AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಇನ್ನೂ ನಡೆಯುತ್ತಿದೆ ಬಿಗ್​ ಬಾಸ್ ಕಾರ್ಯಕ್ರಮ; ಮನೆಯೊಳಗೆ ಇದ್ದಾರೆ 9 ಸ್ಪರ್ಧಿಗಳು

Bigg Boss Finale: ಬೇರೆಲ್ಲ ರಿಯಾಲಿಟಿ ಶೋಗಳಿಗಿಂತ ಬಿಗ್​ ಬಾಸ್​ ಶೋ ನಡೆಸುವುದು ತುಂಬ ಕಷ್ಟ. ಅದರಲ್ಲೂ ಕೊರೊನಾ ವೈರಸ್​ ದಾಳಿ ಇಟ್ಟ ನಂತರ ಈ ಕಾರ್ಯಕ್ರಮ ನಡೆಸಿಕೊಡುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

Bigg Boss: ಇನ್ನೂ ನಡೆಯುತ್ತಿದೆ ಬಿಗ್​ ಬಾಸ್ ಕಾರ್ಯಕ್ರಮ; ಮನೆಯೊಳಗೆ ಇದ್ದಾರೆ 9 ಸ್ಪರ್ಧಿಗಳು
ಬಿಗ್ ಬಾಸ್
ಮದನ್​ ಕುಮಾರ್​
|

Updated on: May 16, 2021 | 12:35 PM

Share

ಕನ್ನಡದಲ್ಲಿ 7 ಸೀಸನ್​ಗಳು ಯಶಸ್ವಿಯಾಗಿ ನಡೆದುಕೊಂಡು ಬಂದ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ 8ನೇ ಸೀಸನ್​ನಲ್ಲಿ ವಿಘ್ನ ಎದುರಾಯಿತು. ಕೊರೊನಾ ವೈರಸ್​ ಕಾರಣದಿಂದ ಈ ಶೋ ನಿಲ್ಲಿಸಬೇಕಾಗಿರುವುದು ಅನಿವಾರ್ಯ ಆಯಿತು. ಹಾಗಾಗಿ ಕಿರುತೆರೆ ಪ್ರೇಕ್ಷಕರಿಗೆ ಬೇಸರ ಆಯಿತು. ಅಂತಿಮವಾಗಿ ಮನೆಯೊಳಗಿದ್ದ 11 ಮಂದಿ ಸ್ಪರ್ಧಿಗಳು ಹೊರಬರಬೇಕಾಯಿತು. ಆದರೆ ಮಲಯಾಳಂನಲ್ಲಿ ಬಿಗ್​ ಬಾಸ್​ ಕಾರ್ಯಕ್ರಮ ಇನ್ನೂ ನಡೆಯುತ್ತಿದೆ. ಕರ್ನಾಟಕಕ್ಕೆ ಹೋಲಿಸಿದರೆ ಕೇರಳದಲ್ಲಿ ಕೊವಿಡ್​ ಭೀಕರತೆ ಕಡಿಮೆ ಇರುವುದರಿಂದ ಅಲ್ಲಿ ಬಿಗ್​ ಬಾಸ್​ ಸದ್ಯಕ್ಕೆ ಮುಂದುವರಿಯುತ್ತಿದೆ.

ಮಲಯಾಳಂ ಚಿತ್ರರಂಗದ ಲೆಜೆಂಡರಿ ನಟ ಮೋಹನ್​ಲಾಲ್​ ನಡೆಸಿಕೊಡುತ್ತಿರುವ ‘ಬಿಗ್​ ಬಾಸ್​ ಮಲಯಾಳಂ ಸೀಸನ್​ 3’ ಕಾರ್ಯಕ್ರಮ ಏಷ್ಯಾನೆಟ್​ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. 2021ರ ಫೆಬ್ರವರಿ 14ರಂದು ಮೂರನೇ ಸೀಸನ್ ಶುರುವಾಯಿತು. ಕೊರೊನಾ ವೈರಸ್​ನಿಂದ ಕಾಪಾಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಎಲ್ಲ ಸ್ಪರ್ಧಿಗಳನ್ನು ಎರಡು ವಾರಗಳ ಕಾಲ ಕ್ವಾರಂಟೈನ್​ ಮಾಡಲಾಗಿತ್ತು. ಆ ಬಳಿಕವೇ ಬಿಗ್​ ಬಾಸ್​ ಮನೆಗೆ ಬಿಟ್ಟುಕೊಳ್ಳಲಾಗಿತ್ತು.

ಈಗ ಮಲಯಾಳಂ ಬಿಗ್​ ಬಾಸ್​ನಲ್ಲಿ 90 ದಿನಗಳು ಕಳೆದಿವೆ. ಪ್ರಸ್ತುತ 9 ಸ್ಪರ್ಧಿಗಳು ಹಣಾಹಣಿ ಮುಂದುವರಿಸಿದ್ದಾರೆ. ಮೇ 15ರ ಎಪಿಸೋಡ್​ನಲ್ಲಿ ನಟಿ ರಮ್ಯಾ ಪಣಿಕ್ಕರ್​ ಎಲಿಮಿನೇಟ್​ ಆಗಿದ್ದಾರೆ. ಅನೂಪ್​, ಡಿಂಪಲ್​, ಫಿರೋಜ್​ ಎ., ಮಣಿಕುಟ್ಟನ್​, ನೋಬಿ, ರಂಜಾನ್​, ರಿತು, ಸಾಯಿ, ಸೂರ್ಯ ಅವರು ಸದ್ಯ ಬಿಗ್​ ಬಾಸ್​ ಮನೆಯಲ್ಲಿದ್ದಾರೆ. ಇವರ ಪೈಕಿ ಯಾರು ಫೈನಲ್​ವರೆಗೆ ತಲುಪುತ್ತಾರೆ? ಯಾರು ಬಿಗ್​ ಬಾಸ್​ ಟ್ರೋಫಿ ಗೆಲ್ಲುತ್ತಾರೆ ಎಂಬ ಕೌತುಕ ಪ್ರೇಕ್ಷಕರಲ್ಲಿ ಮನೆ ಮಾಡಿದೆ.

ಮೊದಲಿನ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಮುಂಬರುವ ವಾರದಲ್ಲೇ ಮಲಯಾಳಂ ಬಿಗ್​ ಬಾಸ್​ ಫಿನಾಲೆ ಆಗಬೇಕಿತ್ತು. ಆದರೆ ಕೊರೊನಾ ಹಾವಳಿ ಸದ್ಯಕ್ಕೆ ಹೆಚ್ಚಿರುವುದರಿಂದ ಈ ಸಂದರ್ಭದಲ್ಲಿ ಅದ್ದೂರಿಯಾಗಿ ಫಿನಾಲೆ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗುವುದಿಲ್ಲ.

ಹಾಗಾಗಿ ಇನ್ನೂ ಮೂರು ವಾರಗಳ ಕಾಲ ಬಿಗ್ ಬಾಸ್​ ಶೋ ಮುಂದುವರಿಸಲು ಆಯೋಜಕರು ತೀರ್ಮಾನಿಸಿದ್ದಾರೆ. ಕಳೆದ ಸೀಸನ್​ನಲ್ಲಿ ಕೊರೊನಾ ಕಾರಣದಿಂದ 75ನೇ ದಿನಕ್ಕೆ ಮಲಯಾಳಂ ಬಿಗ್​ ಬಾಸ್​ ಕೊನೆಯಾಗಿತ್ತು.​

ಇದನ್ನೂ ಓದಿ:

ಬಿಗ್​ ಬಾಸ್​ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಈ ಮೂವರಿಗೆ ಪ್ರವೇಶವಿಲ್ಲ; ಶೋ ಮುಗಿದರೂ ಗುಂಪುಗಾರಿಕೆ ನಿಂತಿಲ್ಲ ಯಾಕೆ?

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್