಭಿಸಿದ್ದು ಪ್ರಶಾಂತ್​ ಸಂಬರಗಿ​. ‘ನಮ್ಮನ್ನು ಇಲ್ಲಿ ಒಂದು ಗ್ಯಾಂಗ್​ ಮಾಡಿ ಹಾಕಿದ್ದಾರೆ’ ಎಂದು ಅವರು ಹೇಳಿದ್ದಕ್ಕೆ ‘ಯಾವ ಗ್ಯಾಂಗ್​’ ಎಂದು ಚಂದ್ರಚೂಡ್​ ಪ್ರಶ್ನಿಸಿದರು. ‘ಬಿಗ್​ ಬಾಸ್​ ಮನೆಯಿಂದ ಆಚೆ ಬಂದ ಬಳಿಕ ವಾಟ್ಸ್​ಆ್ಯಪ್​​​​ ಗ್ರೂಪ್​ ಕ್ರಿಯೇಟ್​ ಮಾಡಲಾಗಿದೆ. ಅದರಲ್ಲಿ ನಾನು-ನೀನು ಇಲ್ಲ. ಇದೇ ಗುಂಪುಗಾರಿಕೆ’ ಎಂದರು ಪ್ರಶಾಂತ್​. ‘ನಾನೂ ಆ ಗ್ರೂಪ್​ನಲ್ಲಿ ಇಲ್ಲ. ನಾನು ಯಾವಾಗಲೂ ಸಿಂಗಲ್​’ ಎಂದು ಪ್ರಿಯಾಂಕಾ ಹೇಳಿದರು.

‘ಮಜಾ ಏನೆಂದರೆ ನಮ್ಮ ಜೊತೆಗಿದ್ದ ಬಿಗ್​ ಬಾಸ್​ ಸ್ಪರ್ಧಿಗಳ ಎರಡು ವಾಟ್ಸ್​ಆ್ಯಪ್​​​​ ಗ್ರೂಪ್​ ಆಗಿದೆ. ಎರಡೂ ಗ್ರೂಪ್​​ನಲ್ಲಿ ನಮ್ಮನ್ನು ಸೇರಿಸಬಾರದು ಎಂದು ಚರ್ಚೆ ಆಗುತ್ತಿದೆಯಂತೆ. ಯಾರಿಗೆ ಯಾರ ಜೊತೆ ಮಾತನಾಡಬೇಕು ಎಂಬುದು ಅವರ ಆಯ್ಕೆ. ನಾನೇನಾದರೂ ಹೊರಬಂದು ಫೋನ್​ ಮಾಡಿ ಮಾತನಾಡಿದ್ದರೆ ಅದು ಪ್ರಿಯಾಂಕಾ ಜೊತೆ ಮಾತ್ರ’ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದರು. ಈ ಗುಂಪುಗಾರಿಕೆ ಬಗ್ಗೆ ಇನ್ನುಳಿದ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ