AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Winner: ಬಿಗ್​ ಬಾಸ್​ ಮನೆಯೊಳಗೆ ಕೊನೆಯದಾಗಿ ಉಳಿದುಕೊಂಡ 11 ಜನರು ಫಿನಾಲೆ ಕನಸು ಕಾಣುತ್ತಿದ್ದರು. ಆದರೆ ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದರ ಸಣ್ಣ ಸುಳಿವು ಕೂಡ ಅವರಿಗೆ ಇಲ್ಲ.

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು
ಬಿಗ್ ಬಾಸ್ ಕನ್ನಡ ಸೀಸನ್ 8
ಮದನ್​ ಕುಮಾರ್​
|

Updated on: May 09, 2021 | 8:15 AM

Share

ಬಿಗ್​ ಬಾಸ್​ ಪ್ರೇಕ್ಷಕರು ಕನಸಿನಲ್ಲಿಯೂ ನಿರೀಕ್ಷಿಸಿರದ ಆ ದಿನ ಎದುರಾಗಿದೆ. ಇಂದು (ಮೇ 9) ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅಂತ್ಯವಾಗುತ್ತಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ, ಲಾಕ್​ಡೌನ್​ ನಿಯಮಗಳ ಅನ್ವಯ ಬಿಗ್​ ಬಾಸ್​ ಶೋಗೆ ತೆರೆ ಎಳೆಯಲಾಗುತ್ತಿದೆ. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಹಾಗಾದರೆ ಈ ಬಾರಿಯ ವಿನ್ನರ್​ ಯಾರು? ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರೇಕ್ಷಕರು ಹಲವು ಬಗೆಯಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಸದ್ಯ 11 ಜನರು ಬಿಗ್​ ಬಾಸ್​ ಮನೆಯೊಳಗೆ ಇದ್ದಾರೆ. ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್​ ಕೆಪಿ, ಮಂಜು ಪಾವಗಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ರಘು ಗೌಡ, ವೈಷ್ಣವಿ ಗೌಡ, ಚಕ್ರವರ್ತಿ ಚಂದ್ರಚೂಡ್, ಪ್ರಿಯಾಂಕಾ ತಿಮ್ಮೇಶ್ ಫಿನಾಲೆಯ ಆಸೆಯನ್ನು ಮನಸ್ಸಲ್ಲಿ ಇಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ ಹೊರ ಜಗತ್ತಿನಲ್ಲಿ ಏನಾಗಿದೆ ಎಂಬುದು ಅವರಿಗೆ ತಿಳಿದಿಲ್ಲ. ಅನಾರೋಗ್ಯದ ಕಾರಣದಿಂದ ದಿವ್ಯಾ ಉರುಡುಗ ಕೆಲವೇ ದಿನಗಳ ಹಿಂದೆ ಬಿಗ್​ ಬಾಸ್​ ಮನೆಯಿಂದ ಹೊರಬಂದಿದ್ದರು.

ಉಳಿದಿರುವ 11 ಜನರಲ್ಲಿ ಯಾರನ್ನು ವಿನ್ನರ್​ ಎಂದು ಪರಿಗಣಿಸಬೇಕು ಎಂಬ ಬಗ್ಗೆ ಪ್ರೇಕ್ಷಕರು ಭಾರಿ ಚರ್ಚೆ ಶುರು ಮಾಡಿಕೊಂಡಿದ್ದಾರೆ. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಮಧ್ಯಕ್ಕೆ ಬಂದು ಸೇರಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್​ ಮತ್ತು ಪ್ರಿಯಾಂಕಾ ತಿಮ್ಮೇಶ್​ ಅವರನ್ನು ವಿನ್ನರ್​ ಎಂದು ಪರಿಗಣಿಸುವುದು ನ್ಯಾಯ ಸಮ್ಮತವಲ್ಲ. ಅನೇಕರ ಅಭಿಪ್ರಾಯದ ಪ್ರಕಾರ ಮಂಜು ಪಾವಗಡ ಅಥವಾ ಅರವಿಂದ್​ ಕೆ.ಪಿ. ಈ ಬಾರಿಯ ವಿನ್ನರ್​ ಆಗಬೇಕಿತ್ತು. ಇವರಿಬ್ಬರ ಬಗ್ಗೆ ಪ್ರೇಕ್ಷಕರು ಹೆಚ್ಚು ಒಲವು ತೋರಿಸಿದ್ದಾರೆ.

ಬಿಗ್​ ಬಾಸ್​ ಅಂತ್ಯವಾಗಲಿದೆ ಎಂದು ಕಲರ್ಸ್​ ಕನ್ನಡ ವಾಹಿನಿ ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ಅದರಲ್ಲಿ ಮಂಜು ಪಾವಗಡ, ಅರವಿಂದ್​ ಕೆಪಿ ಮತ್ತು ಪ್ರಶಾಂತ್​ ಸಂಬರಗಿ ಬಗ್ಗೆ ಹೆಚ್ಚು ಪ್ರಸ್ತಾಪ ಆಗಿದೆ. ಈ ಮೂವರು ಕೂಡ ವಿನ್ನರ್​ ಪಟ್ಟಕ್ಕೆ ಸೂಕ್ತವಾದವರು ಎಂದು ಅವರವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ವಾದ ಮಂಡಿಸುತ್ತಿದ್ದಾರೆ. ಶಮಂತ್, ವೈಷ್ಣವಿ ಕೂಡ ಫಿನಾಲೆಯಲ್ಲಿ ಪೈಪೋಟಿ ನೀಡಬಹುದಾದಂತಹ ಸ್ಪರ್ಧಿಗಳು ಎಂಬ ಕಮೆಂಟ್​ಗಳು ಬಂದಿವೆ.

ವೀಕ್ಷಕರ ವಾದ ಏನೇ ಇರಲಿ, ವಾಹಿನಿಯ ತೀರ್ಮಾನ ಅಂತಿಮವಾಗಿರಲಿದೆ. ಮಧ್ಯದಲ್ಲೇ ಶೋ ಅಂತ್ಯವಾಗುತ್ತಿರುವುದರಿಂದ ಈ ಬಾರಿ ಯಾರಿಗೂ ವಿನ್ನರ್​ ಪಟ್ಟ ಸಿಗುವುದಿಲ್ಲ ಎಂಬುದು ಖಚಿತ. ಕೊರೊನಾ ವೈರಸ್​ ಭೀಕರವಾಗಿರುವ ಈ ಸಂದರ್ಭದಲ್ಲಿ ಶೋ ನಿಲ್ಲಿಸುತ್ತಿರುವ ತೀರ್ಮಾನಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು