AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Winner: ಬಿಗ್​ ಬಾಸ್​ ಮನೆಯೊಳಗೆ ಕೊನೆಯದಾಗಿ ಉಳಿದುಕೊಂಡ 11 ಜನರು ಫಿನಾಲೆ ಕನಸು ಕಾಣುತ್ತಿದ್ದರು. ಆದರೆ ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದರ ಸಣ್ಣ ಸುಳಿವು ಕೂಡ ಅವರಿಗೆ ಇಲ್ಲ.

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು
ಬಿಗ್ ಬಾಸ್ ಕನ್ನಡ ಸೀಸನ್ 8
Follow us
ಮದನ್​ ಕುಮಾರ್​
|

Updated on: May 09, 2021 | 8:15 AM

ಬಿಗ್​ ಬಾಸ್​ ಪ್ರೇಕ್ಷಕರು ಕನಸಿನಲ್ಲಿಯೂ ನಿರೀಕ್ಷಿಸಿರದ ಆ ದಿನ ಎದುರಾಗಿದೆ. ಇಂದು (ಮೇ 9) ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅಂತ್ಯವಾಗುತ್ತಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ, ಲಾಕ್​ಡೌನ್​ ನಿಯಮಗಳ ಅನ್ವಯ ಬಿಗ್​ ಬಾಸ್​ ಶೋಗೆ ತೆರೆ ಎಳೆಯಲಾಗುತ್ತಿದೆ. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಹಾಗಾದರೆ ಈ ಬಾರಿಯ ವಿನ್ನರ್​ ಯಾರು? ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರೇಕ್ಷಕರು ಹಲವು ಬಗೆಯಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಸದ್ಯ 11 ಜನರು ಬಿಗ್​ ಬಾಸ್​ ಮನೆಯೊಳಗೆ ಇದ್ದಾರೆ. ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್​ ಕೆಪಿ, ಮಂಜು ಪಾವಗಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ರಘು ಗೌಡ, ವೈಷ್ಣವಿ ಗೌಡ, ಚಕ್ರವರ್ತಿ ಚಂದ್ರಚೂಡ್, ಪ್ರಿಯಾಂಕಾ ತಿಮ್ಮೇಶ್ ಫಿನಾಲೆಯ ಆಸೆಯನ್ನು ಮನಸ್ಸಲ್ಲಿ ಇಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ ಹೊರ ಜಗತ್ತಿನಲ್ಲಿ ಏನಾಗಿದೆ ಎಂಬುದು ಅವರಿಗೆ ತಿಳಿದಿಲ್ಲ. ಅನಾರೋಗ್ಯದ ಕಾರಣದಿಂದ ದಿವ್ಯಾ ಉರುಡುಗ ಕೆಲವೇ ದಿನಗಳ ಹಿಂದೆ ಬಿಗ್​ ಬಾಸ್​ ಮನೆಯಿಂದ ಹೊರಬಂದಿದ್ದರು.

ಉಳಿದಿರುವ 11 ಜನರಲ್ಲಿ ಯಾರನ್ನು ವಿನ್ನರ್​ ಎಂದು ಪರಿಗಣಿಸಬೇಕು ಎಂಬ ಬಗ್ಗೆ ಪ್ರೇಕ್ಷಕರು ಭಾರಿ ಚರ್ಚೆ ಶುರು ಮಾಡಿಕೊಂಡಿದ್ದಾರೆ. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಮಧ್ಯಕ್ಕೆ ಬಂದು ಸೇರಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್​ ಮತ್ತು ಪ್ರಿಯಾಂಕಾ ತಿಮ್ಮೇಶ್​ ಅವರನ್ನು ವಿನ್ನರ್​ ಎಂದು ಪರಿಗಣಿಸುವುದು ನ್ಯಾಯ ಸಮ್ಮತವಲ್ಲ. ಅನೇಕರ ಅಭಿಪ್ರಾಯದ ಪ್ರಕಾರ ಮಂಜು ಪಾವಗಡ ಅಥವಾ ಅರವಿಂದ್​ ಕೆ.ಪಿ. ಈ ಬಾರಿಯ ವಿನ್ನರ್​ ಆಗಬೇಕಿತ್ತು. ಇವರಿಬ್ಬರ ಬಗ್ಗೆ ಪ್ರೇಕ್ಷಕರು ಹೆಚ್ಚು ಒಲವು ತೋರಿಸಿದ್ದಾರೆ.

ಬಿಗ್​ ಬಾಸ್​ ಅಂತ್ಯವಾಗಲಿದೆ ಎಂದು ಕಲರ್ಸ್​ ಕನ್ನಡ ವಾಹಿನಿ ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ಅದರಲ್ಲಿ ಮಂಜು ಪಾವಗಡ, ಅರವಿಂದ್​ ಕೆಪಿ ಮತ್ತು ಪ್ರಶಾಂತ್​ ಸಂಬರಗಿ ಬಗ್ಗೆ ಹೆಚ್ಚು ಪ್ರಸ್ತಾಪ ಆಗಿದೆ. ಈ ಮೂವರು ಕೂಡ ವಿನ್ನರ್​ ಪಟ್ಟಕ್ಕೆ ಸೂಕ್ತವಾದವರು ಎಂದು ಅವರವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ವಾದ ಮಂಡಿಸುತ್ತಿದ್ದಾರೆ. ಶಮಂತ್, ವೈಷ್ಣವಿ ಕೂಡ ಫಿನಾಲೆಯಲ್ಲಿ ಪೈಪೋಟಿ ನೀಡಬಹುದಾದಂತಹ ಸ್ಪರ್ಧಿಗಳು ಎಂಬ ಕಮೆಂಟ್​ಗಳು ಬಂದಿವೆ.

ವೀಕ್ಷಕರ ವಾದ ಏನೇ ಇರಲಿ, ವಾಹಿನಿಯ ತೀರ್ಮಾನ ಅಂತಿಮವಾಗಿರಲಿದೆ. ಮಧ್ಯದಲ್ಲೇ ಶೋ ಅಂತ್ಯವಾಗುತ್ತಿರುವುದರಿಂದ ಈ ಬಾರಿ ಯಾರಿಗೂ ವಿನ್ನರ್​ ಪಟ್ಟ ಸಿಗುವುದಿಲ್ಲ ಎಂಬುದು ಖಚಿತ. ಕೊರೊನಾ ವೈರಸ್​ ಭೀಕರವಾಗಿರುವ ಈ ಸಂದರ್ಭದಲ್ಲಿ ಶೋ ನಿಲ್ಲಿಸುತ್ತಿರುವ ತೀರ್ಮಾನಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್