AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಈ ಮೂವರಿಗೆ ಪ್ರವೇಶವಿಲ್ಲ; ಶೋ ಮುಗಿದರೂ ಗುಂಪುಗಾರಿಕೆ ನಿಂತಿಲ್ಲ ಯಾಕೆ?

Bigg Boss Kannada: ಬಿಗ್​ ಬಾಸ್​ ಮನೆಯಿಂದ ಆಚೆ ಬಂದ ಬಳಿಕ ವಾಟ್ಸ್​ಆ್ಯಪ್​​ ಗ್ರೂಪ್​ ಕ್ರಿಯೇಟ್​ ಮಾಡಲಾಗಿದೆ. ಅದರಲ್ಲಿ ತಮಗೆ ಬೇಕಾದವರನ್ನು ಮಾತ್ರ ಸೇರಿಸಿಕೊಂಡು ಗುಂಪುಗಾರಿಕೆ ಮಾಡಲಾಗಿದೆ. ಆ ಬಗ್ಗೆ ಮೂವರು ಸ್ಪರ್ಧಿಗಳು ಈಗ ಮಾತನಾಡಿದ್ದಾರೆ.

ಬಿಗ್​ ಬಾಸ್​ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಈ ಮೂವರಿಗೆ ಪ್ರವೇಶವಿಲ್ಲ; ಶೋ ಮುಗಿದರೂ ಗುಂಪುಗಾರಿಕೆ ನಿಂತಿಲ್ಲ ಯಾಕೆ?
ಪ್ರಶಾಂತ್​ ಸಂಬರಗಿ - ಪ್ರಿಯಾಂಕಾ ತಿಮ್ಮೇಶ್​- ಚಕ್ರವರ್ತಿ ಚಂದ್ರಚೂಡ್​
ಮದನ್​ ಕುಮಾರ್​
|

Updated on: May 16, 2021 | 8:38 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಯಾಗಿದ್ದ ಪ್ರಶಾಂತ್​ ಸಂಬರಗಿ ಅತಿ ಹೆಚ್ಚಾಗಿ ಬಳಸಿದ ಪದ ಎಂದರೆ ಅದು ‘ಗುಂಪುಗಾರಿಕೆ’. ಮನೆಯಲ್ಲಿ ಎಲ್ಲರೂ ಒಂದಾಗಿ ಇರುವ ಬದಲು ತಮಗೆ ಬೇಕಾದವರ ಜೊತೆ ಗುಂಪು ಕಟ್ಟಿಕೊಂಡು ಇರಲಾಗುತ್ತಿದೆ ಎಂದು ಅವರು ಆರಂಭದಿಂದಲೇ ಧ್ವನಿ ಎತ್ತಿದ್ದರು. ಈಗ ಕೊರೊನಾ ವೈರಸ್​ನಿಂದಾದ ಲಾಕ್​ಡೌನ್​ ಕಾರಣಕ್ಕೆ ಬಿಗ್​ ಬಾಸ್​ ಶೋ ಮುಗಿದಿದೆ. ಅರ್ಧದಲ್ಲೇ ಎಲ್ಲ ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕಳಿಸಲಾಗಿದೆ. ಅಚ್ಚರಿ ಎಂದರೆ ಶೋ ಮುಗಿಸಿ ಹೊರಬಂದ ಬಳಿಕವೂ ಗುಂಪುಗಾರಿಕೆ ಮುಂದುವರಿಯುತ್ತಿದೆ. ಸ್ಪರ್ಧಿಗಳೆಲ್ಲ ಸೇರಿಕೊಂಡು ವಾಟ್ಸ್​ಆ್ಯಪ್​​​ ಗ್ರೂಪ್ ಮಾಡಿಕೊಂಡಿದ್ದಾರೆ. ಆದರೆ ಆ ಗ್ರೂಪ್​ಗಳಲ್ಲಿ ಕೆಲವರನ್ನು ಸೇರಿಸಿಕೊಂಡಿಲ್ಲ ಎಂಬ ವಿಚಾರ ಈಗ ತಿಳಿದು ಬಂದಿದೆ.

ಬಿಗ್​ ಬಾಸ್​ ಮುಗಿದ ಬಳಿಕ ಪ್ರತಿದಿನ ಕಲರ್ಸ್​ ಕನ್ನಡ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಸ್ಪರ್ಧಿಗಳು ಲೈವ್ ಬಂದು ಜನರ ಜೊತೆ ಮಾತನಾಡುತ್ತಿದ್ದಾರೆ. ಶನಿವಾರ (ಮೇ 15) ಪ್ರಿಯಾಂಕಾ ತಿಮ್ಮೇಶ್​, ಪ್ರಶಾಂತ್​ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದರು. ಆಗ ಈ ಗುಂಪುಗಾರಿಕೆಯ ವಿಚಾರವನ್ನು ಬಯಲು ಮಾಡಿದ್ದಾರೆ.

ಈ ಬಗ್ಗೆ ಮಾತು ಆರಂಭಿಸಿದ್ದು ಪ್ರಶಾಂತ್​ ಸಂಬರಗಿ​. ‘ನಮ್ಮನ್ನು ಇಲ್ಲಿ ಒಂದು ಗ್ಯಾಂಗ್​ ಮಾಡಿ ಹಾಕಿದ್ದಾರೆ’ ಎಂದು ಅವರು ಹೇಳಿದ್ದಕ್ಕೆ ‘ಯಾವ ಗ್ಯಾಂಗ್​’ ಎಂದು ಚಂದ್ರಚೂಡ್​ ಪ್ರಶ್ನಿಸಿದರು. ‘ಬಿಗ್​ ಬಾಸ್​ ಮನೆಯಿಂದ ಆಚೆ ಬಂದ ಬಳಿಕ ವಾಟ್ಸ್​ಆ್ಯಪ್​​​​ ಗ್ರೂಪ್​ ಕ್ರಿಯೇಟ್​ ಮಾಡಲಾಗಿದೆ. ಅದರಲ್ಲಿ ನಾನು-ನೀನು ಇಲ್ಲ. ಇದೇ ಗುಂಪುಗಾರಿಕೆ’ ಎಂದರು ಪ್ರಶಾಂತ್​. ‘ನಾನೂ ಆ ಗ್ರೂಪ್​ನಲ್ಲಿ ಇಲ್ಲ. ನಾನು ಯಾವಾಗಲೂ ಸಿಂಗಲ್​’ ಎಂದು ಪ್ರಿಯಾಂಕಾ ಹೇಳಿದರು.

‘ಮಜಾ ಏನೆಂದರೆ ನಮ್ಮ ಜೊತೆಗಿದ್ದ ಬಿಗ್​ ಬಾಸ್​ ಸ್ಪರ್ಧಿಗಳ ಎರಡು ವಾಟ್ಸ್​ಆ್ಯಪ್​​​​ ಗ್ರೂಪ್​ ಆಗಿದೆ. ಎರಡೂ ಗ್ರೂಪ್​​ನಲ್ಲಿ ನಮ್ಮನ್ನು ಸೇರಿಸಬಾರದು ಎಂದು ಚರ್ಚೆ ಆಗುತ್ತಿದೆಯಂತೆ. ಯಾರಿಗೆ ಯಾರ ಜೊತೆ ಮಾತನಾಡಬೇಕು ಎಂಬುದು ಅವರ ಆಯ್ಕೆ. ನಾನೇನಾದರೂ ಹೊರಬಂದು ಫೋನ್​ ಮಾಡಿ ಮಾತನಾಡಿದ್ದರೆ ಅದು ಪ್ರಿಯಾಂಕಾ ಜೊತೆ ಮಾತ್ರ’ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದರು. ಈ ಗುಂಪುಗಾರಿಕೆ ಬಗ್ಗೆ ಇನ್ನುಳಿದ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!