AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಕೊವಿಡ್ ಪೂರ್ಣಗೊಂಡ ನಂತರ ಮುಂದುವರಿಯಲಿದೆ ಬಿಗ್​ ಬಾಸ್​; ವಾಹಿನಿಯಿಂದಲೇ ಅಧಿಕೃತ ಮಾಹಿತಿ

‘ಬಿಗ್​ ಬಾಸ್’​ ಮನೆಯಲ್ಲಿರುವ 6 ತಂತ್ರಜ್ಞರಿಗೆ ಕೊವಿಡ್​ ಪಾಸಿಟಿವ್​ ಆಗಿತ್ತು ಎನ್ನಲಾಗಿದೆ. ಅಲ್ಲದೆ, ಲಾಕ್​ಡೌನ್​ ಮಧ್ಯೆಯೂ ರಾಜಾರೋಷವಾಗಿ ಶೂಟಿಂಗ್​ ಮಾಡಲಾಗುತ್ತಿತ್ತು. ಹೀಗಾಗಿ, ಅಧಿಕಾರಿಗಳು ಬಿಗ್​ ಬಾಸ್​ ಮನೆ ಒಳಗೆ ತೆರಳಿ ಶೋ ಅರ್ಧಕ್ಕೆ ನಿಲ್ಲಿಸಿದ್ದರು.

Bigg Boss: ಕೊವಿಡ್ ಪೂರ್ಣಗೊಂಡ ನಂತರ ಮುಂದುವರಿಯಲಿದೆ ಬಿಗ್​ ಬಾಸ್​; ವಾಹಿನಿಯಿಂದಲೇ ಅಧಿಕೃತ ಮಾಹಿತಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: May 25, 2021 | 5:16 PM

Share

ಕೊವಿಡ್ ಕಾರಣಕ್ಕೆ ಕನ್ನಡ ‘ಬಿಗ್​ ಬಾಸ್​ ಸೀಸನ್​-8’ 71 ದಿನಕ್ಕೆ ನಿಂತರೆ, ಮಲಯಾಳಂ ‘ಬಿಗ್​ ಬಾಸ್​ ಸೀಸನ್​-3’ 95ನೇ ದಿನಕ್ಕೆ ಅಂತ್ಯವಾಗಿದೆ. ಈಗ ಕೇಳಿಬರುತ್ತಿರುವ ಲೇಟೆಸ್ಟ್​ ಮಾಹಿತಿ ಏನೆಂದರೆ ಮಲಯಾಳಂ ‘ಬಿಗ್​ ಬಾಸ್​ ಸೀಸನ್​-3’ ಮತ್ತೆ ಆರಂಭಗೊಳ್ಳಲಿದೆಯಂತೆ. ಈ ಬಗ್ಗೆ ವಾಹಿನಿಯೇ ಅಧಿಕೃತ ಮಾಹಿತಿ ನೀಡಿದೆ.

ಮಲಯಾಳಂ ‘ಬಿಗ್​ ಬಾಸ್’​ ಮನೆಯಲ್ಲಿರುವ 6 ತಂತ್ರಜ್ಞರಿಗೆ ಕೊವಿಡ್​ ಪಾಸಿಟಿವ್​ ಆಗಿತ್ತು ಎನ್ನಲಾಗಿದೆ. ಅಲ್ಲದೆ, ಲಾಕ್​ಡೌನ್​ ಮಧ್ಯೆಯೂ ರಾಜಾರೋಷವಾಗಿ ಶೂಟಿಂಗ್​ ಮಾಡಲಾಗುತ್ತಿತ್ತು. ಹೀಗಾಗಿ, ಅಧಿಕಾರಿಗಳು ಬಿಗ್​ ಬಾಸ್​ ಮನೆ ಒಳಗೆ ತೆರಳಿ ಶೋ ಅರ್ಧಕ್ಕೆ ನಿಲ್ಲಿಸಿದ್ದರು. ಮನೆ ಸೀಜ್​ ಕೂಡ ಮಾಡಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು.

ಮಲಯಾಳಂ ಬಿಗ್​ ಬಾಸ್​ 95ನೇ ದಿನಕ್ಕೆ ನಿಂತಿತ್ತು. ಇನ್ನು, ಕೇವಲ 5 ದಿನ ನಡೆದಿದ್ದರೆ ಶೋ ಪೂರ್ಣಗೊಳ್ಳುತ್ತಿತ್ತು. ಆದರೆ, ಅಧಿಕಾರಿಗಳು ಇದಕ್ಕೆ ಅವಕಾಶ ನೀಡಲೇ ಇಲ್ಲ. ಈ ಶೋ ಅರ್ಧಕ್ಕೆ ನಿಂತಿರುವುದಕ್ಕೆ ಮಲಯಾಳಂ ಕಿರುತೆರೆ ವೀಕ್ಷಕರು ತುಂಬಾನೇ ಬೇಸರಗೊಂಡಿದ್ದರು. ಈಗ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಮಲಯಾಳಂನಲ್ಲಿ ಬಿಗ್​ ಬಾಸ್​ ಪ್ರಸಾರ ಮಾಡುತ್ತಿರುವ ವಾಹಿನಿಯವರು ಈ ಬಗ್ಗೆ ಅಧಿಕೃತ ಪ್ರೆಸ್​ನೋಟ್​ ರಿಲೀಸ್​ ಮಾಡಿದ್ದಾರೆ. ಕೊವಿಡ್​-19 ಕಾರಣದಿಂದ ಬಿಗ್​ ಬಾಸ್​ ನಿಲ್ಲಿಸಲಾಗಿದೆ. ಕೊವಿಡ್ ​ಸಾಂಕ್ರಾಮಿಕ ಮುಗಿದ ಮೇಲೆ ಮತ್ತೆ ಶೋ ಆರಂಭಿಸುತ್ತೇವೆ ಎಂದು ವಾಹಿನಿ ಹೇಳಿದೆ. ಮತ್ತೆ ಬಿಗ್​ ಬಾಸ್​ ಸೀಸನ್​-3 ಆರಂಭವಾದರೆ ಸುಮಾರು ಎರಡು ವಾರಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

ತಮಿಳುನಾಡಿನಲ್ಲಿ ಮಲಯಾಳಂ ಬಿಗ್​ ಬಾಸ್​ ಶೂಟಿಂಗ್​ ನಡೆಸಲಾಗುತ್ತಿತ್ತು. ತಮಿಳುನಾಡಿನಲ್ಲಿ ಕೊವಿಡ್​ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ, ಅಲ್ಲಿನ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಸಿನಿಮಾ, ಧಾರಾವಾಹಿ ಶೂಟಿಂಗ್​ ಸೇರಿ ಸಾಕಷ್ಟು ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿದೆ. ಆದಾಗ್ಯೂ, ಮಲಯಾಳಂ ಬಿಗ್​ ಬಾಸ್​ ಸೀಸನ್​ 3 ಶೂಟಿಂಗ್​ ನಡೆಸಲಾಗುತ್ತಿತ್ತು. ಹೀಗಾಗಿ, ಅಧಿಕಾರಿಗಳು ಬಿಗ್​ ಬಾಸ್​ ಮನೆಗೆ ತೆರಳಿ ಅದನ್ನು ಸೀಜ್​ ಮಾಡಿದ್ದರು.

ಇನ್ನು, ಕನ್ನಡ ಬಿಗ್​ ಬಾಸ್​ ಸೀಸನ್​-8 ಕೂಡ ಅರ್ಧಕ್ಕೆ ನಿಂತಿದೆ. ಇದು ಕೂಡ ಮತ್ತೆ ಮುಂದುವರಿಯಲಿದೆಯೇ ಎಂಬ ಕುತೂಹಲ ವೀಕ್ಷಕರದ್ದು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಜೀವನದಲ್ಲಿ ಶುಭಾ ಪೂಂಜಾ ಕಳೆದುಕೊಂಡಿದ್ದ ಅಮೂಲ್ಯ ವ್ಯಕ್ತಿಗಳನ್ನು ಮರಳಿ ಕೊಡಿಸಿದ ಬಿಗ್​ ಬಾಸ್​; ಯಾರವರು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು